ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರನ್ನು ಬೆಂಗಳೂರಿನ ರಿಂಗ್ ರಸ್ತೆಗೆ ಇಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪುನೀತ್ ಅವರಿಗೆ ಈಗಾಗಲೇ ಸರಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗಿದೆ. ಅವರ ಸಾಮಾಜಿಕ ಕೆಲಸಗಳನ್ನು ಗುರುತಿಸಿ ಹೆಚ್ಚೆಚ್ಚು ಗೌರವವನ್ನು ನೀಡಲಾಗುತ್ತಿದೆ. ಈ ಸಲ ಬೆಂಗಳೂರಿನ ರಿಂಗ್ ರಸ್ತೆಗೆ ಅವರ ಹೆಸರನ್ನು ಇಡಲು ತೀರ್ಮಾನಿಸಲಾಗಿದೆ’ ಎಂದರು.
ಬೆಂಗಳೂರಿನ ಮೈಸೂರು ರಸ್ತೆಯಿಂದ ನಾಯಂಡಳ್ಳಿ ಜಂಕ್ಷನ್ ಬನ್ನೇರುಘಟ್ಟ ರಸ್ತೆವರೆಗೂ ಪುನೀತ್ ರಾಜ್ ಕುಮಾರ್ ರಸ್ತೆ ಅಂತ ನಾಮಕರಣ ಮಾಡುತ್ತಿದ್ದು, 12 ಕಿಲೋ ಮೀಟರ್ ರಸ್ತೆಯ ಡಬಲ್ ರೋಡ್ ಅದಾಗಿದೆ. ಅಷ್ಟು ಉದ್ದದ ರಸ್ತೆಗೆ ಈವರೆಗೂ ಯಾರ ಹೆಸರನ್ನೂ ಇಟ್ಟಿಲ್ಲ ಎನ್ನುವುದು ವಿಶೇಷ. ನಾಳೆ ಬೆಂಗಳೂರಿನ ಪದ್ಮನಾಭನಗರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಸರಿನ ನಾಮಫಲಕ ಉದ್ಘಾಟನೆ ಮಾಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬ ಭಾಗಿಯಾಗಲಿದೆ. ಅಲ್ಲದೇ, ಸಿನಿಮಾ ರಂಗದ ಅನೇಕ ಗಣ್ಯರು ಉಪಸ್ಥಿತಿ ಇರಲಿದ್ದಾರೆ ಎಂದು ತಿಳಿಸಲಾಗಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…