ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರನ್ನು ಬೆಂಗಳೂರಿನ ರಿಂಗ್ ರಸ್ತೆಗೆ ಇಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪುನೀತ್ ಅವರಿಗೆ ಈಗಾಗಲೇ ಸರಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗಿದೆ. ಅವರ ಸಾಮಾಜಿಕ ಕೆಲಸಗಳನ್ನು ಗುರುತಿಸಿ ಹೆಚ್ಚೆಚ್ಚು ಗೌರವವನ್ನು ನೀಡಲಾಗುತ್ತಿದೆ. ಈ ಸಲ ಬೆಂಗಳೂರಿನ ರಿಂಗ್ ರಸ್ತೆಗೆ ಅವರ ಹೆಸರನ್ನು ಇಡಲು ತೀರ್ಮಾನಿಸಲಾಗಿದೆ’ ಎಂದರು.
ಬೆಂಗಳೂರಿನ ಮೈಸೂರು ರಸ್ತೆಯಿಂದ ನಾಯಂಡಳ್ಳಿ ಜಂಕ್ಷನ್ ಬನ್ನೇರುಘಟ್ಟ ರಸ್ತೆವರೆಗೂ ಪುನೀತ್ ರಾಜ್ ಕುಮಾರ್ ರಸ್ತೆ ಅಂತ ನಾಮಕರಣ ಮಾಡುತ್ತಿದ್ದು, 12 ಕಿಲೋ ಮೀಟರ್ ರಸ್ತೆಯ ಡಬಲ್ ರೋಡ್ ಅದಾಗಿದೆ. ಅಷ್ಟು ಉದ್ದದ ರಸ್ತೆಗೆ ಈವರೆಗೂ ಯಾರ ಹೆಸರನ್ನೂ ಇಟ್ಟಿಲ್ಲ ಎನ್ನುವುದು ವಿಶೇಷ. ನಾಳೆ ಬೆಂಗಳೂರಿನ ಪದ್ಮನಾಭನಗರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಸರಿನ ನಾಮಫಲಕ ಉದ್ಘಾಟನೆ ಮಾಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬ ಭಾಗಿಯಾಗಲಿದೆ. ಅಲ್ಲದೇ, ಸಿನಿಮಾ ರಂಗದ ಅನೇಕ ಗಣ್ಯರು ಉಪಸ್ಥಿತಿ ಇರಲಿದ್ದಾರೆ ಎಂದು ತಿಳಿಸಲಾಗಿದೆ.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…