ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರನ್ನು ಬೆಂಗಳೂರಿನ ರಿಂಗ್ ರಸ್ತೆಗೆ ಇಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪುನೀತ್ ಅವರಿಗೆ ಈಗಾಗಲೇ ಸರಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗಿದೆ. ಅವರ ಸಾಮಾಜಿಕ ಕೆಲಸಗಳನ್ನು ಗುರುತಿಸಿ ಹೆಚ್ಚೆಚ್ಚು ಗೌರವವನ್ನು ನೀಡಲಾಗುತ್ತಿದೆ. ಈ ಸಲ ಬೆಂಗಳೂರಿನ ರಿಂಗ್ ರಸ್ತೆಗೆ ಅವರ ಹೆಸರನ್ನು ಇಡಲು ತೀರ್ಮಾನಿಸಲಾಗಿದೆ’ ಎಂದರು.
ಬೆಂಗಳೂರಿನ ಮೈಸೂರು ರಸ್ತೆಯಿಂದ ನಾಯಂಡಳ್ಳಿ ಜಂಕ್ಷನ್ ಬನ್ನೇರುಘಟ್ಟ ರಸ್ತೆವರೆಗೂ ಪುನೀತ್ ರಾಜ್ ಕುಮಾರ್ ರಸ್ತೆ ಅಂತ ನಾಮಕರಣ ಮಾಡುತ್ತಿದ್ದು, 12 ಕಿಲೋ ಮೀಟರ್ ರಸ್ತೆಯ ಡಬಲ್ ರೋಡ್ ಅದಾಗಿದೆ. ಅಷ್ಟು ಉದ್ದದ ರಸ್ತೆಗೆ ಈವರೆಗೂ ಯಾರ ಹೆಸರನ್ನೂ ಇಟ್ಟಿಲ್ಲ ಎನ್ನುವುದು ವಿಶೇಷ. ನಾಳೆ ಬೆಂಗಳೂರಿನ ಪದ್ಮನಾಭನಗರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಸರಿನ ನಾಮಫಲಕ ಉದ್ಘಾಟನೆ ಮಾಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬ ಭಾಗಿಯಾಗಲಿದೆ. ಅಲ್ಲದೇ, ಸಿನಿಮಾ ರಂಗದ ಅನೇಕ ಗಣ್ಯರು ಉಪಸ್ಥಿತಿ ಇರಲಿದ್ದಾರೆ ಎಂದು ತಿಳಿಸಲಾಗಿದೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…