ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರನ್ನು ಬೆಂಗಳೂರಿನ ರಿಂಗ್ ರಸ್ತೆಗೆ ಇಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪುನೀತ್ ಅವರಿಗೆ ಈಗಾಗಲೇ ಸರಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗಿದೆ. ಅವರ ಸಾಮಾಜಿಕ ಕೆಲಸಗಳನ್ನು ಗುರುತಿಸಿ ಹೆಚ್ಚೆಚ್ಚು ಗೌರವವನ್ನು ನೀಡಲಾಗುತ್ತಿದೆ. ಈ ಸಲ ಬೆಂಗಳೂರಿನ ರಿಂಗ್ ರಸ್ತೆಗೆ ಅವರ ಹೆಸರನ್ನು ಇಡಲು ತೀರ್ಮಾನಿಸಲಾಗಿದೆ’ ಎಂದರು.
ಬೆಂಗಳೂರಿನ ಮೈಸೂರು ರಸ್ತೆಯಿಂದ ನಾಯಂಡಳ್ಳಿ ಜಂಕ್ಷನ್ ಬನ್ನೇರುಘಟ್ಟ ರಸ್ತೆವರೆಗೂ ಪುನೀತ್ ರಾಜ್ ಕುಮಾರ್ ರಸ್ತೆ ಅಂತ ನಾಮಕರಣ ಮಾಡುತ್ತಿದ್ದು, 12 ಕಿಲೋ ಮೀಟರ್ ರಸ್ತೆಯ ಡಬಲ್ ರೋಡ್ ಅದಾಗಿದೆ. ಅಷ್ಟು ಉದ್ದದ ರಸ್ತೆಗೆ ಈವರೆಗೂ ಯಾರ ಹೆಸರನ್ನೂ ಇಟ್ಟಿಲ್ಲ ಎನ್ನುವುದು ವಿಶೇಷ. ನಾಳೆ ಬೆಂಗಳೂರಿನ ಪದ್ಮನಾಭನಗರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಸರಿನ ನಾಮಫಲಕ ಉದ್ಘಾಟನೆ ಮಾಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬ ಭಾಗಿಯಾಗಲಿದೆ. ಅಲ್ಲದೇ, ಸಿನಿಮಾ ರಂಗದ ಅನೇಕ ಗಣ್ಯರು ಉಪಸ್ಥಿತಿ ಇರಲಿದ್ದಾರೆ ಎಂದು ತಿಳಿಸಲಾಗಿದೆ.
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…