ಚಿತ್ರ ಮಂಜರಿ

ʼಗಂಧದ ಗುಡಿʼ ಸಾಕ್ಷಾಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲು ಪುನೀತ್‌ ಅಭಿಮಾನಿಗಳ ಒತ್ತಾಯ

ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’ ಬಿಡುಗಡೆಗೆ ಸಜ್ಜಾಗಿದೆ. ಈ ಸಾಕ್ಷ್ಯಚಿತ್ರವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಇದು ಪುನೀತ್​ ರಾಜ್​ಕುಮಾರ್​ ಅವರ ಕೊನೆಯ ಚಿತ್ರ. ಹಾಗಾಗಿ ಇದನ್ನು ವಿಶೇಷ ರೀತಿಯಲ್ಲಿ ಬರಮಾಡಿಕೊಳ್ಳಲು ಅಪ್ಪು ಅಭಿಮಾನಿಗಳು ಕಾದಿದ್ದಾರೆ.

ಅಕ್ಟೋಬರ್​ 28ರಂದು ‘ಗಂಧದ ಗುಡಿ’ ರಿಲೀಸ್​ ಆಗಲಿದೆ. ಇದಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ನೀಡಬೇಕು ಎಂದು ಫ್ಯಾನ್ಸ್​ ಒತ್ತಾಯಿಸುತ್ತಿದ್ದಾರೆ. ಆ ಮೂಲಕ ಹೆಚ್ಚು ಜನರನ್ನು ಈ ಡಾಕ್ಯುಮೆಂಟರಿ ತಲುಪಲಿ ಎಂಬುದು ಅಭಿಮಾನಿಗಳ ಆಶಯ. ಅದಕ್ಕೂ ಮುನ್ನ ಅಕ್ಟೋಬರ್​ 21ರಂದು ‘ಪುನೀತ ಪರ್ವ’ ಹೆಸರಿನಲ್ಲಿ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯಲಿದೆ. ಅದಕ್ಕಾಗಿ ಅಭಿಮಾನಿಗಳು ಭಾರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಪ್ರೀ-ರಿಲೀಸ್​ ಕಾರ್ಯಕ್ರಮವನ್ನು ತುಂಬ ಅದ್ದೂರಿಯಾಗಿ ಮಾಡಬೇಕು ಎಂದು ಫ್ಯಾನ್ಸ್​ ರೆಡಿ ಆಗಿದ್ದಾರೆ. ಈ ಕುರಿತು ಮಾಹಿತಿ ನೀಡಲು ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಪುನೀತ್ ರಾಜ್​ಕುಮಾರ್​ ಸಮಾಧಿ ಬಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ‘ಪುನೀತ​ ಪರ್ವ’ ಕಾರ್ಯಕ್ರಮಕ್ಕಾಗಿ ತಮ್ಮ ಪ್ಲ್ಯಾನ್ ಏನು ಎಂಬುದನ್ನು ವಿವರಿಸಿದ್ದಾರೆ.

ಕರ್ನಾಟಕದ ಮೂಲೆ ಮೂಲೆಗಳಿಂದ ಅಪ್ಪು ಅಭಿಮಾನಿಗಳು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಬರಲಿದ್ದಾರೆ. 5 ಲಕ್ಷಕ್ಕೂ ಅಧಿಕ ಜನರು ಆಗಮಿಸುವ ಸಾಧ್ಯತೆ ಇದೆ. ಎಲ್ಲರಿಗೂ ಊಟ ಮತ್ತು ವಸತಿ ಸೌಕರ್ಯ ಕಲ್ಪಿಸಲು ಪ್ಲ್ಯಾನ್​ ನಡೆಯುತ್ತಿದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲೇ ಆಂಬ್ಯುಲೆನ್ಸ್​ಗಳ ವ್ಯವಸ್ಥೆ ಮಾಡಲಾಗುತ್ತಿದೆ. ನವೆಂಬರ್​ 1ರಂದು ಎಲ್ಲೆಡೆ ಕನ್ನಡದ ಧ್ವಜ ಹಾರಾಡಬೇಕು. ಅಪ್ಪು ಭಾವಚಿತ್ರ ಕೂಡ ರಾರಾಜಿಸುವಂತಾಗಲಿ ಎಂದು ಅಪ್ಪು ಅಭಿಮಾನಿಗಳು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

‘ಪುನೀತ್​ ಪರ್ವ’ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ಅನೇಕ ಗಣ್ಯರು ಆಗಮಿಸಲಿದ್ದಾರೆ. ಅನೇಕ ಸೂಪರ್​ ಸ್ಟಾರ್​ಗಳಿಗೆ ಈಗಾಗಲೇ ಆಮಂತ್ರಣ ಪತ್ರಿಕೆ ತಲುಪಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧ್ಯಕ್ಷತೆ ವಹಿಸಿಕೊಳ್ಳಬೇಕು ಎಂದು ಡಾ. ರಾಜ್​ಕುಮಾರ್​ ಕುಟುಂಬದವರು ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಸಿಎಂ ಅವರನ್ನು ಭೇಟಿ ಮಾಡಿ, ಆಮಂತ್ರಣ ಪತ್ರಿಕೆ ಹಾಗೂ ಮನವಿ ಪತ್ರವನ್ನು ನೀಡಲಾಯಿತು.

ಕರ್ನಾಟಕದ ಅರಣ್ಯ ಸಂಪತ್ತು ಹಾಗೂ ವನ್ಯಜೀವಿಗಳ ಕುರಿತು ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಮೂಡಿಬಂದಿದೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ ಕಂಡು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಅನೇಕ ಗಣ್ಯರು ಕೂಡ ಈ ಬಗ್ಗೆ ತಮ್ಮ ಪ್ರತಿಕ್ರಿಯೆ ತಿಳಿಸಿದ್ದಾರೆ.

andolana

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

4 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

7 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

10 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

10 hours ago