ಚಿತ್ರ ಮಂಜರಿ

ಪುನೀತ್‌ 50 ʼಅಪ್ಪುʼ ಮರು ಬಿಡುಗಡೆ

ಪುನೀತ್ ರಾಜ್‌ಕುಮಾರ್ ಇದ್ದಿದ್ದರೆ, ದೊಡ್ಡ ಸಂಭ್ರಮ ಮನೆ ಮಾಡಿರುತ್ತಿತ್ತು. ಮಾರ್ಚ್ ೧೭ಕ್ಕೆ ಅವರು ೫೦ ಮುಗಿಸಿ,೫೧ನೇ ವರ್ಷಕ್ಕೆಕಾಲಿಡುತ್ತಿದ್ದರು. ಪುನೀತ್‌ ಇಲ್ಲದ ಈ ಹೊತ್ತಿನಲ್ಲಿಅವರ ಹುಟ್ಟುಹಬ್ಬವನ್ನು ಆಚರಿಸುವುದಕ್ಕೆ ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ತಯಾರಿ ನಡೆಸಿದ್ದಾರೆ.

ಈಗಾಗಲೇ ಪುನೀತ್ ಅವರ ೫೦ನೇ ಹುಟ್ಟುಹಬ್ಬದ ಅಂಗವಾಗಿ ಭಾರತೀಯ ಅಂಚೆ ಇಲಾಖೆ ಅವರಿಗೆ ವಿಶೇಷ ಗೌರವ ಸಲ್ಲಿಸಿದೆ. ಬೆಂಗಳೂರು ಕೇಂದ್ರ ಅಂಚೆ ಮಹಾ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿಅಪ್ಪು ಸ್ಮರಣಾರ್ಥವಿಶೇಷ ಪಿಕ್ಚರ್ ಪೋಸ್ಟ್‌ಕಾರ್ಡ್ ಬಿಡುಗಡೆ ಮಾಡಲಾಯಿತು. ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಈ ಪೋಸ್ ಕಾರ್ಡ್ ಬಿಡುಗಡೆ ಮಾಡಿದರು. ಪುನೀತ್ ಅವರ ಭಾವಚಿತ್ರ ಮತ್ತು ಅವರ ಸಿನಿಪಯಣವನ್ನು ಬಿಂಬಿಸುವ ಚಿತ್ರಗಳು ಈ ಪೋಸ್ಟ್‌ಕಾರ್ಡ್‌ನಲ್ಲಿವೆ.

ಇದಲ್ಲದೆ, ಹುಟ್ಟುಹಬ್ಬದ ಪ್ರಯುಕ್ತ ಇಂದು ಪುನೀತ್ ನಾಯಕನಾಗಿ ನಟಿಸಿದ ಮೊದಲ ಚಿತ್ರ ‘ಅಪ್ಪು’ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಕಳೆದ ವರ್ಷ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಜಾಕಿ’ ಮರುಬಿಡುಗಡೆಯಾಗಿತ್ತು.ಈ ವರ್ಷ ‘ಅಪ್ಪು’ ಚಿತ್ರವನ್ನು ಮರುಬಿಡುಗಡೆ ಮಾಡಬೇಕು ಎಂದು ಅಭಿಮಾನಿಗಳು ಆಗಲೇ ಮನವಿ ಸಲ್ಲಿಸಿದ್ದರು.

ಅದರಪ್ರಕಾರ, ಇಂದು ‘ಅಪ್ಪು’ ಬಿಡುಗಡೆಯಾಗುತ್ತಿದೆ. ರಾಜ್ಯಾದ್ಯಂತ ಇನ್ನೂರಕ್ಕೂ ಹೆಚ್ಚು  ಚಿತ್ರಮಂದಿರಗಳಲ್ಲಿ ತೆರೆ ಕಾಣುತ್ತಿದೆ. ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಸ್ವಾಗತ ಮಾಡಲು ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ. ಬೆಳಿಗ್ಗೆ ೬.೩೦ಕ್ಕೆ ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಮೊದಲ ಪ್ರದರ್ಶನ ಶುರುವಾಗಲಿದೆ.ಮಿಕ್ಕಂತೆ, ಪುನೀತ್ ಸ್ಮಾರಕದಲ್ಲಿ ಅಭಿಮಾನಿಗಳು ಎಂದಿನಂತೆ ಸೇರಲಿದ್ದಾರೆ. ಬೆಳಿಗ್ಗೆ ಕುಟುಂಬದವರು ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

2 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

3 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

3 hours ago

ಸಿಎಂ ಡಿಕೆಶಿ ಹಾಗೂ ಸಚಿವ ಲಕ್ಷ್ಮಣ್ ಸವದಿ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

3 hours ago

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

9 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

10 hours ago