ಚಿತ್ರ ಮಂಜರಿ

ಆಸ್ಕರ್‌ ಪ್ರಶಸ್ತಿಗೆ ಆಯ್ಕೆಯಾಗಿದ್ದ ಚೆಲ್ಲೋ ಶೋ ಸಿನಿಮಾ ಚಿತ್ರದ ಬಾಲ ನಟ ರಾಹುಲ್‌ ನಿಧನ

ಈ ಬಾರಿ ಭಾರತದಿಂದ ಆಸ್ಕರ್ ಅಂಗಳಕ್ಕೆ ಅಧಿಕೃತ ಎಂಟ್ರಿ ಕೊಟ್ಟಿರುವ ಚೆಲ್ಲೋ ಶೋ ಸಿನಿಮಾದ ಬಾಲನಟ ರಾಹುಲ್ ಕೊಲಿ ನಿಧನರಾಗಿದ್ದಾರೆ. ಆಸ್ಕರ್ ಗೆ ಎಂಟ್ರಿ ಕೊಟ್ಟ ಸಂಭ್ರಮದಲ್ಲಿದ್ದ ಚೆಲ್ಲೋ ಶೋ ತಂಡಕ್ಕೆ ರಾಹುಲ್ ನಿಧನ ಆಘಾತ ತಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ರಾಹುಲ್ ಇಂದು (ಅಕ್ಟೋಬರ್ 11) ಅಹಮದಾಬಾದ್ ನಲ್ಲಿ ಇಹಲೋಕತ್ಯಜಿಸಿದರು. ಈ ನೋವಿನ ಸುದ್ದಿ ತಿಳಿದು ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. ಚೆಲ್ಲೋ ಶೋ ಸಿನಿಮಾದಲ್ಲಿ 10 ವರ್ಷದ ರಾಹುಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಬಿಡುಗಡೆಯಾಗುವ ಮೊದಲೇ ರಾಹುಲ್ ಬಾರದ ಲೋಕಕ್ಕೆ ಹೋಗಿರುವುದು ದುರಂತ.

ಮೂಲಗಳ ಪ್ರಕಾರ ರಾಹುಲ್​ ರಕ್ತ ವಾಂತಿ ಮಾಡಿಕೊಂಡಿದ್ದ. ನಂತರ ಜ್ವರ ಕೂಡ ಬಂದಿತ್ತು. ಬಳಿಕ ಆತ ಕೊನೆಯುಸಿರೆಳೆದ. ಆತನ ನಿಧನದಿಂದ ಇಡೀ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ರಾಹುಲ್ ನಟನೆಯ ಚೆಲ್ಲೋ ಶೋ ಸಿನಿಮಾ ಅಕ್ಟೋಬರ್ 14ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನವೇ ರಾಹುಲ್​ ಕೊಲಿ ನಿಧನ ಹೊಂದಿದ್ದಾನೆ.

ಮಗನನ್ನು ಕಳೆದುಕೊಂಡ ನೋವಿನಲ್ಲೇ ರಾಹುಲ್​ ಕೊಲಿ ಕುಟುಂಬದವರು ಚೆಲ್ಲೋ ಶೋ ಚಿತ್ರ ನೋಡುವುದಾಗಿ ತಿಳಿಸಿದ್ದಾರೆ. ರಾಹುಲ್​ ತಂದೆ ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್​ ಆದ ಬಳಿಕ ನಮ್ಮ ಬದುಕು ಬದಲಾಗುತ್ತದೆ ಎಂದು ಮಗ ಹೇಳಿದ್ದ ಎಂದು ರಾಹುಲ್ ತಂದೆ ಮಗನ ಮಾತು ನೆನಪಿಸಿಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಅಂದಹಾಗೆ ಈ ಸಿನಿಮಾದಲ್ಲಿ ರಾಹುಲ್, ಮನು ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ನಾಯಕನ ಕ್ಲೋಸ್ ಪ್ರೆಂಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಚೆಲ್ಲೋ ಶೋ ಸಿನಿಮಾಗೆ ಪ್ಯಾನ್​ ನಳಿನ್​ ನಿರ್ದೇಶನ ಮಾಡಿದ್ದಾರೆ. ಚೆಲ್ಲೋ ಶೋ ಎಂದರೆ ಕೊನೆಯ ಸಿನಿಮಾ ಶೋ ಎಂದರ್ಥ. ನಿರ್ದೇಶಕರ ಬಾಲ್ಯದ ಅನುಭವಗಳನ್ನೇ ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಸಿನಿಮಾ ಬಗ್ಗೆ ಅಪಾರ ಆಸಕ್ತಿ ಹೊಂದಿರುವ 9ರ ಪ್ರಾಯದ ಬಾಲಕನ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಈಗಾಗಲೇ ಅನೇಕ ಚಿತ್ರೋತ್ಸವಗಳಲ್ಲಿ ಚೆಲ್ಲೋ ಶೋ ಸಿನಿಮಾ ಪ್ರದರ್ಶನ ಕಂಡಿದೆ.

ಅಂದಹಾಗೆ ಈ ಸಿನಿಮಾವನ್ನು ಲಾಕ್ ಡೌನ್‌ಗೂ ಮೊದಲೇ ಚಿತ್ರೀಕರಣ ಮಾಡಲಾಗಿದೆ. ಹಳ್ಳಿ ಮತ್ತು ರೈಲ್ವೇ ಜಂಕ್ಷನ್​ನಲ್ಲಿ ಈ ಸಿನಿಮಾದ ಶೂಟಿಂಗ್​ ನಡೆದಿದೆ. ಸ್ಥಳೀಯ ಬಾಲಕರೇ ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ. ಸದ್ಯ ರಿಲೀಸ್ ನ ಖುಷಿಯಲ್ಲಿದ್ದ ಸಿನಿಮಾತಂಡಕ್ಕೆ ರಾಹುಲ್ ಹಠಾತ್ ನಿಧನ ತೀವ್ರ ದುಃಖ ತಂದಿದೆ.

andolana

Recent Posts

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

24 mins ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

31 mins ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

34 mins ago

ಗುರುಪುರದ ಬಳಿ ಮತ್ತೆ ಹುಲಿ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…

1 hour ago

ಜಗತ್ತಿಗೆ ಸ್ಪರ್ಧೆ ನೀಡುತ್ತಿದ್ದ ಬೆಂಗಳೂರಿನ ಮೂಲಸೌಕರ್ಯ ಹಾಳಾಗಿದೆ : ಎಚ್‌ಡಿಕೆ

ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…

1 hour ago

ಮೈಸೂರು | ಹೊಸ ವರ್ಷದ ಸಂಭ್ರಮಾಚರಣೆಗ ಸಿದ್ದವಾಗ್ತಿದೆ 2 ಲಕ್ಷ ಲಡ್ಡು.!

ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು…

2 hours ago