ಚಿತ್ರ ಮಂಜರಿ

ಆಸ್ಕರ್‌ ಪ್ರಶಸ್ತಿಗೆ ಆಯ್ಕೆಯಾಗಿದ್ದ ಚೆಲ್ಲೋ ಶೋ ಸಿನಿಮಾ ಚಿತ್ರದ ಬಾಲ ನಟ ರಾಹುಲ್‌ ನಿಧನ

ಈ ಬಾರಿ ಭಾರತದಿಂದ ಆಸ್ಕರ್ ಅಂಗಳಕ್ಕೆ ಅಧಿಕೃತ ಎಂಟ್ರಿ ಕೊಟ್ಟಿರುವ ಚೆಲ್ಲೋ ಶೋ ಸಿನಿಮಾದ ಬಾಲನಟ ರಾಹುಲ್ ಕೊಲಿ ನಿಧನರಾಗಿದ್ದಾರೆ. ಆಸ್ಕರ್ ಗೆ ಎಂಟ್ರಿ ಕೊಟ್ಟ ಸಂಭ್ರಮದಲ್ಲಿದ್ದ ಚೆಲ್ಲೋ ಶೋ ತಂಡಕ್ಕೆ ರಾಹುಲ್ ನಿಧನ ಆಘಾತ ತಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ರಾಹುಲ್ ಇಂದು (ಅಕ್ಟೋಬರ್ 11) ಅಹಮದಾಬಾದ್ ನಲ್ಲಿ ಇಹಲೋಕತ್ಯಜಿಸಿದರು. ಈ ನೋವಿನ ಸುದ್ದಿ ತಿಳಿದು ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. ಚೆಲ್ಲೋ ಶೋ ಸಿನಿಮಾದಲ್ಲಿ 10 ವರ್ಷದ ರಾಹುಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಬಿಡುಗಡೆಯಾಗುವ ಮೊದಲೇ ರಾಹುಲ್ ಬಾರದ ಲೋಕಕ್ಕೆ ಹೋಗಿರುವುದು ದುರಂತ.

ಮೂಲಗಳ ಪ್ರಕಾರ ರಾಹುಲ್​ ರಕ್ತ ವಾಂತಿ ಮಾಡಿಕೊಂಡಿದ್ದ. ನಂತರ ಜ್ವರ ಕೂಡ ಬಂದಿತ್ತು. ಬಳಿಕ ಆತ ಕೊನೆಯುಸಿರೆಳೆದ. ಆತನ ನಿಧನದಿಂದ ಇಡೀ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ರಾಹುಲ್ ನಟನೆಯ ಚೆಲ್ಲೋ ಶೋ ಸಿನಿಮಾ ಅಕ್ಟೋಬರ್ 14ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನವೇ ರಾಹುಲ್​ ಕೊಲಿ ನಿಧನ ಹೊಂದಿದ್ದಾನೆ.

ಮಗನನ್ನು ಕಳೆದುಕೊಂಡ ನೋವಿನಲ್ಲೇ ರಾಹುಲ್​ ಕೊಲಿ ಕುಟುಂಬದವರು ಚೆಲ್ಲೋ ಶೋ ಚಿತ್ರ ನೋಡುವುದಾಗಿ ತಿಳಿಸಿದ್ದಾರೆ. ರಾಹುಲ್​ ತಂದೆ ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್​ ಆದ ಬಳಿಕ ನಮ್ಮ ಬದುಕು ಬದಲಾಗುತ್ತದೆ ಎಂದು ಮಗ ಹೇಳಿದ್ದ ಎಂದು ರಾಹುಲ್ ತಂದೆ ಮಗನ ಮಾತು ನೆನಪಿಸಿಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಅಂದಹಾಗೆ ಈ ಸಿನಿಮಾದಲ್ಲಿ ರಾಹುಲ್, ಮನು ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ನಾಯಕನ ಕ್ಲೋಸ್ ಪ್ರೆಂಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಚೆಲ್ಲೋ ಶೋ ಸಿನಿಮಾಗೆ ಪ್ಯಾನ್​ ನಳಿನ್​ ನಿರ್ದೇಶನ ಮಾಡಿದ್ದಾರೆ. ಚೆಲ್ಲೋ ಶೋ ಎಂದರೆ ಕೊನೆಯ ಸಿನಿಮಾ ಶೋ ಎಂದರ್ಥ. ನಿರ್ದೇಶಕರ ಬಾಲ್ಯದ ಅನುಭವಗಳನ್ನೇ ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಸಿನಿಮಾ ಬಗ್ಗೆ ಅಪಾರ ಆಸಕ್ತಿ ಹೊಂದಿರುವ 9ರ ಪ್ರಾಯದ ಬಾಲಕನ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಈಗಾಗಲೇ ಅನೇಕ ಚಿತ್ರೋತ್ಸವಗಳಲ್ಲಿ ಚೆಲ್ಲೋ ಶೋ ಸಿನಿಮಾ ಪ್ರದರ್ಶನ ಕಂಡಿದೆ.

ಅಂದಹಾಗೆ ಈ ಸಿನಿಮಾವನ್ನು ಲಾಕ್ ಡೌನ್‌ಗೂ ಮೊದಲೇ ಚಿತ್ರೀಕರಣ ಮಾಡಲಾಗಿದೆ. ಹಳ್ಳಿ ಮತ್ತು ರೈಲ್ವೇ ಜಂಕ್ಷನ್​ನಲ್ಲಿ ಈ ಸಿನಿಮಾದ ಶೂಟಿಂಗ್​ ನಡೆದಿದೆ. ಸ್ಥಳೀಯ ಬಾಲಕರೇ ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ. ಸದ್ಯ ರಿಲೀಸ್ ನ ಖುಷಿಯಲ್ಲಿದ್ದ ಸಿನಿಮಾತಂಡಕ್ಕೆ ರಾಹುಲ್ ಹಠಾತ್ ನಿಧನ ತೀವ್ರ ದುಃಖ ತಂದಿದೆ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago