ಚಿತ್ರ ಮಂಜರಿ

ಆಸ್ಕರ್‌ ಪ್ರಶಸ್ತಿಗೆ ಆಯ್ಕೆಯಾಗಿದ್ದ ಚೆಲ್ಲೋ ಶೋ ಸಿನಿಮಾ ಚಿತ್ರದ ಬಾಲ ನಟ ರಾಹುಲ್‌ ನಿಧನ

ಈ ಬಾರಿ ಭಾರತದಿಂದ ಆಸ್ಕರ್ ಅಂಗಳಕ್ಕೆ ಅಧಿಕೃತ ಎಂಟ್ರಿ ಕೊಟ್ಟಿರುವ ಚೆಲ್ಲೋ ಶೋ ಸಿನಿಮಾದ ಬಾಲನಟ ರಾಹುಲ್ ಕೊಲಿ ನಿಧನರಾಗಿದ್ದಾರೆ. ಆಸ್ಕರ್ ಗೆ ಎಂಟ್ರಿ ಕೊಟ್ಟ ಸಂಭ್ರಮದಲ್ಲಿದ್ದ ಚೆಲ್ಲೋ ಶೋ ತಂಡಕ್ಕೆ ರಾಹುಲ್ ನಿಧನ ಆಘಾತ ತಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ರಾಹುಲ್ ಇಂದು (ಅಕ್ಟೋಬರ್ 11) ಅಹಮದಾಬಾದ್ ನಲ್ಲಿ ಇಹಲೋಕತ್ಯಜಿಸಿದರು. ಈ ನೋವಿನ ಸುದ್ದಿ ತಿಳಿದು ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. ಚೆಲ್ಲೋ ಶೋ ಸಿನಿಮಾದಲ್ಲಿ 10 ವರ್ಷದ ರಾಹುಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಬಿಡುಗಡೆಯಾಗುವ ಮೊದಲೇ ರಾಹುಲ್ ಬಾರದ ಲೋಕಕ್ಕೆ ಹೋಗಿರುವುದು ದುರಂತ.

ಮೂಲಗಳ ಪ್ರಕಾರ ರಾಹುಲ್​ ರಕ್ತ ವಾಂತಿ ಮಾಡಿಕೊಂಡಿದ್ದ. ನಂತರ ಜ್ವರ ಕೂಡ ಬಂದಿತ್ತು. ಬಳಿಕ ಆತ ಕೊನೆಯುಸಿರೆಳೆದ. ಆತನ ನಿಧನದಿಂದ ಇಡೀ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ರಾಹುಲ್ ನಟನೆಯ ಚೆಲ್ಲೋ ಶೋ ಸಿನಿಮಾ ಅಕ್ಟೋಬರ್ 14ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನವೇ ರಾಹುಲ್​ ಕೊಲಿ ನಿಧನ ಹೊಂದಿದ್ದಾನೆ.

ಮಗನನ್ನು ಕಳೆದುಕೊಂಡ ನೋವಿನಲ್ಲೇ ರಾಹುಲ್​ ಕೊಲಿ ಕುಟುಂಬದವರು ಚೆಲ್ಲೋ ಶೋ ಚಿತ್ರ ನೋಡುವುದಾಗಿ ತಿಳಿಸಿದ್ದಾರೆ. ರಾಹುಲ್​ ತಂದೆ ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್​ ಆದ ಬಳಿಕ ನಮ್ಮ ಬದುಕು ಬದಲಾಗುತ್ತದೆ ಎಂದು ಮಗ ಹೇಳಿದ್ದ ಎಂದು ರಾಹುಲ್ ತಂದೆ ಮಗನ ಮಾತು ನೆನಪಿಸಿಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಅಂದಹಾಗೆ ಈ ಸಿನಿಮಾದಲ್ಲಿ ರಾಹುಲ್, ಮನು ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ನಾಯಕನ ಕ್ಲೋಸ್ ಪ್ರೆಂಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಚೆಲ್ಲೋ ಶೋ ಸಿನಿಮಾಗೆ ಪ್ಯಾನ್​ ನಳಿನ್​ ನಿರ್ದೇಶನ ಮಾಡಿದ್ದಾರೆ. ಚೆಲ್ಲೋ ಶೋ ಎಂದರೆ ಕೊನೆಯ ಸಿನಿಮಾ ಶೋ ಎಂದರ್ಥ. ನಿರ್ದೇಶಕರ ಬಾಲ್ಯದ ಅನುಭವಗಳನ್ನೇ ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಸಿನಿಮಾ ಬಗ್ಗೆ ಅಪಾರ ಆಸಕ್ತಿ ಹೊಂದಿರುವ 9ರ ಪ್ರಾಯದ ಬಾಲಕನ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಈಗಾಗಲೇ ಅನೇಕ ಚಿತ್ರೋತ್ಸವಗಳಲ್ಲಿ ಚೆಲ್ಲೋ ಶೋ ಸಿನಿಮಾ ಪ್ರದರ್ಶನ ಕಂಡಿದೆ.

ಅಂದಹಾಗೆ ಈ ಸಿನಿಮಾವನ್ನು ಲಾಕ್ ಡೌನ್‌ಗೂ ಮೊದಲೇ ಚಿತ್ರೀಕರಣ ಮಾಡಲಾಗಿದೆ. ಹಳ್ಳಿ ಮತ್ತು ರೈಲ್ವೇ ಜಂಕ್ಷನ್​ನಲ್ಲಿ ಈ ಸಿನಿಮಾದ ಶೂಟಿಂಗ್​ ನಡೆದಿದೆ. ಸ್ಥಳೀಯ ಬಾಲಕರೇ ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ. ಸದ್ಯ ರಿಲೀಸ್ ನ ಖುಷಿಯಲ್ಲಿದ್ದ ಸಿನಿಮಾತಂಡಕ್ಕೆ ರಾಹುಲ್ ಹಠಾತ್ ನಿಧನ ತೀವ್ರ ದುಃಖ ತಂದಿದೆ.

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

3 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

3 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

3 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

3 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

3 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago