ಚಿತ್ರ ಮಂಜರಿ

ಆಸ್ಕರ್‌ ಪ್ರಶಸ್ತಿಗೆ ಆಯ್ಕೆಯಾಗಿದ್ದ ಚೆಲ್ಲೋ ಶೋ ಸಿನಿಮಾ ಚಿತ್ರದ ಬಾಲ ನಟ ರಾಹುಲ್‌ ನಿಧನ

ಈ ಬಾರಿ ಭಾರತದಿಂದ ಆಸ್ಕರ್ ಅಂಗಳಕ್ಕೆ ಅಧಿಕೃತ ಎಂಟ್ರಿ ಕೊಟ್ಟಿರುವ ಚೆಲ್ಲೋ ಶೋ ಸಿನಿಮಾದ ಬಾಲನಟ ರಾಹುಲ್ ಕೊಲಿ ನಿಧನರಾಗಿದ್ದಾರೆ. ಆಸ್ಕರ್ ಗೆ ಎಂಟ್ರಿ ಕೊಟ್ಟ ಸಂಭ್ರಮದಲ್ಲಿದ್ದ ಚೆಲ್ಲೋ ಶೋ ತಂಡಕ್ಕೆ ರಾಹುಲ್ ನಿಧನ ಆಘಾತ ತಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ರಾಹುಲ್ ಇಂದು (ಅಕ್ಟೋಬರ್ 11) ಅಹಮದಾಬಾದ್ ನಲ್ಲಿ ಇಹಲೋಕತ್ಯಜಿಸಿದರು. ಈ ನೋವಿನ ಸುದ್ದಿ ತಿಳಿದು ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. ಚೆಲ್ಲೋ ಶೋ ಸಿನಿಮಾದಲ್ಲಿ 10 ವರ್ಷದ ರಾಹುಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಬಿಡುಗಡೆಯಾಗುವ ಮೊದಲೇ ರಾಹುಲ್ ಬಾರದ ಲೋಕಕ್ಕೆ ಹೋಗಿರುವುದು ದುರಂತ.

ಮೂಲಗಳ ಪ್ರಕಾರ ರಾಹುಲ್​ ರಕ್ತ ವಾಂತಿ ಮಾಡಿಕೊಂಡಿದ್ದ. ನಂತರ ಜ್ವರ ಕೂಡ ಬಂದಿತ್ತು. ಬಳಿಕ ಆತ ಕೊನೆಯುಸಿರೆಳೆದ. ಆತನ ನಿಧನದಿಂದ ಇಡೀ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ರಾಹುಲ್ ನಟನೆಯ ಚೆಲ್ಲೋ ಶೋ ಸಿನಿಮಾ ಅಕ್ಟೋಬರ್ 14ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನವೇ ರಾಹುಲ್​ ಕೊಲಿ ನಿಧನ ಹೊಂದಿದ್ದಾನೆ.

ಮಗನನ್ನು ಕಳೆದುಕೊಂಡ ನೋವಿನಲ್ಲೇ ರಾಹುಲ್​ ಕೊಲಿ ಕುಟುಂಬದವರು ಚೆಲ್ಲೋ ಶೋ ಚಿತ್ರ ನೋಡುವುದಾಗಿ ತಿಳಿಸಿದ್ದಾರೆ. ರಾಹುಲ್​ ತಂದೆ ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್​ ಆದ ಬಳಿಕ ನಮ್ಮ ಬದುಕು ಬದಲಾಗುತ್ತದೆ ಎಂದು ಮಗ ಹೇಳಿದ್ದ ಎಂದು ರಾಹುಲ್ ತಂದೆ ಮಗನ ಮಾತು ನೆನಪಿಸಿಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಅಂದಹಾಗೆ ಈ ಸಿನಿಮಾದಲ್ಲಿ ರಾಹುಲ್, ಮನು ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ನಾಯಕನ ಕ್ಲೋಸ್ ಪ್ರೆಂಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಚೆಲ್ಲೋ ಶೋ ಸಿನಿಮಾಗೆ ಪ್ಯಾನ್​ ನಳಿನ್​ ನಿರ್ದೇಶನ ಮಾಡಿದ್ದಾರೆ. ಚೆಲ್ಲೋ ಶೋ ಎಂದರೆ ಕೊನೆಯ ಸಿನಿಮಾ ಶೋ ಎಂದರ್ಥ. ನಿರ್ದೇಶಕರ ಬಾಲ್ಯದ ಅನುಭವಗಳನ್ನೇ ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಸಿನಿಮಾ ಬಗ್ಗೆ ಅಪಾರ ಆಸಕ್ತಿ ಹೊಂದಿರುವ 9ರ ಪ್ರಾಯದ ಬಾಲಕನ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಈಗಾಗಲೇ ಅನೇಕ ಚಿತ್ರೋತ್ಸವಗಳಲ್ಲಿ ಚೆಲ್ಲೋ ಶೋ ಸಿನಿಮಾ ಪ್ರದರ್ಶನ ಕಂಡಿದೆ.

ಅಂದಹಾಗೆ ಈ ಸಿನಿಮಾವನ್ನು ಲಾಕ್ ಡೌನ್‌ಗೂ ಮೊದಲೇ ಚಿತ್ರೀಕರಣ ಮಾಡಲಾಗಿದೆ. ಹಳ್ಳಿ ಮತ್ತು ರೈಲ್ವೇ ಜಂಕ್ಷನ್​ನಲ್ಲಿ ಈ ಸಿನಿಮಾದ ಶೂಟಿಂಗ್​ ನಡೆದಿದೆ. ಸ್ಥಳೀಯ ಬಾಲಕರೇ ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ. ಸದ್ಯ ರಿಲೀಸ್ ನ ಖುಷಿಯಲ್ಲಿದ್ದ ಸಿನಿಮಾತಂಡಕ್ಕೆ ರಾಹುಲ್ ಹಠಾತ್ ನಿಧನ ತೀವ್ರ ದುಃಖ ತಂದಿದೆ.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

9 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

11 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago