ಚಿತ್ರ ಮಂಜರಿ

ನವರಸ ನಾಯಕ ಜಗ್ಗೇಶ್​, ರಚಿತಾ ರಾಮ್​ಗೆ ಗುರುವೈಭವೋತ್ಸವ ಪ್ರಶಸ್ತಿ

ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ‘ ಗುರುವೈಭವೋತ್ಸವ’ ವಿಜಭೃಣೆಯಿಂದ ನಡೆಯುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುತ್ತಿದೆ. ತುಂಗಾ ತೀರದಲ್ಲಿ ನೆಲೆಸಿರುವ ಶ್ರೀರಾಘವೇಂದ್ರ ಸ್ವಾಮಿಗಳು 402ನೇ ಪಟ್ಟಾಭಿಷೇಕೋತ್ಸವ ಮತ್ತು 428ನೇ ವರ್ಧಂತಿ ಉತ್ಸವ ನಡೆಯುತ್ತಿದ್ದು, ಫೆಬ್ರವರಿ 21ರಿಂದ ಆರಂಭ ಗುರುವೈಭೋತ್ಸವ ಮೂರನೇ ದಿನವಾದ ನಿನ್ನೆ ಅದ್ಧೂರಿಯಾಗಿ ಜರುಗಿತ್ತು.

ರಚಿತಾ ರಾಮ್​ಗೆ ಗುರುವೈಭೋತ್ಸವ ಪ್ರಶಸ್ತಿಬೆಳಿಗ್ಗೆ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದವನಕ್ಕೆ ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಪೂಜೆಗಳು ನೇರವೇರಿಸಿದ ನಂತರದಲ್ಲಿ, ನವರತ್ನ ಖಚಿತ ಕವಚದಿಂದ ವಿವಿಧ ಬಣ್ಣಗಳ ಹೂಗಳಿಂದ ಅಲಂಕಾರಿಸಲಾಗಿತ್ತು. ಇದಾದ ನಂತರದಲ್ಲಿ ಶ್ರೀಮಠದ ಪೀಠಾಧಿಪತಿ ಸುಭುದೇಂಧ್ರ ತೀರ್ಥರು ಮೂಲ ರಾಮದೇವರ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪೂಜೆ- ಪುನಸ್ಕಾರ ನೇರವೇರಿಸಿದರು.

ಸಂಜೆ ಮಠದ ಆವರಣದ ಮುಂಭಾಗದ ಯೋಗೇಂದ್ರ ಸಭಾಮಂಟಪದಲ್ಲಿ ಸಂಗೀತ ಕಾರ್ಯಕ್ರಮ ಜರುಗಿತು. ಅಲ್ಲದೇ ಸ್ಯಾಂಡಲ್​ವುಡ್​ನ ಡಿಂಪಲ್ ಕ್ವೀನ್ ಎಂದು ಫೇಮಸ್ ಆಗಿರುವ ರಚಿತ್ ರಾಮ್​ಗೆ ಗುರುವೈಭವೋತ್ಸವ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಜೊತೆಗೆ ನವರಸನಾಯಕ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್, ಆಂಧ್ರ ಶಾಸಕ ಕಟಸನಿ ರಾಮಭೂಪಾಲ್, ಬಳ್ಳಾರಿಯ ಶ್ರೀರಾಘವೇಂದ್ರ ಅಸ್ಟತೋತ್ತರ ಸಂಘದವರಿಗೆ ಸನ್ಮಾನಿಸಿ ಗೌರವಿಸಲಾಯಿತು.

andolanait

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

42 mins ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

47 mins ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

4 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

4 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

4 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

4 hours ago