ನಟಿ ಪೂಜಾ ಗಾಂಧಿ ಕಳೆದ ಕೆಲ ದಿನಗಳ ಹಿಂದೆ ರಮ್ಯಾ ಅವರನ್ನು ಇಷ್ಟ ಪಡಲು ಕಾರಣ ಏನೆಂಬುದನ್ನು ಹೇಳಿಕೊಂಡಿದ್ದರು. ಇದೀಗ ಸಂದರ್ಶನವೊಂದರಲ್ಲಿ ಮತ್ತೆ ಮೋಹಕ ತಾರೆ ಬಗ್ಗೆ ಮಾತನಾಡಿರುವ ಮಳೆ ಹುಡುಗಿ ಪೂಜಾ ಗಾಂಧಿ, ನನಗೆ ರಮ್ಯಾ ಮೇಲೆ ತುಂಬಾ ಗೌರವ ಇದೆ. ಕರ್ನಾಟಕದಲ್ಲಿ ಮಾತ್ರವಲ್ಲ, ಇಡೀ ಭಾರತದಲ್ಲಿ ರಮ್ಯಾ ಅವರು ಒಳ್ಳೆಯ ಹೆಸರು ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ರಮ್ಯಾ ಅವರು ಬಹಳಾ ನಿಷ್ಠೇ ಹಾಗೂ ಶ್ರಮದಿಂದ ಸಾಧನೆ ಮಾಡಿದ್ದಾರೆ. ನಾನು ರಾಯಚೂರಿನಲ್ಲಿ ಚುನಾವಣೆಗೆ ನಿಂತಾಗ ಹೀನಾಯವಾಗಿ ಸೋತಿದ್ದೆ. ಆಗ ರಮ್ಯಾ ಅವರು ನನ್ನ ಪರವಾಗಿ ನಿಂತಿದ್ದರು. ನನಗಾಗಿ ಟ್ವೀಟ್ ಮಾಡಿದ್ದರು. ನಾನು ಮತ್ತು ರಮ್ಯಾ ಭೇಟಿಯಾದಾಗಲೆಲ್ಲಾ ತುಂಬಾ ಪ್ರೀತಿ ಹಾಗೂ ಗೌರವದಿಂದ ಮಾತನಾಡಿಸುತ್ತಾರೆ ಎಂದಿದ್ದಾರೆ.
ನಟಿ ಪೂಜಾ ಗಾಂಧಿಯವರು ನವೆಂಬರ್ 29 ರಂದು ಕವೆಂಪು ಅವರ ಆಶಯದ ಮಂತ್ರ ಮಾಂಗಲ್ಯದ ಮೂಲಕ ಉದ್ಯಮಿ ವಿಜಯ್ ಘೋರ್ಪಡೆ ಜೊತೆ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.
ಉತ್ತರ ಪ್ರದೇಶ ಮೂಲದವರಾದ ಪೂಜಾ ಗಾಂಧಿಯವರಿಗೆ ಸ್ಯಾಂಡಲ್ವುಡ್ ಗೆ ಕಾಲಿಟ್ಟಾಗ ಕನ್ನಡ ಸರಿಯಾಗಿ ಬರುತ್ತಿರಲಿಲ್ಲ ಆಗ ವಿಜಯ್ ಅವರೇ ಪೂಜಾ ಗಾಂಧಿಗೆ ಕನ್ನಡ ಕಲಿಸಿದ್ದರು. ಇದೀಗ ಮುಂಗಾರು ಮಳೆ ಬೆಡಗಿ ಕನ್ನಡ ಕಲಿಸಿದ ಗುರುವನ್ನೇ ವರಿಸಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಬದುಕು ಕಟ್ಟಿಕೊಂಡಿರುವ ಪೂಜಾ ಗಾಂಧಿ ತಮ್ಮ ಮಾತೃ ಭಾಷೆ ಹಿಂದಿ ಆದರೂ ಕೂಡ ಅವರು ಕನ್ನಡ ಭಾಷೆಯ ಮೇಲೆ ಅಪಾರವಾದ ಒಲವನ್ನು ಹೊಂದಿದ್ದಾರೆ. ಕರ್ನಾಟಕದಲ್ಲಿ ಇರುವ ಪರ ಭಾಷಿಕರೂ ಕೂಡ ಕನ್ನಡವನ್ನು ಕಲಿಯಬೇಕು ಎಂದು ಹೇಳುವ ಪೂಜಾ ಗಾಂಧಿ ಸ್ಪಷ್ಟವಾಗಿ ಕನ್ನಡ ಮಾತನಾಡಲು ಕಲಿತಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…