ಚಿತ್ರ ಮಂಜರಿ

ಫಿಲ್ಮ್‌ ಕ್ರಿಟಿಕ್ಸ್‌ ಸರ್ಕಲ್‌ ಅವಾರ್ಡ್‌ ಮುಡಿಗೇರಿಸಿಕೊಂಡ ರಾಜಮೌಳಿ

ಟಾಲಿವುಡ್ ಖ್ಯಾತ ನಿರ್ದೇಶಕ ಜಕ್ಕಣ್ಣ ಎಂದೇ ಖ್ಯಾತಿಗಳಿಸಿರುವ ಎಸ್ ಎಸ್ ರಾಜಮೌಳಿ ಸಾರಥ್ಯದಲ್ಲಿ ಬಂದ ಆರ್ ಆರ್ ಆರ್ ಸಿನಿಮಾದ ಹವಾ ಇನ್ನೂ ಕಡಿಮೆ ಆಗಿಲ್ಲ. ಟಾಲಿವುಡ್ ಸ್ಟಾರ್ ಕಲಾವಿದರಾದ ರಾಮ್ ಚರಣ್ ಮತ್ತು ಜೂ ಎನ್ ಟಿ ಆರ್ ನಟನೆಯ ಆರ್ ಆರ್ ಆರ್ ಸಿನಿಮಾ ರಿಲೀಸ್ ಆಗಿ ತಿಂಗಳಗಳೇ ಆಗಿವೆ. ಇನ್ನೂ ಕೂಡ ಆರ್ ಆರ್ ಆರ್ ಸದ್ದು ಮಾಡುತ್ತಿದ್ದಾರೆ. ದೇಶ-ವಿದೇಶದಲ್ಲಿ ರಾಜಮೌಳಿ ಸಿನಿಮಾ ಅಬ್ಬರಿಸುತ್ತಿದೆ. ಅನೇಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಇದೀಗ ರಾಜಮೌ ಮತ್ತೊಂದು ಪ್ರಶಸ್ತಿ ಗೆದ್ದು ಬೀಗಿದ್ದಾರೆ. ನ್ಯೂಯಾರ್ಕ್ ಕ್ರಿಟಿಕ್ಸ್ ಸರ್ಕಲ್ ಅವಾರ್ಡ್‌ನಲ್ಲಿ ರಾಜಮೌಳಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ಹಾಲಿವುಡ್‌ನ ಘಟಾನುಘಟಿ ನಿರ್ದೇಶಕರ ಜೊತೆ ಸ್ಪರ್ಧಿಸಿ ರಾಜಮೌಳಿ ಈ ಪ್ರಶಸ್ತಿ ಗೆದ್ದಿದ್ದಾರೆ. ಆರ್ ಆರ್ ಆರ್ ನಿರ್ದೇಶಕರ ವಿರುದ್ಧ ಸ್ವೀವನ್ ಸ್ಪೀಲ್ಬರ್ಗ್, ಡರೆನ್ ಅರೋನೊಫ್ಸ್ಕಿ, ಸರಾ ಪೊಲ್ಲಿ, ಗಿನಾ ಪ್ರಿನ್ಸ್-ಬ್ಲೈಥ್ವುಡ್ ಸ್ಪರ್ಧೆಯಲ್ಲಿದ್ದರು. ಎಲ್ಲರನ್ನೂ ಹಿಂದಿಕ್ಕಿ ರಾಜಮೌಳಿ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ. RRR ಭಾರತೀಯ ಸಿನಿಮಾರಂಗದಲ್ಲಿ ಸದ್ದು ಮಾಡಿದ ಸಿನಿಮಾ. ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿರುವ ಈ ಸಿನಿಮಾ ಭಾರತ ಮಾತ್ರವಲ್ಲದೇ ಬೇರೆ ಬೇರೆ ದೇಶಗಳಲ್ಲೂ ಭರ್ಜರಿ ಪ್ರದರ್ಶನ ಕಂಡಿತ್ತು. ಅತೀ ಹೆಚ್ಚು ಕಲೆಕ್ಷನ್ ಮಾಡಿರುವ ಭಾರತೀಯ ಸಿನಿಮಾಗಳ ಲಿಸ್ಟ್‌ನಲ್ಲಿರುವ ಆರ್ ಆರ್ ಆರ್ ತೆಲುಗು ಜೊತೆಗೆ ತಮಿಳು, ಕನ್ನಡ, ಮಲಯಾಳಂ, ಹಿಂದಿ ಸೇರಿದಂತೆ ಅನೇಕ ಭಾಷೆಯಲ್ಲಿ ರಿಲೀಸ್ ಆಗಿದೆ.

ಇತ್ತೀಚಿಗಷ್ಟೆ ಆರ್ ಆರ್ ಆರ್ ಸಿನಿಮಾ ಜಪಾನ್‌ನಲ್ಲಿ ರಿಲೀಸ್ ಆಗಿದ್ದು ಅಲ್ಲಿಯೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಇಡೀ ತಂಡ ಜಪಾನ್ ಪ್ರವಾಸಕ್ಕೆ ತೆರಳಿತ್ತು. ಸಿನಿಮಾ ಪ್ರಚಾರ ಮಾಡಿ ಜಪಾನ್ ಅಭಿಮಾನಿಗಳಿಂದ ಪ್ರೀತಿ ಗಿಟ್ಟಿಸಿಕೊಂಡಿದ್ದರು. ಸದ್ಯ ಆರ್ ಆರ್ ಆರ್ ಸಿನಿಮಾ ಆಸ್ಕರ್ ಅವಾರ್ಡ್‌ಗಾಗಿ ಕಾಯುತ್ತಿದೆ. ಆರ್ ಆರ್ ಆರ್ ಸಿನಿಮಾ ಆಸ್ಕರ್‌ಗೆ ಎಂಟ್ರಿ ಕೊಟ್ಟಿದ್ದು ಪ್ರಶಸ್ತಿ ಗೆದ್ದು ಬೀಗುತ್ತಾ ಎಂದು ಕಾದು ನೋಡಬೇಕಿದೆ.

ಸೋಲಿಲ್ಲದ ಸರದಾರ ರಾಜಮೌಳಿ ಬಾಹುಬಲಿ ಸಿನಿಮಾ ಬಳಿಕ ಆರ್ ಆರ್ ಆರ್ ಮೂಲಕ ಅಭಿಮಾನಿಗಳ ಮುಂದೆ ಬಂದರು. ಆರ್ ಆರ್ ಆರ್ ಸಿನಿಮಾ ಕೂಡ ದೊಡ್ಡ ಮಟ್ಟದಲ್ಲಿ ಯಸ್ಸಸ್  ಕಂಡಿತು. ಸ್ವಾತಂತ್ರ್ಯಾ ಹೋರಾಟಗಾರರಾಗಿದ್ದ ಅಲ್ಲೂರಿ ಸೀತರಾಮ ರಾಜು ಮತ್ತು ಕೊಮರಾಮ್ ಭೀಮ್ ಅವರ ಬಗ್ಗೆ ಇರುವ ಸಿನಿಮಾ ಇದಾಗಿದೆ. ಮಾರ್ಚ್ ತಿಂಗಳಲ್ಲಿ ರಿಲೀಸ್ ಆಗಿದ್ದ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಬರೊಬ್ಬರಿ 1200 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

andolana

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

2 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

2 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

2 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

3 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

3 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

3 hours ago