ಚಿತ್ರ ಮಂಜರಿ

ಫಿಲ್ಮ್‌ ಕ್ರಿಟಿಕ್ಸ್‌ ಸರ್ಕಲ್‌ ಅವಾರ್ಡ್‌ ಮುಡಿಗೇರಿಸಿಕೊಂಡ ರಾಜಮೌಳಿ

ಟಾಲಿವುಡ್ ಖ್ಯಾತ ನಿರ್ದೇಶಕ ಜಕ್ಕಣ್ಣ ಎಂದೇ ಖ್ಯಾತಿಗಳಿಸಿರುವ ಎಸ್ ಎಸ್ ರಾಜಮೌಳಿ ಸಾರಥ್ಯದಲ್ಲಿ ಬಂದ ಆರ್ ಆರ್ ಆರ್ ಸಿನಿಮಾದ ಹವಾ ಇನ್ನೂ ಕಡಿಮೆ ಆಗಿಲ್ಲ. ಟಾಲಿವುಡ್ ಸ್ಟಾರ್ ಕಲಾವಿದರಾದ ರಾಮ್ ಚರಣ್ ಮತ್ತು ಜೂ ಎನ್ ಟಿ ಆರ್ ನಟನೆಯ ಆರ್ ಆರ್ ಆರ್ ಸಿನಿಮಾ ರಿಲೀಸ್ ಆಗಿ ತಿಂಗಳಗಳೇ ಆಗಿವೆ. ಇನ್ನೂ ಕೂಡ ಆರ್ ಆರ್ ಆರ್ ಸದ್ದು ಮಾಡುತ್ತಿದ್ದಾರೆ. ದೇಶ-ವಿದೇಶದಲ್ಲಿ ರಾಜಮೌಳಿ ಸಿನಿಮಾ ಅಬ್ಬರಿಸುತ್ತಿದೆ. ಅನೇಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಇದೀಗ ರಾಜಮೌ ಮತ್ತೊಂದು ಪ್ರಶಸ್ತಿ ಗೆದ್ದು ಬೀಗಿದ್ದಾರೆ. ನ್ಯೂಯಾರ್ಕ್ ಕ್ರಿಟಿಕ್ಸ್ ಸರ್ಕಲ್ ಅವಾರ್ಡ್‌ನಲ್ಲಿ ರಾಜಮೌಳಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ಹಾಲಿವುಡ್‌ನ ಘಟಾನುಘಟಿ ನಿರ್ದೇಶಕರ ಜೊತೆ ಸ್ಪರ್ಧಿಸಿ ರಾಜಮೌಳಿ ಈ ಪ್ರಶಸ್ತಿ ಗೆದ್ದಿದ್ದಾರೆ. ಆರ್ ಆರ್ ಆರ್ ನಿರ್ದೇಶಕರ ವಿರುದ್ಧ ಸ್ವೀವನ್ ಸ್ಪೀಲ್ಬರ್ಗ್, ಡರೆನ್ ಅರೋನೊಫ್ಸ್ಕಿ, ಸರಾ ಪೊಲ್ಲಿ, ಗಿನಾ ಪ್ರಿನ್ಸ್-ಬ್ಲೈಥ್ವುಡ್ ಸ್ಪರ್ಧೆಯಲ್ಲಿದ್ದರು. ಎಲ್ಲರನ್ನೂ ಹಿಂದಿಕ್ಕಿ ರಾಜಮೌಳಿ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ. RRR ಭಾರತೀಯ ಸಿನಿಮಾರಂಗದಲ್ಲಿ ಸದ್ದು ಮಾಡಿದ ಸಿನಿಮಾ. ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿರುವ ಈ ಸಿನಿಮಾ ಭಾರತ ಮಾತ್ರವಲ್ಲದೇ ಬೇರೆ ಬೇರೆ ದೇಶಗಳಲ್ಲೂ ಭರ್ಜರಿ ಪ್ರದರ್ಶನ ಕಂಡಿತ್ತು. ಅತೀ ಹೆಚ್ಚು ಕಲೆಕ್ಷನ್ ಮಾಡಿರುವ ಭಾರತೀಯ ಸಿನಿಮಾಗಳ ಲಿಸ್ಟ್‌ನಲ್ಲಿರುವ ಆರ್ ಆರ್ ಆರ್ ತೆಲುಗು ಜೊತೆಗೆ ತಮಿಳು, ಕನ್ನಡ, ಮಲಯಾಳಂ, ಹಿಂದಿ ಸೇರಿದಂತೆ ಅನೇಕ ಭಾಷೆಯಲ್ಲಿ ರಿಲೀಸ್ ಆಗಿದೆ.

ಇತ್ತೀಚಿಗಷ್ಟೆ ಆರ್ ಆರ್ ಆರ್ ಸಿನಿಮಾ ಜಪಾನ್‌ನಲ್ಲಿ ರಿಲೀಸ್ ಆಗಿದ್ದು ಅಲ್ಲಿಯೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಇಡೀ ತಂಡ ಜಪಾನ್ ಪ್ರವಾಸಕ್ಕೆ ತೆರಳಿತ್ತು. ಸಿನಿಮಾ ಪ್ರಚಾರ ಮಾಡಿ ಜಪಾನ್ ಅಭಿಮಾನಿಗಳಿಂದ ಪ್ರೀತಿ ಗಿಟ್ಟಿಸಿಕೊಂಡಿದ್ದರು. ಸದ್ಯ ಆರ್ ಆರ್ ಆರ್ ಸಿನಿಮಾ ಆಸ್ಕರ್ ಅವಾರ್ಡ್‌ಗಾಗಿ ಕಾಯುತ್ತಿದೆ. ಆರ್ ಆರ್ ಆರ್ ಸಿನಿಮಾ ಆಸ್ಕರ್‌ಗೆ ಎಂಟ್ರಿ ಕೊಟ್ಟಿದ್ದು ಪ್ರಶಸ್ತಿ ಗೆದ್ದು ಬೀಗುತ್ತಾ ಎಂದು ಕಾದು ನೋಡಬೇಕಿದೆ.

ಸೋಲಿಲ್ಲದ ಸರದಾರ ರಾಜಮೌಳಿ ಬಾಹುಬಲಿ ಸಿನಿಮಾ ಬಳಿಕ ಆರ್ ಆರ್ ಆರ್ ಮೂಲಕ ಅಭಿಮಾನಿಗಳ ಮುಂದೆ ಬಂದರು. ಆರ್ ಆರ್ ಆರ್ ಸಿನಿಮಾ ಕೂಡ ದೊಡ್ಡ ಮಟ್ಟದಲ್ಲಿ ಯಸ್ಸಸ್  ಕಂಡಿತು. ಸ್ವಾತಂತ್ರ್ಯಾ ಹೋರಾಟಗಾರರಾಗಿದ್ದ ಅಲ್ಲೂರಿ ಸೀತರಾಮ ರಾಜು ಮತ್ತು ಕೊಮರಾಮ್ ಭೀಮ್ ಅವರ ಬಗ್ಗೆ ಇರುವ ಸಿನಿಮಾ ಇದಾಗಿದೆ. ಮಾರ್ಚ್ ತಿಂಗಳಲ್ಲಿ ರಿಲೀಸ್ ಆಗಿದ್ದ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಬರೊಬ್ಬರಿ 1200 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

andolana

Recent Posts

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

2 hours ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

2 hours ago

ಓದುಗರ ಪತ್ರ: ಕಸಾಪ ಭ್ರಷ್ಟರ ಕೈಗೆ ಸಿಗದಂತಾಗಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…

2 hours ago

ಓದುಗರ ಪತ್ರ: ಸ್ವಾಗತಾರ್ಹ ಸದಾಶಯ!

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…

2 hours ago

ಗ್ರಾಮೀಣ ಪ್ರತಿಭೆ ನಿತಿಲ್ ಈಗ ಚಲನಚಿತ್ರ ನಾಯಕ ನಟ

ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ  ಎಚ್.ಡಿ.ಕೋಟೆ: ತಾಲ್ಲೂಕಿನ…

2 hours ago

ಕೈಕೊಟ್ಟ ಮಳೆ; ಬಾಡಿದ ಸೂರ್ಯಕಾಂತಿ ಬೆಳೆ

ಮಹೇಂದ್ರ ಹಸಗೂಲಿ ನಷ್ಟ ಹೊಂದಿದ ರೈತರಿಗೆ ಬೆಳೆ ವಿಮೆ ನೋಂದಣಿ ಜೊತೆಗೆ ಎಕರೆಗೆ ೫೦ ಸಾವಿರ ರೂ. ಪರಿಹಾರ ಭರಿಸಲು…

2 hours ago