ಚಿತ್ರ ಮಂಜರಿ

ಕಿಚ್ಚನ ಹುಟ್ಟುಹಬ್ಬಕ್ಕೆ ಕನ್ನಡದಲ್ಲೇ ಶುಭ ಕೋರಿದ ರಾಜಸ್ಥಾನ್‌ ರಾಯಲ್ಸ್‌

ಬೆಂಗಳೂರು: ಕಿಚ್ಚ ಸುದೀಪ್ ಅವರು ಇಂದು (ಸೆಪ್ಟೆಂಬರ್ 2) ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೊವಿಡ್ ಕಾಟ ಜೋರಾಗಿತ್ತು. ಈ ಕಾರಣದಿಂದ ಕಿಚ್ಚನ ಬರ್ತ್​ಡೇ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ, ಈ ವರ್ಷ ಬರ್ತ್​​ಡೇ ಜೋರಾಗಿದೆ. ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಸುದೀಪ್​ಗೆ ನಾನಾ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ. ವಿವಿಧ ಊರುಗಳಲ್ಲಿ ಸುದೀಪ್​ ಫೋಟೋ ಹಾಗೂ ಕಟೌಟ್ ಹಾಕಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಜೊತೆಗೆ ಕ್ರಿಕೆಟ್​ನಲ್ಲೂ ಸಾಕಷ್ಟು ಹೆಸರು ಮಾಡಿರುವ ಕಿಚ್ಚನಿಗೆ ಐಪಿಎಲ್​ನ ಯಶಸ್ವಿ ಫ್ರಾಂಚೈಸಿಯಾದ ರಾಜಸ್ಥಾನ ರಾಯಲ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಜನ್ಮದಿನದ ಶುಭಾಶಯ ತಿಳಿಸಿದೆ.

49ನೇ ವಯಸ್ಸಿಗೆ ಕಾಲಿಟ್ಟಿರುವ ಅಭಿನಯ ಚಕ್ರವರ್ತಿ ಸುದೀಪ್​ಗೆ ಕನ್ನಡದಲ್ಲಿ ಜನ್ಮದಿನದ ಶುಭಾಶಯ ತಿಳಿಸಿರುವ ರಾಜಸ್ಥಾನ ರಾಯಲ್ಸ್ ತನ್ನ ಟ್ವೀಟ್​ನಲ್ಲಿ, ಸುದೀಪ್ ರಾಜಸ್ಥಾನ ರಾಯಲ್ಸ್ ತಂಡದ ಜೆರ್ಸಿ ಹಿಡಿದಿರುವ ಫೋಟೋ ಹಂಚಿಕೊಂಡಿದೆ. ಜೊತೆಗೆ ಟ್ವೀಟ್​ನ ಶೀರ್ಷಿಕೆಯಲ್ಲಿ, ಜನ್ಮದಿನದ ಶುಭಾಶಯಗಳು ದಂತಕಥೆ ಎಂದು ಬರದುಕೊಂಡಿದೆ.

ಸುದೀಪ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ನಂಟು ಇಂದು ನಿನ್ನೆಯದಲ್ಲ. ಈ ಹಿಂದೆಯೂ ರಾಜಸ್ಥಾನ ರಾಯಲ್ಸ್ ತಂಡ ಕಿಚ್ಚ ಸುದೀಪ್ ಬರ್ತ್​ ಡೇಗೆ ಶುಭಾಷಯಗಳನ್ನು ತಿಳಿಸಿತ್ತು. ಈ ಹಿಂದೆ ಕಿಚ್ಚನ ಜನ್ಮದಿನಕ್ಕೆ ಜೆರ್ಸಿಯೊಂದನ್ನು ರಾಜಸ್ಥಾನ ರಾಯಲ್ಸ್ ತಂಡ ಗಿಫ್ಟ್ ಆಗಿ ಕಳುಹಿಸಿಕೊಟ್ಟಿತ್ತು. ಜೊತೆಗೆ ವಿಶೇಷ ಸಂದೇಶವನ್ನು ಟ್ವೀಟ್​ನಲ್ಲಿ ಬರೆದುಕೊಂಡಿತ್ತು.

 

andolana

Recent Posts

ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ

ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…

42 seconds ago

ರಾಜ್ಯದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕತ್ವ ಗೊಂದಲ ಸೃಷ್ಟಿ ಮಾಡಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್‌ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌…

41 mins ago

ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…

1 hour ago

ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ ದುಷ್ಕರ್ಮಿಗಳು

ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…

2 hours ago

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್:‌ ನಾಳೆಯಿಂದಲೇ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಹಣ

ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…

2 hours ago

ಹುಲಿ ಸೆರೆಗೆ ಚಾಮರಾಜನಗರದಲ್ಲಿ ಆಪರೇಷನ್‌ ಬೀಸ್ಟ್‌ ಆರಂಭ: ಡ್ರೋನ್‌ ಮೂಲಕ ಕಾರ್ಯಾಚರಣೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

2 hours ago