ಬೆಂಗಳೂರು: ಕಿಚ್ಚ ಸುದೀಪ್ ಅವರು ಇಂದು (ಸೆಪ್ಟೆಂಬರ್ 2) ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೊವಿಡ್ ಕಾಟ ಜೋರಾಗಿತ್ತು. ಈ ಕಾರಣದಿಂದ ಕಿಚ್ಚನ ಬರ್ತ್ಡೇ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ, ಈ ವರ್ಷ ಬರ್ತ್ಡೇ ಜೋರಾಗಿದೆ. ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಸುದೀಪ್ಗೆ ನಾನಾ ಕಡೆಗಳಿಂದ ಬರ್ತ್ಡೇ ವಿಶ್ ಬರುತ್ತಿದೆ. ವಿವಿಧ ಊರುಗಳಲ್ಲಿ ಸುದೀಪ್ ಫೋಟೋ ಹಾಗೂ ಕಟೌಟ್ ಹಾಕಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಜೊತೆಗೆ ಕ್ರಿಕೆಟ್ನಲ್ಲೂ ಸಾಕಷ್ಟು ಹೆಸರು ಮಾಡಿರುವ ಕಿಚ್ಚನಿಗೆ ಐಪಿಎಲ್ನ ಯಶಸ್ವಿ ಫ್ರಾಂಚೈಸಿಯಾದ ರಾಜಸ್ಥಾನ ರಾಯಲ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಜನ್ಮದಿನದ ಶುಭಾಶಯ ತಿಳಿಸಿದೆ.
49ನೇ ವಯಸ್ಸಿಗೆ ಕಾಲಿಟ್ಟಿರುವ ಅಭಿನಯ ಚಕ್ರವರ್ತಿ ಸುದೀಪ್ಗೆ ಕನ್ನಡದಲ್ಲಿ ಜನ್ಮದಿನದ ಶುಭಾಶಯ ತಿಳಿಸಿರುವ ರಾಜಸ್ಥಾನ ರಾಯಲ್ಸ್ ತನ್ನ ಟ್ವೀಟ್ನಲ್ಲಿ, ಸುದೀಪ್ ರಾಜಸ್ಥಾನ ರಾಯಲ್ಸ್ ತಂಡದ ಜೆರ್ಸಿ ಹಿಡಿದಿರುವ ಫೋಟೋ ಹಂಚಿಕೊಂಡಿದೆ. ಜೊತೆಗೆ ಟ್ವೀಟ್ನ ಶೀರ್ಷಿಕೆಯಲ್ಲಿ, ಜನ್ಮದಿನದ ಶುಭಾಶಯಗಳು ದಂತಕಥೆ ಎಂದು ಬರದುಕೊಂಡಿದೆ.
ಸುದೀಪ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ನಂಟು ಇಂದು ನಿನ್ನೆಯದಲ್ಲ. ಈ ಹಿಂದೆಯೂ ರಾಜಸ್ಥಾನ ರಾಯಲ್ಸ್ ತಂಡ ಕಿಚ್ಚ ಸುದೀಪ್ ಬರ್ತ್ ಡೇಗೆ ಶುಭಾಷಯಗಳನ್ನು ತಿಳಿಸಿತ್ತು. ಈ ಹಿಂದೆ ಕಿಚ್ಚನ ಜನ್ಮದಿನಕ್ಕೆ ಜೆರ್ಸಿಯೊಂದನ್ನು ರಾಜಸ್ಥಾನ ರಾಯಲ್ಸ್ ತಂಡ ಗಿಫ್ಟ್ ಆಗಿ ಕಳುಹಿಸಿಕೊಟ್ಟಿತ್ತು. ಜೊತೆಗೆ ವಿಶೇಷ ಸಂದೇಶವನ್ನು ಟ್ವೀಟ್ನಲ್ಲಿ ಬರೆದುಕೊಂಡಿತ್ತು.
ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…
ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್ ಸೃಷ್ಟಿ ಮಾಡಿಲ್ಲ. ಲೋಕಲ್ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್…
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…
ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…
ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…