ಚಿತ್ರ ಮಂಜರಿ

ಕಿಚ್ಚನ ಹುಟ್ಟುಹಬ್ಬಕ್ಕೆ ಕನ್ನಡದಲ್ಲೇ ಶುಭ ಕೋರಿದ ರಾಜಸ್ಥಾನ್‌ ರಾಯಲ್ಸ್‌

ಬೆಂಗಳೂರು: ಕಿಚ್ಚ ಸುದೀಪ್ ಅವರು ಇಂದು (ಸೆಪ್ಟೆಂಬರ್ 2) ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೊವಿಡ್ ಕಾಟ ಜೋರಾಗಿತ್ತು. ಈ ಕಾರಣದಿಂದ ಕಿಚ್ಚನ ಬರ್ತ್​ಡೇ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ, ಈ ವರ್ಷ ಬರ್ತ್​​ಡೇ ಜೋರಾಗಿದೆ. ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಸುದೀಪ್​ಗೆ ನಾನಾ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ. ವಿವಿಧ ಊರುಗಳಲ್ಲಿ ಸುದೀಪ್​ ಫೋಟೋ ಹಾಗೂ ಕಟೌಟ್ ಹಾಕಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಜೊತೆಗೆ ಕ್ರಿಕೆಟ್​ನಲ್ಲೂ ಸಾಕಷ್ಟು ಹೆಸರು ಮಾಡಿರುವ ಕಿಚ್ಚನಿಗೆ ಐಪಿಎಲ್​ನ ಯಶಸ್ವಿ ಫ್ರಾಂಚೈಸಿಯಾದ ರಾಜಸ್ಥಾನ ರಾಯಲ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಜನ್ಮದಿನದ ಶುಭಾಶಯ ತಿಳಿಸಿದೆ.

49ನೇ ವಯಸ್ಸಿಗೆ ಕಾಲಿಟ್ಟಿರುವ ಅಭಿನಯ ಚಕ್ರವರ್ತಿ ಸುದೀಪ್​ಗೆ ಕನ್ನಡದಲ್ಲಿ ಜನ್ಮದಿನದ ಶುಭಾಶಯ ತಿಳಿಸಿರುವ ರಾಜಸ್ಥಾನ ರಾಯಲ್ಸ್ ತನ್ನ ಟ್ವೀಟ್​ನಲ್ಲಿ, ಸುದೀಪ್ ರಾಜಸ್ಥಾನ ರಾಯಲ್ಸ್ ತಂಡದ ಜೆರ್ಸಿ ಹಿಡಿದಿರುವ ಫೋಟೋ ಹಂಚಿಕೊಂಡಿದೆ. ಜೊತೆಗೆ ಟ್ವೀಟ್​ನ ಶೀರ್ಷಿಕೆಯಲ್ಲಿ, ಜನ್ಮದಿನದ ಶುಭಾಶಯಗಳು ದಂತಕಥೆ ಎಂದು ಬರದುಕೊಂಡಿದೆ.

ಸುದೀಪ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ನಂಟು ಇಂದು ನಿನ್ನೆಯದಲ್ಲ. ಈ ಹಿಂದೆಯೂ ರಾಜಸ್ಥಾನ ರಾಯಲ್ಸ್ ತಂಡ ಕಿಚ್ಚ ಸುದೀಪ್ ಬರ್ತ್​ ಡೇಗೆ ಶುಭಾಷಯಗಳನ್ನು ತಿಳಿಸಿತ್ತು. ಈ ಹಿಂದೆ ಕಿಚ್ಚನ ಜನ್ಮದಿನಕ್ಕೆ ಜೆರ್ಸಿಯೊಂದನ್ನು ರಾಜಸ್ಥಾನ ರಾಯಲ್ಸ್ ತಂಡ ಗಿಫ್ಟ್ ಆಗಿ ಕಳುಹಿಸಿಕೊಟ್ಟಿತ್ತು. ಜೊತೆಗೆ ವಿಶೇಷ ಸಂದೇಶವನ್ನು ಟ್ವೀಟ್​ನಲ್ಲಿ ಬರೆದುಕೊಂಡಿತ್ತು.

 

andolana

Recent Posts

ಸರ್ಕಾರ ನಡೆಸಲು ಆಗದಿದ್ದರೆ ವಿಸರ್ಜಿಸಿ ಚುನಾವಣೆಗೆ ಬನ್ನಿ : ಕಾಂಗ್ರೆಸ್‌ಗೆ ವಿಜಯೇಂದ್ರ ಸವಾಲು

ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…

4 hours ago

ಪಾದಯಾತ್ರೆ ಮಧ್ಯೆ ದಲಿತ ಮುಖಂಡರ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…

4 hours ago

ಕೆ.ಆರ್.ಪೇಟೆ | ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಮತ್ತು ಸಿಇಒ

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…

4 hours ago

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

5 hours ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

6 hours ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

6 hours ago