ಬೆಂಗಳೂರು: ಕಿಚ್ಚ ಸುದೀಪ್ ಅವರು ಇಂದು (ಸೆಪ್ಟೆಂಬರ್ 2) ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೊವಿಡ್ ಕಾಟ ಜೋರಾಗಿತ್ತು. ಈ ಕಾರಣದಿಂದ ಕಿಚ್ಚನ ಬರ್ತ್ಡೇ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ, ಈ ವರ್ಷ ಬರ್ತ್ಡೇ ಜೋರಾಗಿದೆ. ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಸುದೀಪ್ಗೆ ನಾನಾ ಕಡೆಗಳಿಂದ ಬರ್ತ್ಡೇ ವಿಶ್ ಬರುತ್ತಿದೆ. ವಿವಿಧ ಊರುಗಳಲ್ಲಿ ಸುದೀಪ್ ಫೋಟೋ ಹಾಗೂ ಕಟೌಟ್ ಹಾಕಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಜೊತೆಗೆ ಕ್ರಿಕೆಟ್ನಲ್ಲೂ ಸಾಕಷ್ಟು ಹೆಸರು ಮಾಡಿರುವ ಕಿಚ್ಚನಿಗೆ ಐಪಿಎಲ್ನ ಯಶಸ್ವಿ ಫ್ರಾಂಚೈಸಿಯಾದ ರಾಜಸ್ಥಾನ ರಾಯಲ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಜನ್ಮದಿನದ ಶುಭಾಶಯ ತಿಳಿಸಿದೆ.
49ನೇ ವಯಸ್ಸಿಗೆ ಕಾಲಿಟ್ಟಿರುವ ಅಭಿನಯ ಚಕ್ರವರ್ತಿ ಸುದೀಪ್ಗೆ ಕನ್ನಡದಲ್ಲಿ ಜನ್ಮದಿನದ ಶುಭಾಶಯ ತಿಳಿಸಿರುವ ರಾಜಸ್ಥಾನ ರಾಯಲ್ಸ್ ತನ್ನ ಟ್ವೀಟ್ನಲ್ಲಿ, ಸುದೀಪ್ ರಾಜಸ್ಥಾನ ರಾಯಲ್ಸ್ ತಂಡದ ಜೆರ್ಸಿ ಹಿಡಿದಿರುವ ಫೋಟೋ ಹಂಚಿಕೊಂಡಿದೆ. ಜೊತೆಗೆ ಟ್ವೀಟ್ನ ಶೀರ್ಷಿಕೆಯಲ್ಲಿ, ಜನ್ಮದಿನದ ಶುಭಾಶಯಗಳು ದಂತಕಥೆ ಎಂದು ಬರದುಕೊಂಡಿದೆ.
ಸುದೀಪ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ನಂಟು ಇಂದು ನಿನ್ನೆಯದಲ್ಲ. ಈ ಹಿಂದೆಯೂ ರಾಜಸ್ಥಾನ ರಾಯಲ್ಸ್ ತಂಡ ಕಿಚ್ಚ ಸುದೀಪ್ ಬರ್ತ್ ಡೇಗೆ ಶುಭಾಷಯಗಳನ್ನು ತಿಳಿಸಿತ್ತು. ಈ ಹಿಂದೆ ಕಿಚ್ಚನ ಜನ್ಮದಿನಕ್ಕೆ ಜೆರ್ಸಿಯೊಂದನ್ನು ರಾಜಸ್ಥಾನ ರಾಯಲ್ಸ್ ತಂಡ ಗಿಫ್ಟ್ ಆಗಿ ಕಳುಹಿಸಿಕೊಟ್ಟಿತ್ತು. ಜೊತೆಗೆ ವಿಶೇಷ ಸಂದೇಶವನ್ನು ಟ್ವೀಟ್ನಲ್ಲಿ ಬರೆದುಕೊಂಡಿತ್ತು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…