ಚಿತ್ರ ಮಂಜರಿ

ಕಿಚ್ಚನ ಹುಟ್ಟುಹಬ್ಬಕ್ಕೆ ಕನ್ನಡದಲ್ಲೇ ಶುಭ ಕೋರಿದ ರಾಜಸ್ಥಾನ್‌ ರಾಯಲ್ಸ್‌

ಬೆಂಗಳೂರು: ಕಿಚ್ಚ ಸುದೀಪ್ ಅವರು ಇಂದು (ಸೆಪ್ಟೆಂಬರ್ 2) ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೊವಿಡ್ ಕಾಟ ಜೋರಾಗಿತ್ತು. ಈ ಕಾರಣದಿಂದ ಕಿಚ್ಚನ ಬರ್ತ್​ಡೇ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ, ಈ ವರ್ಷ ಬರ್ತ್​​ಡೇ ಜೋರಾಗಿದೆ. ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಸುದೀಪ್​ಗೆ ನಾನಾ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ. ವಿವಿಧ ಊರುಗಳಲ್ಲಿ ಸುದೀಪ್​ ಫೋಟೋ ಹಾಗೂ ಕಟೌಟ್ ಹಾಕಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಜೊತೆಗೆ ಕ್ರಿಕೆಟ್​ನಲ್ಲೂ ಸಾಕಷ್ಟು ಹೆಸರು ಮಾಡಿರುವ ಕಿಚ್ಚನಿಗೆ ಐಪಿಎಲ್​ನ ಯಶಸ್ವಿ ಫ್ರಾಂಚೈಸಿಯಾದ ರಾಜಸ್ಥಾನ ರಾಯಲ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಜನ್ಮದಿನದ ಶುಭಾಶಯ ತಿಳಿಸಿದೆ.

49ನೇ ವಯಸ್ಸಿಗೆ ಕಾಲಿಟ್ಟಿರುವ ಅಭಿನಯ ಚಕ್ರವರ್ತಿ ಸುದೀಪ್​ಗೆ ಕನ್ನಡದಲ್ಲಿ ಜನ್ಮದಿನದ ಶುಭಾಶಯ ತಿಳಿಸಿರುವ ರಾಜಸ್ಥಾನ ರಾಯಲ್ಸ್ ತನ್ನ ಟ್ವೀಟ್​ನಲ್ಲಿ, ಸುದೀಪ್ ರಾಜಸ್ಥಾನ ರಾಯಲ್ಸ್ ತಂಡದ ಜೆರ್ಸಿ ಹಿಡಿದಿರುವ ಫೋಟೋ ಹಂಚಿಕೊಂಡಿದೆ. ಜೊತೆಗೆ ಟ್ವೀಟ್​ನ ಶೀರ್ಷಿಕೆಯಲ್ಲಿ, ಜನ್ಮದಿನದ ಶುಭಾಶಯಗಳು ದಂತಕಥೆ ಎಂದು ಬರದುಕೊಂಡಿದೆ.

ಸುದೀಪ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ನಂಟು ಇಂದು ನಿನ್ನೆಯದಲ್ಲ. ಈ ಹಿಂದೆಯೂ ರಾಜಸ್ಥಾನ ರಾಯಲ್ಸ್ ತಂಡ ಕಿಚ್ಚ ಸುದೀಪ್ ಬರ್ತ್​ ಡೇಗೆ ಶುಭಾಷಯಗಳನ್ನು ತಿಳಿಸಿತ್ತು. ಈ ಹಿಂದೆ ಕಿಚ್ಚನ ಜನ್ಮದಿನಕ್ಕೆ ಜೆರ್ಸಿಯೊಂದನ್ನು ರಾಜಸ್ಥಾನ ರಾಯಲ್ಸ್ ತಂಡ ಗಿಫ್ಟ್ ಆಗಿ ಕಳುಹಿಸಿಕೊಟ್ಟಿತ್ತು. ಜೊತೆಗೆ ವಿಶೇಷ ಸಂದೇಶವನ್ನು ಟ್ವೀಟ್​ನಲ್ಲಿ ಬರೆದುಕೊಂಡಿತ್ತು.

 

andolana

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

9 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

11 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

15 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

19 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

22 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

22 hours ago