ಚಿತ್ರ ಮಂಜರಿ

ಕಿಚ್ಚನ ಹುಟ್ಟುಹಬ್ಬಕ್ಕೆ ಕನ್ನಡದಲ್ಲೇ ಶುಭ ಕೋರಿದ ರಾಜಸ್ಥಾನ್‌ ರಾಯಲ್ಸ್‌

ಬೆಂಗಳೂರು: ಕಿಚ್ಚ ಸುದೀಪ್ ಅವರು ಇಂದು (ಸೆಪ್ಟೆಂಬರ್ 2) ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೊವಿಡ್ ಕಾಟ ಜೋರಾಗಿತ್ತು. ಈ ಕಾರಣದಿಂದ ಕಿಚ್ಚನ ಬರ್ತ್​ಡೇ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ, ಈ ವರ್ಷ ಬರ್ತ್​​ಡೇ ಜೋರಾಗಿದೆ. ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಸುದೀಪ್​ಗೆ ನಾನಾ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ. ವಿವಿಧ ಊರುಗಳಲ್ಲಿ ಸುದೀಪ್​ ಫೋಟೋ ಹಾಗೂ ಕಟೌಟ್ ಹಾಕಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಜೊತೆಗೆ ಕ್ರಿಕೆಟ್​ನಲ್ಲೂ ಸಾಕಷ್ಟು ಹೆಸರು ಮಾಡಿರುವ ಕಿಚ್ಚನಿಗೆ ಐಪಿಎಲ್​ನ ಯಶಸ್ವಿ ಫ್ರಾಂಚೈಸಿಯಾದ ರಾಜಸ್ಥಾನ ರಾಯಲ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಜನ್ಮದಿನದ ಶುಭಾಶಯ ತಿಳಿಸಿದೆ.

49ನೇ ವಯಸ್ಸಿಗೆ ಕಾಲಿಟ್ಟಿರುವ ಅಭಿನಯ ಚಕ್ರವರ್ತಿ ಸುದೀಪ್​ಗೆ ಕನ್ನಡದಲ್ಲಿ ಜನ್ಮದಿನದ ಶುಭಾಶಯ ತಿಳಿಸಿರುವ ರಾಜಸ್ಥಾನ ರಾಯಲ್ಸ್ ತನ್ನ ಟ್ವೀಟ್​ನಲ್ಲಿ, ಸುದೀಪ್ ರಾಜಸ್ಥಾನ ರಾಯಲ್ಸ್ ತಂಡದ ಜೆರ್ಸಿ ಹಿಡಿದಿರುವ ಫೋಟೋ ಹಂಚಿಕೊಂಡಿದೆ. ಜೊತೆಗೆ ಟ್ವೀಟ್​ನ ಶೀರ್ಷಿಕೆಯಲ್ಲಿ, ಜನ್ಮದಿನದ ಶುಭಾಶಯಗಳು ದಂತಕಥೆ ಎಂದು ಬರದುಕೊಂಡಿದೆ.

ಸುದೀಪ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ನಂಟು ಇಂದು ನಿನ್ನೆಯದಲ್ಲ. ಈ ಹಿಂದೆಯೂ ರಾಜಸ್ಥಾನ ರಾಯಲ್ಸ್ ತಂಡ ಕಿಚ್ಚ ಸುದೀಪ್ ಬರ್ತ್​ ಡೇಗೆ ಶುಭಾಷಯಗಳನ್ನು ತಿಳಿಸಿತ್ತು. ಈ ಹಿಂದೆ ಕಿಚ್ಚನ ಜನ್ಮದಿನಕ್ಕೆ ಜೆರ್ಸಿಯೊಂದನ್ನು ರಾಜಸ್ಥಾನ ರಾಯಲ್ಸ್ ತಂಡ ಗಿಫ್ಟ್ ಆಗಿ ಕಳುಹಿಸಿಕೊಟ್ಟಿತ್ತು. ಜೊತೆಗೆ ವಿಶೇಷ ಸಂದೇಶವನ್ನು ಟ್ವೀಟ್​ನಲ್ಲಿ ಬರೆದುಕೊಂಡಿತ್ತು.

 

andolana

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

13 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

15 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

16 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

16 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

16 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

19 hours ago