ಚಿತ್ರ ಮಂಜರಿ

ರಜನಿಕಾಂತ್‌ ಸಂಘಿಯಾಗಿದ್ದರೆ ʼಲಾಲ್‌ ಸಲಾಂʼ ಸಿನಿಮಾ ಮಾಡುತ್ತಿರಲಿಲ್ಲ: ಐಶ್ವರ್ಯ

ಚೆನ್ನೈ: ನನ್ನ ತಂದೆ ರಜಿನಿಕಾಂತ್ ಅವರು ಸಂಘಿ ಅಲ್ಲ. ಅವರು ಸಂಘಿಯಾಗಿದ್ದರೆ “ಲಾಲ್ ಸಲಾಂ”ನಂತಹ ಸಿನಿಮಾ ಮಾಡುತ್ತಿರಲಿಲ್ಲ ಎಂದು ಸೂಪರ್‌ಸ್ಟಾರ್ ರಜಿನಿಕಾಂತ್ ಅವರ ಪುತ್ರಿ ಐಶ್ವರ್ಯ ರಜನಿಕಾಂತ್‌ ಸ್ಪಷ್ಟಪಡಿಸಿದ್ದಾರೆ.

ಚೆನ್ನೈನಲ್ಲಿ ಜನವರಿ 26ರಂದು ರಜಿನಿಕಾಂತ್ ಅಭಿನಯದ “ಲಾಲ್ ಸಲಾಂ” ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ತಂದೆಗೆ “ಸಂಘ” ಎಂಬ ಹಣೆಪಟ್ಟಿ ಕಟ್ಟಲಾಗುತ್ತಿರುವ ಕುರಿತು ಅವರು ಮಾತನಾಡುತ್ತಿದ್ದರು. ವೇದಿಕೆಯಲ್ಲಿ ನಿಂತು ತಮ್ಮ ಬಗ್ಗೆ ಹಾಗೂ ಸಿನೆಮಾದ ಬಗ್ಗೆ ಐಶ್ವರ್ಯ ಮಾತನಾಡುತ್ತಿದ್ದಾಗ ರಜಿನಿಕಾಂತ್ ಅವರ ಕಣ್ಣಾಲಿಗಳು ತುಂಬಿ ಬಂದಿದ್ದವು ಎಂದು indiatoday.in ವರದಿ ಮಾಡಿದೆ.

ಅಯೋಧ್ಯೆಗೆ ಭೇಟಿ ನೀಡಿದ್ದ ನಟ ರಜನೀಕಾಂತ್, ‘500 ವರ್ಷಗಳ ಹಿಂದಿನ ಸಮಸ್ಯೆಗೆ ಸುಪ್ರೀಂಕೋರ್ಟ್ ಪರಿಹಾರ ಒದಗಿಸಿದೆ. ಈ ದಿನ ಭಾರತೀಯ ಇತಿಹಾಸದಲ್ಲಿ ಮರೆಯಲಾಗದ ದಿನ’ ಎಂದಿದ್ದರು. ನಿರ್ದೇಶಕ ಪಾ ರಂಜಿತ್, ರಜನೀಕಾಂತ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ‘500 ವರ್ಷಗಳ ಹಿಂದಿನ ಸಮಸ್ಯೆ ಎಂದು ಹೇಳಿರುವುದು ಸೂಕ್ತವಲ್ಲ. ನಾವು ಈ ಪ್ರಕ್ರಿಯೆಯ ಹಿಂದಿನ ರಾಜಕೀಯವನ್ನು ಪ್ರಶ್ನೆ ಮಾಡಬೇಕಿದೆ’ ಎಂದು ಸೂಪರ್‌ ಸ್ಟಾರ್‌ ರಜನಿಕಾಂತ್‌ ವಿರುದ್ಧ ಟೀಕೆ ನಡೆಸಿದ್ದರು.

ಪಾ ರಂಜಿತ್ ಹೇಳಿಕೆಗೆ ಬೆಂಬಲ ಸೂಚಿಸಿದ್ದ ಕೆಲವರು ರಜನೀಕಾಂತ್ ಅವರನ್ನು ʼಸಂಘʼ ನೆಂದು ಟೀಕೆ ಮಾಡಿದ್ದರು. ರಜನೀಕಾಂತ್ ಅವರು ‘ತಾವು ರಾಜಕಾರಣಿಯಲ್ಲ, ತಮಗೆ ರಾಜಕೀಯದ ಅವಶ್ಯಕತೆ ಇಲ್ಲ’ ಎಂದು ಪ್ರತಿಕ್ರಿಯೆ ನೀಡಿದ್ದರು ಸಹಾ ಅವರ ಮೇಲೆ ನಿರಂತರವಾಗಿ ಟೀಕೆಗಳು ನಡೆಯುತ್ತಲೇ ಇತ್ತು. ಈ ಬಗ್ಗೆ ರಜನಿಕಾಂತ್‌ ಪುತ್ರಿ ಟೀಕಾಕಾರರಿಗೆ ಪ್ರುತ್ಯುತ್ತರ ನೀಡಿದ್ದಾರೆ.

”ನನ್ನ ತಂದೆ ಲಾಲ್ ಸಲಾಂ ಚಿತ್ರದ ಸ್ಕ್ರಿಪ್ಟ್ ಅನ್ನು ಕೇಳಿದಾಗ ಮೊಯ್ದಿನ್ ಭಾಯಿ ಪಾತ್ರ ತನಗೆ ಮಾಡಬಹದೇ ಎಂದು ತಂದೆ ನನ್ನನ್ನು ಕೇಳಿದರು. ಆರಂಭದಲ್ಲಿ ಹಿಂಜರಿದೆ. ಆ ಪಾತ್ರಕ್ಕೆ ಅವರನ್ನು ಆರಿಸುವ ಬಗ್ಗೆ ನಾನು ಅವರು ಸೂಚಿಸುವ ತನಕ ಯೋಚಿಸಲೇ ಇಲ್ಲ,” ಎಂದು ಐಶ್ವರ್ಯ ಹೇಳಿದರು.

ಲಾಲ್ ಸಲಾಂ ಒಂದು ಸೂಕ್ಷ್ಮ ವಿಚಾರದ ಸಿನೆಮಾ ಆಗಿದ್ದು ಮಾನವೀಯ ವ್ಯಕ್ತಿ ಮಾತ್ರ ಅದನ್ನು ಮಾಡಲು ಸಾಧ್ಯ ಎಂದು ಹೇಳಿ ತಂದೆಗೆ ಅವರು ಧನ್ಯವಾದ ತಿಳಿಸಿದರು. ಫೆಬ್ರವರಿ 9 ರಂದು ʼಲಾಲ್‌ ಸಲಾಂʼ ಚಿತ್ರ ದೇಶಾದ್ಯಂತ ಬಿಡುಗಡೆಯಾಗಲಿದೆ.

andolanait

Recent Posts

ನಾಳೆ ಶ್ರೀ ಅಯ್ಯಪ್ಪ ಕ್ಷೇತ್ರದ ಮುಖಮಂಟಪ ಲೋಕಾರ್ಪಣೆ

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…

2 hours ago

‘ದೇಸಿ ಬೀಜಗಳನ್ನು ಉಳಿಸಿದರೆ ವಿಷಮುಕ್ತ ಆಹಾರ ನೀಡಲು ಸಾಧ್ಯ’

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…

3 hours ago

ಕ್ರಿಸ್‌ಮಸ್ ಹಬ್ಬಕ್ಕೆ ಅರಮನೆ ನಗರಿ ಸಜ್ಜು

ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…

3 hours ago

ಡಿಎಚ್‌ಒ ವರ್ಗಾವಣೆಯಲ್ಲಿ ಎಡವಟ್ಟು

ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…

3 hours ago

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

14 hours ago