ಚಿತ್ರ ಮಂಜರಿ

ರಜನಿಕಾಂತ್‌ ಸಂಘಿಯಾಗಿದ್ದರೆ ʼಲಾಲ್‌ ಸಲಾಂʼ ಸಿನಿಮಾ ಮಾಡುತ್ತಿರಲಿಲ್ಲ: ಐಶ್ವರ್ಯ

ಚೆನ್ನೈ: ನನ್ನ ತಂದೆ ರಜಿನಿಕಾಂತ್ ಅವರು ಸಂಘಿ ಅಲ್ಲ. ಅವರು ಸಂಘಿಯಾಗಿದ್ದರೆ “ಲಾಲ್ ಸಲಾಂ”ನಂತಹ ಸಿನಿಮಾ ಮಾಡುತ್ತಿರಲಿಲ್ಲ ಎಂದು ಸೂಪರ್‌ಸ್ಟಾರ್ ರಜಿನಿಕಾಂತ್ ಅವರ ಪುತ್ರಿ ಐಶ್ವರ್ಯ ರಜನಿಕಾಂತ್‌ ಸ್ಪಷ್ಟಪಡಿಸಿದ್ದಾರೆ.

ಚೆನ್ನೈನಲ್ಲಿ ಜನವರಿ 26ರಂದು ರಜಿನಿಕಾಂತ್ ಅಭಿನಯದ “ಲಾಲ್ ಸಲಾಂ” ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ತಂದೆಗೆ “ಸಂಘ” ಎಂಬ ಹಣೆಪಟ್ಟಿ ಕಟ್ಟಲಾಗುತ್ತಿರುವ ಕುರಿತು ಅವರು ಮಾತನಾಡುತ್ತಿದ್ದರು. ವೇದಿಕೆಯಲ್ಲಿ ನಿಂತು ತಮ್ಮ ಬಗ್ಗೆ ಹಾಗೂ ಸಿನೆಮಾದ ಬಗ್ಗೆ ಐಶ್ವರ್ಯ ಮಾತನಾಡುತ್ತಿದ್ದಾಗ ರಜಿನಿಕಾಂತ್ ಅವರ ಕಣ್ಣಾಲಿಗಳು ತುಂಬಿ ಬಂದಿದ್ದವು ಎಂದು indiatoday.in ವರದಿ ಮಾಡಿದೆ.

ಅಯೋಧ್ಯೆಗೆ ಭೇಟಿ ನೀಡಿದ್ದ ನಟ ರಜನೀಕಾಂತ್, ‘500 ವರ್ಷಗಳ ಹಿಂದಿನ ಸಮಸ್ಯೆಗೆ ಸುಪ್ರೀಂಕೋರ್ಟ್ ಪರಿಹಾರ ಒದಗಿಸಿದೆ. ಈ ದಿನ ಭಾರತೀಯ ಇತಿಹಾಸದಲ್ಲಿ ಮರೆಯಲಾಗದ ದಿನ’ ಎಂದಿದ್ದರು. ನಿರ್ದೇಶಕ ಪಾ ರಂಜಿತ್, ರಜನೀಕಾಂತ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ‘500 ವರ್ಷಗಳ ಹಿಂದಿನ ಸಮಸ್ಯೆ ಎಂದು ಹೇಳಿರುವುದು ಸೂಕ್ತವಲ್ಲ. ನಾವು ಈ ಪ್ರಕ್ರಿಯೆಯ ಹಿಂದಿನ ರಾಜಕೀಯವನ್ನು ಪ್ರಶ್ನೆ ಮಾಡಬೇಕಿದೆ’ ಎಂದು ಸೂಪರ್‌ ಸ್ಟಾರ್‌ ರಜನಿಕಾಂತ್‌ ವಿರುದ್ಧ ಟೀಕೆ ನಡೆಸಿದ್ದರು.

ಪಾ ರಂಜಿತ್ ಹೇಳಿಕೆಗೆ ಬೆಂಬಲ ಸೂಚಿಸಿದ್ದ ಕೆಲವರು ರಜನೀಕಾಂತ್ ಅವರನ್ನು ʼಸಂಘʼ ನೆಂದು ಟೀಕೆ ಮಾಡಿದ್ದರು. ರಜನೀಕಾಂತ್ ಅವರು ‘ತಾವು ರಾಜಕಾರಣಿಯಲ್ಲ, ತಮಗೆ ರಾಜಕೀಯದ ಅವಶ್ಯಕತೆ ಇಲ್ಲ’ ಎಂದು ಪ್ರತಿಕ್ರಿಯೆ ನೀಡಿದ್ದರು ಸಹಾ ಅವರ ಮೇಲೆ ನಿರಂತರವಾಗಿ ಟೀಕೆಗಳು ನಡೆಯುತ್ತಲೇ ಇತ್ತು. ಈ ಬಗ್ಗೆ ರಜನಿಕಾಂತ್‌ ಪುತ್ರಿ ಟೀಕಾಕಾರರಿಗೆ ಪ್ರುತ್ಯುತ್ತರ ನೀಡಿದ್ದಾರೆ.

”ನನ್ನ ತಂದೆ ಲಾಲ್ ಸಲಾಂ ಚಿತ್ರದ ಸ್ಕ್ರಿಪ್ಟ್ ಅನ್ನು ಕೇಳಿದಾಗ ಮೊಯ್ದಿನ್ ಭಾಯಿ ಪಾತ್ರ ತನಗೆ ಮಾಡಬಹದೇ ಎಂದು ತಂದೆ ನನ್ನನ್ನು ಕೇಳಿದರು. ಆರಂಭದಲ್ಲಿ ಹಿಂಜರಿದೆ. ಆ ಪಾತ್ರಕ್ಕೆ ಅವರನ್ನು ಆರಿಸುವ ಬಗ್ಗೆ ನಾನು ಅವರು ಸೂಚಿಸುವ ತನಕ ಯೋಚಿಸಲೇ ಇಲ್ಲ,” ಎಂದು ಐಶ್ವರ್ಯ ಹೇಳಿದರು.

ಲಾಲ್ ಸಲಾಂ ಒಂದು ಸೂಕ್ಷ್ಮ ವಿಚಾರದ ಸಿನೆಮಾ ಆಗಿದ್ದು ಮಾನವೀಯ ವ್ಯಕ್ತಿ ಮಾತ್ರ ಅದನ್ನು ಮಾಡಲು ಸಾಧ್ಯ ಎಂದು ಹೇಳಿ ತಂದೆಗೆ ಅವರು ಧನ್ಯವಾದ ತಿಳಿಸಿದರು. ಫೆಬ್ರವರಿ 9 ರಂದು ʼಲಾಲ್‌ ಸಲಾಂʼ ಚಿತ್ರ ದೇಶಾದ್ಯಂತ ಬಿಡುಗಡೆಯಾಗಲಿದೆ.

andolanait

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

2 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

2 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

3 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

3 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

8 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

8 hours ago