ಚಿತ್ರ ಮಂಜರಿ

ರಜನಿಕಾಂತ್‌ ಸಂಘಿಯಾಗಿದ್ದರೆ ʼಲಾಲ್‌ ಸಲಾಂʼ ಸಿನಿಮಾ ಮಾಡುತ್ತಿರಲಿಲ್ಲ: ಐಶ್ವರ್ಯ

ಚೆನ್ನೈ: ನನ್ನ ತಂದೆ ರಜಿನಿಕಾಂತ್ ಅವರು ಸಂಘಿ ಅಲ್ಲ. ಅವರು ಸಂಘಿಯಾಗಿದ್ದರೆ “ಲಾಲ್ ಸಲಾಂ”ನಂತಹ ಸಿನಿಮಾ ಮಾಡುತ್ತಿರಲಿಲ್ಲ ಎಂದು ಸೂಪರ್‌ಸ್ಟಾರ್ ರಜಿನಿಕಾಂತ್ ಅವರ ಪುತ್ರಿ ಐಶ್ವರ್ಯ ರಜನಿಕಾಂತ್‌ ಸ್ಪಷ್ಟಪಡಿಸಿದ್ದಾರೆ.

ಚೆನ್ನೈನಲ್ಲಿ ಜನವರಿ 26ರಂದು ರಜಿನಿಕಾಂತ್ ಅಭಿನಯದ “ಲಾಲ್ ಸಲಾಂ” ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ತಂದೆಗೆ “ಸಂಘ” ಎಂಬ ಹಣೆಪಟ್ಟಿ ಕಟ್ಟಲಾಗುತ್ತಿರುವ ಕುರಿತು ಅವರು ಮಾತನಾಡುತ್ತಿದ್ದರು. ವೇದಿಕೆಯಲ್ಲಿ ನಿಂತು ತಮ್ಮ ಬಗ್ಗೆ ಹಾಗೂ ಸಿನೆಮಾದ ಬಗ್ಗೆ ಐಶ್ವರ್ಯ ಮಾತನಾಡುತ್ತಿದ್ದಾಗ ರಜಿನಿಕಾಂತ್ ಅವರ ಕಣ್ಣಾಲಿಗಳು ತುಂಬಿ ಬಂದಿದ್ದವು ಎಂದು indiatoday.in ವರದಿ ಮಾಡಿದೆ.

ಅಯೋಧ್ಯೆಗೆ ಭೇಟಿ ನೀಡಿದ್ದ ನಟ ರಜನೀಕಾಂತ್, ‘500 ವರ್ಷಗಳ ಹಿಂದಿನ ಸಮಸ್ಯೆಗೆ ಸುಪ್ರೀಂಕೋರ್ಟ್ ಪರಿಹಾರ ಒದಗಿಸಿದೆ. ಈ ದಿನ ಭಾರತೀಯ ಇತಿಹಾಸದಲ್ಲಿ ಮರೆಯಲಾಗದ ದಿನ’ ಎಂದಿದ್ದರು. ನಿರ್ದೇಶಕ ಪಾ ರಂಜಿತ್, ರಜನೀಕಾಂತ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ‘500 ವರ್ಷಗಳ ಹಿಂದಿನ ಸಮಸ್ಯೆ ಎಂದು ಹೇಳಿರುವುದು ಸೂಕ್ತವಲ್ಲ. ನಾವು ಈ ಪ್ರಕ್ರಿಯೆಯ ಹಿಂದಿನ ರಾಜಕೀಯವನ್ನು ಪ್ರಶ್ನೆ ಮಾಡಬೇಕಿದೆ’ ಎಂದು ಸೂಪರ್‌ ಸ್ಟಾರ್‌ ರಜನಿಕಾಂತ್‌ ವಿರುದ್ಧ ಟೀಕೆ ನಡೆಸಿದ್ದರು.

ಪಾ ರಂಜಿತ್ ಹೇಳಿಕೆಗೆ ಬೆಂಬಲ ಸೂಚಿಸಿದ್ದ ಕೆಲವರು ರಜನೀಕಾಂತ್ ಅವರನ್ನು ʼಸಂಘʼ ನೆಂದು ಟೀಕೆ ಮಾಡಿದ್ದರು. ರಜನೀಕಾಂತ್ ಅವರು ‘ತಾವು ರಾಜಕಾರಣಿಯಲ್ಲ, ತಮಗೆ ರಾಜಕೀಯದ ಅವಶ್ಯಕತೆ ಇಲ್ಲ’ ಎಂದು ಪ್ರತಿಕ್ರಿಯೆ ನೀಡಿದ್ದರು ಸಹಾ ಅವರ ಮೇಲೆ ನಿರಂತರವಾಗಿ ಟೀಕೆಗಳು ನಡೆಯುತ್ತಲೇ ಇತ್ತು. ಈ ಬಗ್ಗೆ ರಜನಿಕಾಂತ್‌ ಪುತ್ರಿ ಟೀಕಾಕಾರರಿಗೆ ಪ್ರುತ್ಯುತ್ತರ ನೀಡಿದ್ದಾರೆ.

”ನನ್ನ ತಂದೆ ಲಾಲ್ ಸಲಾಂ ಚಿತ್ರದ ಸ್ಕ್ರಿಪ್ಟ್ ಅನ್ನು ಕೇಳಿದಾಗ ಮೊಯ್ದಿನ್ ಭಾಯಿ ಪಾತ್ರ ತನಗೆ ಮಾಡಬಹದೇ ಎಂದು ತಂದೆ ನನ್ನನ್ನು ಕೇಳಿದರು. ಆರಂಭದಲ್ಲಿ ಹಿಂಜರಿದೆ. ಆ ಪಾತ್ರಕ್ಕೆ ಅವರನ್ನು ಆರಿಸುವ ಬಗ್ಗೆ ನಾನು ಅವರು ಸೂಚಿಸುವ ತನಕ ಯೋಚಿಸಲೇ ಇಲ್ಲ,” ಎಂದು ಐಶ್ವರ್ಯ ಹೇಳಿದರು.

ಲಾಲ್ ಸಲಾಂ ಒಂದು ಸೂಕ್ಷ್ಮ ವಿಚಾರದ ಸಿನೆಮಾ ಆಗಿದ್ದು ಮಾನವೀಯ ವ್ಯಕ್ತಿ ಮಾತ್ರ ಅದನ್ನು ಮಾಡಲು ಸಾಧ್ಯ ಎಂದು ಹೇಳಿ ತಂದೆಗೆ ಅವರು ಧನ್ಯವಾದ ತಿಳಿಸಿದರು. ಫೆಬ್ರವರಿ 9 ರಂದು ʼಲಾಲ್‌ ಸಲಾಂʼ ಚಿತ್ರ ದೇಶಾದ್ಯಂತ ಬಿಡುಗಡೆಯಾಗಲಿದೆ.

andolanait

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

7 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

8 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

14 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

14 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

19 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

19 hours ago