ಚಿತ್ರ ಮಂಜರಿ

ಮತ್ತೆ ಬರಲಿರುವ ರಾಮಾಚಾರಿ ಇದು ‘ನಾಗರಹಾವು’ ಚಿತ್ರದ ಮುಂದಿನ ಭಾಗ

‘ಶ್ರೀ ಕ್ಷೇತ್ರ ಕೈವಾರ ತಾತಯ್ಯ’ ಮತ್ತು ‘ದೇವನಹಳ್ಳಿ’ ಚಿತ್ರಗಳನ್ನು ನಿರ್ದೇಶಿಸಿರುವ ಪಲ್ಲಕ್ಕಿ ರಾಧಾಕೃಷ್ಣ, ಆನಂತರ ಒಂದೆರಡು ಚಿತ್ರಗಳನ್ನು ನಿರ್ದೇಶಿಸುವುದಾಗಿ ಸುದ್ದಿಯಾದರೂ, ಕಾರಣಾಂತರಗಳಿಂದ ಆ ಚಿತ್ರಗಳು ಬಿಡುಗಡೆಯಾಗಲಿಲ್ಲ. ಇದೀಗ ಅವರು ಸದ್ದಿಲ್ಲದೆ, ‘ಚಾಮಯ್ಯ ಸನ್ ಆಫ್ ರಾಮಾಚಾರಿ’ ಎಂಬ ಹೊಸ ಚಿತ್ರದೊಂದಿಗೆ ಬಂದಿದ್ದಾರೆ.

ಚಾಮಯ್ಯ ಮತ್ತು ರಾಮಾಚಾರಿ ಎಂಬ ಹೆಸರು ಕೇಳಿದರೆ, ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ನಾಗರಹಾವು’ ಚಿತ್ರ ನೆನಪಿಗೆ ಬರುತ್ತದೆ. ಆ ಚಿತ್ರಕ್ಕೂ, ಈ ಚಿತ್ರಕ್ಕೂ ಏನಾದರೂ ಸಂಬಂಧವಿದೆಯಾ ಎಂಬ ಪ್ರಶ್ನೆ ಬರಬಹುದು. ಹೌದು ಸಂಬಂಧವಿದೆ. ಚಾಮಯ್ಯ ಸನ್ ಆಫ್ ರಾಮಾಚಾರಿ’, ‘ನಾಗರಹಾವು’ ಚಿತ್ರದ ಮುಂದುವರಿದ ಭಾಗ.

ಈ ಚಿತ್ರದ ಕುರಿತು ಮಾತನಾಡುವ ಪಲ್ಲಕ್ಕಿ, ‘ಈ ಬಂಧನ’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ವಿಷ್ಣುವರ್ಧನ್ ಅವರನ್ನು ಭೇಟಿ ಮಾಡಿ, ಸಣ್ಣದೊಂದು ಎಳೆ ಹೇಳಿದ್ದೆ. ಅವರೂ ಇಷ್ಟಪಟ್ಟಿದ್ದರು. ಅವರು ಕಾಲವಾದ ನಂತರ ಇದನ್ನು ಮಾಡುವುದು ಬೇಡವೆಂದು ಸುಮ್ಮನಿದ್ದೆ. ಒಮ್ಮೆ ಉತ್ತರ ಕರ್ನಾಟಕದಲ್ಲಿ ನಾಟಕ ನೋಡಲು ಹೋದಾಗ ಅಲ್ಲಿ ರಂಗಭೂಮಿಯ ಹಿರಿಯ ಕಲಾವಿದರಾದ ಜಯಶ್ರೀರಾಜ್ ನಟನೆಯನ್ನು ನೋಡಿದಾಗ, ಸಿನಿಮಾ ಮಾಡುವ ಯೋಚನೆ ಬಂದು, ಈ ಚಿತ್ರವನ್ನು ಮಾಡಿದ್ದೇನೆ’ ಎಂದರು.

ಮೂಲ ಸಿನಿಮಾದ ಕ್ಲೈಮ್ಯಾಕ್ಸ್‌ನಲ್ಲಿ ರಾಮಾಚಾರಿ ಮತ್ತು ಮಾರ್ಗರೆಟ್ ಬೆಟ್ಟದ ಮೇಲಿಂದ ಬೀಳುತ್ತಾರೆ ಎಂದು ತೋರಿಸಲಾಗಿದೆ. ಅವರೇನಾದರು ಎಂದು ತೋರಿಸಿಲ್ಲ. ಅಲ್ಲಿಗೆ ಚಿತ್ರ ಮುಗಿಯುತ್ತದೆ. ಅಲ್ಲಿಂದ ‘ಚಾಮಯ್ಯ ಸನ್ ಆಫ್ ರಾಮಾಚಾರಿ’ ಮುಂದುವರಿಯುತ್ತದೆ ಎನ್ನುವ ಪಲ್ಲಕ್ಕಿ, ‘ನಮ್ಮ ಚಿತ್ರದಲ್ಲಿ ಮಾರ್ಗರೆಟ್ ಪಾತ್ರ ಸತ್ತಿರುತ್ತದೆ. ರಾಮಾಚಾರಿ ಬದುಕುಳಿದಿರುತ್ತಾನೆ. ಆತನಿಗೆ ಊರಿನಲ್ಲಿ ಆಶ್ರಯ ಸಿಗುವುದಿಲ್ಲ. ಈ ಸಂದರ್ಭದಲ್ಲಿ ಪೈಲ್ವಾನ್ ಬಸಪ್ಪ, ರಾಮಾಚಾರಿಗೆ ಆಶ್ರಯ ನೀಡಿ, ಚಿತ್ರದುರ್ಗದ ವೃತ್ತಿ ರಂಗಭೂಮಿಗೆ ಸೇರಿಸುತ್ತಾರೆ. ಅಲ್ಲಿ ರಾಮಾಚಾರಿಗೆ ಯುವತಿಯೊಂದಿಗೆ ಪ್ರೀತಿಯಾಗಿ, ಇಬ್ಬರಿಗೂ ಹುಟ್ಟಿದ ಮಗು ಚಾಮಯ್ಯ. ಮುಂದೆ ಒಂದು ಘಟ್ಟದಲ್ಲಿ ರಾಮಾಚಾರಿ ಬದುಕಿನಲ್ಲಿ ಘೋರ ದುರಂತ ನಡೆಯುತ್ತದೆ. ಆಗ ಏನೆಲ್ಲಾ ನಡೆಯುತ್ತದೆ ಎನ್ನುವುದೇ ಚಿತ್ರದಕಥೆ’ಎಂದು ವಿವರಿಸಿದರು ಅವರು.

ಮೂಲ ಚಿತ್ರದ ಪಾತ್ರಗಳು ಇಲ್ಲೂ ಮುಂದುವರಿಯುತ್ತವಂತೆ. ‘ಚಾಮಯ್ಯನಾಗಿ ಪ್ರದೀಪ್ ಶಾಸ್ತ್ರಿ, ಮಗಳಾಗಿ ಚೈತ್ರಾ, ಪ್ರಿನ್ಸಿಪಾಲ್ (ಲೋಕನಾಥ್) ಆಗಿ ಪ್ರಕಾಶ್ ಅರಸು, ಪ್ರೇಮಾ ಗೌಡ, ವಿನುತ, ರಾಘವೇಂದ್ರ, ಸುಧಾಕರ, ಸೂರ್ಯತೇಜ, ಕಾರ್ತಿಕ್, ಗುರುಕಿರಣ್, ಸಂದೀಪ್ ಮುಂತಾದವರು ನಟಿಸಿದ್ದಾರೆ. ನಾನು ಈ ಚಿತ್ರದಲ್ಲಿ ಜಲೀಲನ (ಅಂಬರೀಷ್) ಮಗ ಚೋಟಾ ಜಲೀಲ್ ಆಗಿ ನಟಿಸಿದ್ದೇನೆ. ಕೊಲೆ ತನಿಖೆ ಮಾಡುವ ಪೊಲೀಸ್ ಅಽಕಾರಿಯಾಗಿ ಕಾಣಿಸಿಕೊಂಡಿದ್ದೇನೆ’ ಎಂದರು.

ಜೋಳಿಗೆ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಪಲ್ಲಕ್ಕಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಒಂದು ಪ್ರಮುಖ ಪಾತ್ರದಲ್ಲೂ ನಟಿಸಿದ್ದಾರೆ. ಚಿತ್ರವನ್ನು ನಿರ್ಮಿಸುವುದರ ಜೊತೆಗೆ ಪಲ್ಲಕ್ಕಿ ಸ್ಟುಡಿಯೋಸ್ ಬ್ಯಾನರ್ ಅಡಿ ವಿತರಣೆಯನ್ನೂ ಮಾಡುತ್ತಿ ದ್ದಾರೆ. ಚಿತ್ರಕ್ಕೆ ‘ಕೋಟೆ ನಾಡಿನ ನಾಗರಹಾವು’ ಎಂಬ ಅಡಿಬರಹವಿದೆ. ಚಿತ್ರಕ್ಕೆ ಸ್ಯಾಂ ಸಂಗೀತ ಸಂಯೋಜನೆ ಮತ್ತು ಎಂ.ಆರ್.ಸೀನು ಛಾಯಾಗ್ರಹಣವಿದೆ. ಏಪ್ರಿಲ್‌ನಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

ಶಿವಮೊಗ್ಗದಲ್ಲಿ 8 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್‌: ಮನೆಮಾಡಿದ ಆತಂಕ

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್‌ ಕೇಸ್‌ಗಳು ಮತ್ತಷ್ಟು…

35 seconds ago

ಫಲಾನುಭವಿಗಳ ಖಾತೆಗೆ ಜಮೆಯಾಗದ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಿಷ್ಟು.!

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…

19 mins ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಸೋಮವಾರಪೇಟೆ ವಿದ್ಯುತ್‌ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್‌ ನಿರ್ವಹಣೆ ಕಾಮಗಾರಿ…

33 mins ago

ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ…

55 mins ago

ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಐಟಿ ದಾಳಿ

ಬೆಂಗಳೂರು: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.…

1 hour ago

ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಹೊಸ ರೂಲ್ಸ್

ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1)…

2 hours ago