ಚಿತ್ರ ಮಂಜರಿ

ಪ್ರೀತಿಯಿಂದ ತಮ್ಮ ಯಶಸ್ಸಿನ ಸರಳ ಸೂತ್ರಗಳನ್ನು ಹೇಳಲು ಹೊರಟಿದ್ದಾರೆ ನಟ ರಮೇಶ್ ಅರವಿಂದ್

ಬೆಂಗಳೂರು: ನಗರದ ಬಿ. ಪಿ. ವಾಡಿಯಾ ಸಭಾಂಗಣದಲ್ಲಿ ಸಾವಣ್ಣ ಪ್ರಕಾಶನ ಪ್ರಕಟಿಸಿರುವ ನಟ ರಮೇಶ್ ಅರವಿಂದ್ (Ramesh Aravind)  ಅವರ ‘ಪ್ರೀತಿಯಿಂದ ರಮೇಶ್ ಯಶಸ್ಸಿನ ಸರಳ ಸೂತ್ರಗಳು’ ಕೃತಿಯನ್ನು ಹಿರಿಯ ನಟ ಅನಂತ್ ನಾಗ್ (Ananth Nag) ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಬಾಲ್ಯದಲ್ಲಿ ನಮಗೆ ೩೦-೪೦ ಪುಟಗಳ ಸಣ್ಣ ಸಣ್ಣ ಕೈಪಿಡಿಗಳು ಸಿಗುತ್ತಿದ್ದವು. ಮನೆಗೆ ನೆಂಟರು ಬರುವಾಗ ವಿವೇಕಾನಂದ, ಪರಮಹಂಸರ ಕುರಿತ ಕೈಪಿಡಿಗಳನ್ನು ತರುತ್ತಿದ್ದರು. ಆ ಕೈಪಿಡಿಗಳಿಂದ ನಮಗೆ ಧಾರ್ಮಿಕ, ದೇವರ ಬಗ್ಗೆ ಮಾರ್ಗದರ್ಶನ ಸಿಗುತ್ತಿತ್ತು. ರಮೇಶ್ ಅವರ ಕೃತಿ ಕೂಡ ಹೆಚ್ಚು-ಕಡಿಮೆ ಅದೇ ಮಾದರಿಯಲ್ಲಿದೆ. ನೈತಿಕತೆಯ ಬಗ್ಗೆ ಉಪಯುಕ್ತ ತಿಳವಳಿಕೆ ನೀಡುವ ಈ ಪುಸ್ತಕ ಬರೆಯುವ ಮೂಲಕ ರಮೇಶ್ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ರಮೇಶ್ ಅರವಿಂದ ಅವರು, ಘಟನೆ, ಸನ್ನಿವೇಶಗಳನ್ನು ನೋಡಿದಾಗ ಅದನ್ನು ತನ್ನ ಹತ್ತಿರದವರ ಜೊತೆ ತಕ್ಷಣವೇ ಹೇಳಿಕೊಳ್ಳಬೇಕು ಎಂದು ಅನಿಸುವುದು ಮಾನವನ ಸಹಜ ಗುಣ. ಮಾತು ಕರಗತವಾಗಿರದಿದ್ದ ಕಾಲಘಟ್ಟದಲ್ಲಿಯೂ ಸಂಜ್ಞೆಗಳ ಮೂಲಕ ತನ್ನವರಿಗೆ ಮಾಹಿತಿಯನ್ನು ಮನುಷ್ಯ ತಿಳಿಸುತ್ತಿದ್ದ. ನಡೆದ ಘಟನೆಯಲ್ಲಿ ತನ್ನ ಪಾತ್ರವಿರದಿದ್ದರೂ ಹೇಳುವ ಸಂದರ್ಭದಲ್ಲಿ ತನ್ನನ್ನು ಸೇರಿಸಿಕೊಂಡು ವಿವರಿಸುತ್ತಿದ್ದ. ಇಂತಹ ಮಾನವ ಸಹಜ ಗುಣದ ಮುಂದುವರಿದ ಭಾಗವೇ ಬರವಣಿಗೆ. ನಾನು ನನ್ನ ಜೀವನದ ಅನುಭವಗಳನ್ನು ಮಕ್ಕಳಿಗೂ ಅರ್ಥವಾಗುವ ರೀತಿಯಲ್ಲಿ ಈ ಕೃತಿಯಲ್ಲಿ ಬರೆಯಲು ಯತ್ನಿಸಿದ್ದೇನೆ ಎಂದರು.

ಕನ್ನಡಪ್ರಭದ ಪುರವಣಿ ಸಂಪಾದಕ ಗಿರೀಶ್‌ರಾವ್ ಹತ್ವಾರ್ (ಜೋಗಿ) (Jogi) ಮಾತನಾಡಿ, ರಮೇಶ್ ಆವರಿಂದ ಒಂದು ಕೆಟ್ಟ ಮಾತು ಬರಬಹುದು ಎಂದು ಕಳೆದ ೨೫ ವರ್ಷದಿಂದ ಪತ್ರಕರ್ತರಾಗಿ ನಾವು ಕಾಯುತ್ತಿದ್ದೇವೆ.ಆದರೆ ಅವರದ್ದು ಸಕಾರಾತ್ಮಕ ದೃಷ್ಟಿಕೋನ. ಸದಾ ಅಧ್ಯಯನಶೀಲತೆ, ಹುಡುಕಾಟ, ಹೊಸತನದ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಅವರ ಈ ಗುಣ ಈ ಕೃತಿಯಲ್ಲಿ ಬಿಂಬಿತವಾಗಿದೆ ಎಂದು ಹೇಳಿದರು. ಝಿ ಕನ್ನಡದ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು (Raghavendra Hunsur) ವೇದಿಕೆಯಲ್ಲಿದ್ದರು. ಜಮೀಲ್ ಸಾವಣ್ಣ (Jameel) ಪ್ರಾಸ್ತಾವಿಕ ಮಾತು ಆಡಿದರು. ರಂಜನೀಕೀರ್ತಿ ನಿರೂಪಣೆ ಮಾಡಿದರು.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago