ಚಿತ್ರ ಮಂಜರಿ

ಪ್ರೀತಿಯಿಂದ ತಮ್ಮ ಯಶಸ್ಸಿನ ಸರಳ ಸೂತ್ರಗಳನ್ನು ಹೇಳಲು ಹೊರಟಿದ್ದಾರೆ ನಟ ರಮೇಶ್ ಅರವಿಂದ್

ಬೆಂಗಳೂರು: ನಗರದ ಬಿ. ಪಿ. ವಾಡಿಯಾ ಸಭಾಂಗಣದಲ್ಲಿ ಸಾವಣ್ಣ ಪ್ರಕಾಶನ ಪ್ರಕಟಿಸಿರುವ ನಟ ರಮೇಶ್ ಅರವಿಂದ್ (Ramesh Aravind)  ಅವರ ‘ಪ್ರೀತಿಯಿಂದ ರಮೇಶ್ ಯಶಸ್ಸಿನ ಸರಳ ಸೂತ್ರಗಳು’ ಕೃತಿಯನ್ನು ಹಿರಿಯ ನಟ ಅನಂತ್ ನಾಗ್ (Ananth Nag) ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಬಾಲ್ಯದಲ್ಲಿ ನಮಗೆ ೩೦-೪೦ ಪುಟಗಳ ಸಣ್ಣ ಸಣ್ಣ ಕೈಪಿಡಿಗಳು ಸಿಗುತ್ತಿದ್ದವು. ಮನೆಗೆ ನೆಂಟರು ಬರುವಾಗ ವಿವೇಕಾನಂದ, ಪರಮಹಂಸರ ಕುರಿತ ಕೈಪಿಡಿಗಳನ್ನು ತರುತ್ತಿದ್ದರು. ಆ ಕೈಪಿಡಿಗಳಿಂದ ನಮಗೆ ಧಾರ್ಮಿಕ, ದೇವರ ಬಗ್ಗೆ ಮಾರ್ಗದರ್ಶನ ಸಿಗುತ್ತಿತ್ತು. ರಮೇಶ್ ಅವರ ಕೃತಿ ಕೂಡ ಹೆಚ್ಚು-ಕಡಿಮೆ ಅದೇ ಮಾದರಿಯಲ್ಲಿದೆ. ನೈತಿಕತೆಯ ಬಗ್ಗೆ ಉಪಯುಕ್ತ ತಿಳವಳಿಕೆ ನೀಡುವ ಈ ಪುಸ್ತಕ ಬರೆಯುವ ಮೂಲಕ ರಮೇಶ್ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ರಮೇಶ್ ಅರವಿಂದ ಅವರು, ಘಟನೆ, ಸನ್ನಿವೇಶಗಳನ್ನು ನೋಡಿದಾಗ ಅದನ್ನು ತನ್ನ ಹತ್ತಿರದವರ ಜೊತೆ ತಕ್ಷಣವೇ ಹೇಳಿಕೊಳ್ಳಬೇಕು ಎಂದು ಅನಿಸುವುದು ಮಾನವನ ಸಹಜ ಗುಣ. ಮಾತು ಕರಗತವಾಗಿರದಿದ್ದ ಕಾಲಘಟ್ಟದಲ್ಲಿಯೂ ಸಂಜ್ಞೆಗಳ ಮೂಲಕ ತನ್ನವರಿಗೆ ಮಾಹಿತಿಯನ್ನು ಮನುಷ್ಯ ತಿಳಿಸುತ್ತಿದ್ದ. ನಡೆದ ಘಟನೆಯಲ್ಲಿ ತನ್ನ ಪಾತ್ರವಿರದಿದ್ದರೂ ಹೇಳುವ ಸಂದರ್ಭದಲ್ಲಿ ತನ್ನನ್ನು ಸೇರಿಸಿಕೊಂಡು ವಿವರಿಸುತ್ತಿದ್ದ. ಇಂತಹ ಮಾನವ ಸಹಜ ಗುಣದ ಮುಂದುವರಿದ ಭಾಗವೇ ಬರವಣಿಗೆ. ನಾನು ನನ್ನ ಜೀವನದ ಅನುಭವಗಳನ್ನು ಮಕ್ಕಳಿಗೂ ಅರ್ಥವಾಗುವ ರೀತಿಯಲ್ಲಿ ಈ ಕೃತಿಯಲ್ಲಿ ಬರೆಯಲು ಯತ್ನಿಸಿದ್ದೇನೆ ಎಂದರು.

ಕನ್ನಡಪ್ರಭದ ಪುರವಣಿ ಸಂಪಾದಕ ಗಿರೀಶ್‌ರಾವ್ ಹತ್ವಾರ್ (ಜೋಗಿ) (Jogi) ಮಾತನಾಡಿ, ರಮೇಶ್ ಆವರಿಂದ ಒಂದು ಕೆಟ್ಟ ಮಾತು ಬರಬಹುದು ಎಂದು ಕಳೆದ ೨೫ ವರ್ಷದಿಂದ ಪತ್ರಕರ್ತರಾಗಿ ನಾವು ಕಾಯುತ್ತಿದ್ದೇವೆ.ಆದರೆ ಅವರದ್ದು ಸಕಾರಾತ್ಮಕ ದೃಷ್ಟಿಕೋನ. ಸದಾ ಅಧ್ಯಯನಶೀಲತೆ, ಹುಡುಕಾಟ, ಹೊಸತನದ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಅವರ ಈ ಗುಣ ಈ ಕೃತಿಯಲ್ಲಿ ಬಿಂಬಿತವಾಗಿದೆ ಎಂದು ಹೇಳಿದರು. ಝಿ ಕನ್ನಡದ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು (Raghavendra Hunsur) ವೇದಿಕೆಯಲ್ಲಿದ್ದರು. ಜಮೀಲ್ ಸಾವಣ್ಣ (Jameel) ಪ್ರಾಸ್ತಾವಿಕ ಮಾತು ಆಡಿದರು. ರಂಜನೀಕೀರ್ತಿ ನಿರೂಪಣೆ ಮಾಡಿದರು.

andolanait

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

20 mins ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

34 mins ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

41 mins ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

1 hour ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

2 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

2 hours ago