ಬೆಂಗಳೂರು: ನಗರದ ಬಿ. ಪಿ. ವಾಡಿಯಾ ಸಭಾಂಗಣದಲ್ಲಿ ಸಾವಣ್ಣ ಪ್ರಕಾಶನ ಪ್ರಕಟಿಸಿರುವ ನಟ ರಮೇಶ್ ಅರವಿಂದ್ (Ramesh Aravind) ಅವರ ‘ಪ್ರೀತಿಯಿಂದ ರಮೇಶ್ ಯಶಸ್ಸಿನ ಸರಳ ಸೂತ್ರಗಳು’ ಕೃತಿಯನ್ನು ಹಿರಿಯ ನಟ ಅನಂತ್ ನಾಗ್ (Ananth Nag) ಬಿಡುಗಡೆ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಬಾಲ್ಯದಲ್ಲಿ ನಮಗೆ ೩೦-೪೦ ಪುಟಗಳ ಸಣ್ಣ ಸಣ್ಣ ಕೈಪಿಡಿಗಳು ಸಿಗುತ್ತಿದ್ದವು. ಮನೆಗೆ ನೆಂಟರು ಬರುವಾಗ ವಿವೇಕಾನಂದ, ಪರಮಹಂಸರ ಕುರಿತ ಕೈಪಿಡಿಗಳನ್ನು ತರುತ್ತಿದ್ದರು. ಆ ಕೈಪಿಡಿಗಳಿಂದ ನಮಗೆ ಧಾರ್ಮಿಕ, ದೇವರ ಬಗ್ಗೆ ಮಾರ್ಗದರ್ಶನ ಸಿಗುತ್ತಿತ್ತು. ರಮೇಶ್ ಅವರ ಕೃತಿ ಕೂಡ ಹೆಚ್ಚು-ಕಡಿಮೆ ಅದೇ ಮಾದರಿಯಲ್ಲಿದೆ. ನೈತಿಕತೆಯ ಬಗ್ಗೆ ಉಪಯುಕ್ತ ತಿಳವಳಿಕೆ ನೀಡುವ ಈ ಪುಸ್ತಕ ಬರೆಯುವ ಮೂಲಕ ರಮೇಶ್ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ರಮೇಶ್ ಅರವಿಂದ ಅವರು, ಘಟನೆ, ಸನ್ನಿವೇಶಗಳನ್ನು ನೋಡಿದಾಗ ಅದನ್ನು ತನ್ನ ಹತ್ತಿರದವರ ಜೊತೆ ತಕ್ಷಣವೇ ಹೇಳಿಕೊಳ್ಳಬೇಕು ಎಂದು ಅನಿಸುವುದು ಮಾನವನ ಸಹಜ ಗುಣ. ಮಾತು ಕರಗತವಾಗಿರದಿದ್ದ ಕಾಲಘಟ್ಟದಲ್ಲಿಯೂ ಸಂಜ್ಞೆಗಳ ಮೂಲಕ ತನ್ನವರಿಗೆ ಮಾಹಿತಿಯನ್ನು ಮನುಷ್ಯ ತಿಳಿಸುತ್ತಿದ್ದ. ನಡೆದ ಘಟನೆಯಲ್ಲಿ ತನ್ನ ಪಾತ್ರವಿರದಿದ್ದರೂ ಹೇಳುವ ಸಂದರ್ಭದಲ್ಲಿ ತನ್ನನ್ನು ಸೇರಿಸಿಕೊಂಡು ವಿವರಿಸುತ್ತಿದ್ದ. ಇಂತಹ ಮಾನವ ಸಹಜ ಗುಣದ ಮುಂದುವರಿದ ಭಾಗವೇ ಬರವಣಿಗೆ. ನಾನು ನನ್ನ ಜೀವನದ ಅನುಭವಗಳನ್ನು ಮಕ್ಕಳಿಗೂ ಅರ್ಥವಾಗುವ ರೀತಿಯಲ್ಲಿ ಈ ಕೃತಿಯಲ್ಲಿ ಬರೆಯಲು ಯತ್ನಿಸಿದ್ದೇನೆ ಎಂದರು.
ಕನ್ನಡಪ್ರಭದ ಪುರವಣಿ ಸಂಪಾದಕ ಗಿರೀಶ್ರಾವ್ ಹತ್ವಾರ್ (ಜೋಗಿ) (Jogi) ಮಾತನಾಡಿ, ರಮೇಶ್ ಆವರಿಂದ ಒಂದು ಕೆಟ್ಟ ಮಾತು ಬರಬಹುದು ಎಂದು ಕಳೆದ ೨೫ ವರ್ಷದಿಂದ ಪತ್ರಕರ್ತರಾಗಿ ನಾವು ಕಾಯುತ್ತಿದ್ದೇವೆ.ಆದರೆ ಅವರದ್ದು ಸಕಾರಾತ್ಮಕ ದೃಷ್ಟಿಕೋನ. ಸದಾ ಅಧ್ಯಯನಶೀಲತೆ, ಹುಡುಕಾಟ, ಹೊಸತನದ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಅವರ ಈ ಗುಣ ಈ ಕೃತಿಯಲ್ಲಿ ಬಿಂಬಿತವಾಗಿದೆ ಎಂದು ಹೇಳಿದರು. ಝಿ ಕನ್ನಡದ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು (Raghavendra Hunsur) ವೇದಿಕೆಯಲ್ಲಿದ್ದರು. ಜಮೀಲ್ ಸಾವಣ್ಣ (Jameel) ಪ್ರಾಸ್ತಾವಿಕ ಮಾತು ಆಡಿದರು. ರಂಜನೀಕೀರ್ತಿ ನಿರೂಪಣೆ ಮಾಡಿದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…