ಚಿತ್ರ ಮಂಜರಿ

ಪ್ರೀತಿಯಿಂದ ತಮ್ಮ ಯಶಸ್ಸಿನ ಸರಳ ಸೂತ್ರಗಳನ್ನು ಹೇಳಲು ಹೊರಟಿದ್ದಾರೆ ನಟ ರಮೇಶ್ ಅರವಿಂದ್

ಬೆಂಗಳೂರು: ನಗರದ ಬಿ. ಪಿ. ವಾಡಿಯಾ ಸಭಾಂಗಣದಲ್ಲಿ ಸಾವಣ್ಣ ಪ್ರಕಾಶನ ಪ್ರಕಟಿಸಿರುವ ನಟ ರಮೇಶ್ ಅರವಿಂದ್ (Ramesh Aravind)  ಅವರ ‘ಪ್ರೀತಿಯಿಂದ ರಮೇಶ್ ಯಶಸ್ಸಿನ ಸರಳ ಸೂತ್ರಗಳು’ ಕೃತಿಯನ್ನು ಹಿರಿಯ ನಟ ಅನಂತ್ ನಾಗ್ (Ananth Nag) ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಬಾಲ್ಯದಲ್ಲಿ ನಮಗೆ ೩೦-೪೦ ಪುಟಗಳ ಸಣ್ಣ ಸಣ್ಣ ಕೈಪಿಡಿಗಳು ಸಿಗುತ್ತಿದ್ದವು. ಮನೆಗೆ ನೆಂಟರು ಬರುವಾಗ ವಿವೇಕಾನಂದ, ಪರಮಹಂಸರ ಕುರಿತ ಕೈಪಿಡಿಗಳನ್ನು ತರುತ್ತಿದ್ದರು. ಆ ಕೈಪಿಡಿಗಳಿಂದ ನಮಗೆ ಧಾರ್ಮಿಕ, ದೇವರ ಬಗ್ಗೆ ಮಾರ್ಗದರ್ಶನ ಸಿಗುತ್ತಿತ್ತು. ರಮೇಶ್ ಅವರ ಕೃತಿ ಕೂಡ ಹೆಚ್ಚು-ಕಡಿಮೆ ಅದೇ ಮಾದರಿಯಲ್ಲಿದೆ. ನೈತಿಕತೆಯ ಬಗ್ಗೆ ಉಪಯುಕ್ತ ತಿಳವಳಿಕೆ ನೀಡುವ ಈ ಪುಸ್ತಕ ಬರೆಯುವ ಮೂಲಕ ರಮೇಶ್ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ರಮೇಶ್ ಅರವಿಂದ ಅವರು, ಘಟನೆ, ಸನ್ನಿವೇಶಗಳನ್ನು ನೋಡಿದಾಗ ಅದನ್ನು ತನ್ನ ಹತ್ತಿರದವರ ಜೊತೆ ತಕ್ಷಣವೇ ಹೇಳಿಕೊಳ್ಳಬೇಕು ಎಂದು ಅನಿಸುವುದು ಮಾನವನ ಸಹಜ ಗುಣ. ಮಾತು ಕರಗತವಾಗಿರದಿದ್ದ ಕಾಲಘಟ್ಟದಲ್ಲಿಯೂ ಸಂಜ್ಞೆಗಳ ಮೂಲಕ ತನ್ನವರಿಗೆ ಮಾಹಿತಿಯನ್ನು ಮನುಷ್ಯ ತಿಳಿಸುತ್ತಿದ್ದ. ನಡೆದ ಘಟನೆಯಲ್ಲಿ ತನ್ನ ಪಾತ್ರವಿರದಿದ್ದರೂ ಹೇಳುವ ಸಂದರ್ಭದಲ್ಲಿ ತನ್ನನ್ನು ಸೇರಿಸಿಕೊಂಡು ವಿವರಿಸುತ್ತಿದ್ದ. ಇಂತಹ ಮಾನವ ಸಹಜ ಗುಣದ ಮುಂದುವರಿದ ಭಾಗವೇ ಬರವಣಿಗೆ. ನಾನು ನನ್ನ ಜೀವನದ ಅನುಭವಗಳನ್ನು ಮಕ್ಕಳಿಗೂ ಅರ್ಥವಾಗುವ ರೀತಿಯಲ್ಲಿ ಈ ಕೃತಿಯಲ್ಲಿ ಬರೆಯಲು ಯತ್ನಿಸಿದ್ದೇನೆ ಎಂದರು.

ಕನ್ನಡಪ್ರಭದ ಪುರವಣಿ ಸಂಪಾದಕ ಗಿರೀಶ್‌ರಾವ್ ಹತ್ವಾರ್ (ಜೋಗಿ) (Jogi) ಮಾತನಾಡಿ, ರಮೇಶ್ ಆವರಿಂದ ಒಂದು ಕೆಟ್ಟ ಮಾತು ಬರಬಹುದು ಎಂದು ಕಳೆದ ೨೫ ವರ್ಷದಿಂದ ಪತ್ರಕರ್ತರಾಗಿ ನಾವು ಕಾಯುತ್ತಿದ್ದೇವೆ.ಆದರೆ ಅವರದ್ದು ಸಕಾರಾತ್ಮಕ ದೃಷ್ಟಿಕೋನ. ಸದಾ ಅಧ್ಯಯನಶೀಲತೆ, ಹುಡುಕಾಟ, ಹೊಸತನದ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಅವರ ಈ ಗುಣ ಈ ಕೃತಿಯಲ್ಲಿ ಬಿಂಬಿತವಾಗಿದೆ ಎಂದು ಹೇಳಿದರು. ಝಿ ಕನ್ನಡದ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು (Raghavendra Hunsur) ವೇದಿಕೆಯಲ್ಲಿದ್ದರು. ಜಮೀಲ್ ಸಾವಣ್ಣ (Jameel) ಪ್ರಾಸ್ತಾವಿಕ ಮಾತು ಆಡಿದರು. ರಂಜನೀಕೀರ್ತಿ ನಿರೂಪಣೆ ಮಾಡಿದರು.

andolanait

Recent Posts

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 mins ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

8 mins ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

12 mins ago

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

10 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

11 hours ago