ಚಿತ್ರ ಮಂಜರಿ

ಹುಟ್ಟು ಹಬ್ಬಕ್ಕೆ ವಿಷ್‌ ಮಾಡಿ ಎಂದು ವಾಟ್ಸ್‌ ಆಪ್‌ ನಂಬರ್‌ ಹಂಚಿಕೊಂಡ ರಮೇಶ್‌ ಅರವಿಂದ್‌

ಸಾಮಾನ್ಯವಾಗಿ ಸೆಲೆಬ್ರಿಟಿಗಳು ತಮ್ಮ ಫೋನ್ ನಂಬರ್‌ಗಳನ್ನು ಯಾರಿಗೂ ಸಿಗದ ಹಾಗೆ ಕಾಪಾಡಿಕೊಳ್ಳುತ್ತಾರೆ. ಫೋನ್ ನಂಬರ್ ವೈರಲ್ ಆದರೆ ಎಲ್ಲರೂ ಕರೆ ಮಾಡುತ್ತಿರುತ್ತಾರೆ, ಕೆಲಸದ ಸಮಯದಲ್ಲಿ ಫೋನ್ ಅಟೆಂಡ್ ಮಾಡಿ ಮಾತನಾಡಲು ಸಾಧ್ಯವಿಲ್ಲ ಎಂದು ಸಾಮಾನ್ಯವಾಗಿ ಫೋನ್ ನಂಬರ್ ರಿವೀಲ್ ಮಾಡೋದಿಲ್ಲ. ಆದರೆ ರಮೇಶ್ ಅರವಿಂದ್ ಅವರು ಹುಟ್ಟುಹಬ್ಬಕ್ಕೆ ವಿಶ್ ಮಾಡಿ ಎಂದು ಫೋನ್ ನಂಬರ್ ಶೇರ್ ಮಾಡಿದ್ದಾರೆ.  ಹೌದು, ನಟ, ನಿರ್ದೇಶಕ, ನಿರೂಪಕ ರಮೇಶ್​ ಅರವಿಂದ್​ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳ ಹೃದಯ ಗೆದ್ದಿರುವ ರಮೇಶ್ ಅರವಿಂದ್ ಇಂದಿಗೂ ಅದೆ ಬೇಡಿಕೆಯ ನಟ. ಕನ್ನಡದ ಚಿತ್ರರಂಗದಲ್ಲಿ ಅವರು ಎವರ್​ಗ್ರೀನ್ ಹೀರೋ ಆಗಿ ಮಿಂಚುತ್ತಿದ್ದಾರೆ. ಅಂದಹಾಗೆ ಸೆಪ್ಟೆಂಬರ್​ 10ರಂದು ರಮೇಶ್​ ಅರವಿಂದ್​ ಅವರ ಜನ್ಮದಿನ.  ಈ ವಿಶೇಷ ದಿನದಂದು ಅವರಿಗೆ ಶುಭಾಶಯ ತಿಳಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ನೇರವಾಗಿ ವಿಶ್​ ಮಾಡುವುದು ಕಷ್ಟ. ಅದಕ್ಕಾಗಿ ಸ್ವತಃ ರಮೇಶ್​ ಅರವಿಂದ್​ ಕಡೆಯಿಂದ ಒಂದು ದೊಡ್ಡ ಆಫರ್​ ನೀಡಲಾಗಿದೆ.

ಅಭಿಮಾನಿಗಳಿಗಾಗಿ ರಮೇಶ್ ಅರವಿಂದ್ ಫೋನ್​ ನಂಬರ್ ನೀಡಿದ್ದಾರೆ. ಆ ನಂಬರ್​ಗೆ ವಾಟ್ಸಾಪ್​ ಸಂದೇಶ ಕಳಿಸುವ ಮೂಲಕ ನೆಚ್ಚಿನ ನಟನಿಗೆ ನೀವು ವಿಶ್​ ಮಾಡಬಹುದು. ರಮೇಶ್ ಅರವಿಂದ್ ಸದ್ಯ ಮೋಟಿವೇಶನ್ ವಿಡಿಯೋ ಮೂಲಕ ಯುವಕರನ್ನು ಸೆಳೆಯುತ್ತಿದ್ದಾರೆ. ಅನೇಕ ಶಾಲೆ ಮತ್ತು ಕಾಲೇಜುಗಳಲ್ಲಿ ಮೋಟಿವೇಶನ್ ಸ್ಪೀಚ್ ನೀಡಿದ್ದಾರೆ. ಅಪಾರ ಸಂಖ್ಯೆಯ ಯುವ ಅಭಿಮಾನಿಗಳನ್ನು ಹೊಂದಿದ್ದಾರೆ. ಸದ್ಯ ಅವರಿಗೆ ಶುಭಹಾರೈಸಲು ಅಭಿಮಾನಿಗಳಿಗೆ ಬಂಪರ್ ಆಫರ್ ನೀಡಿದ್ದಾರೆ. ನೇರವಾಗಿ ರಮೇಶ್ ಅವರವಿಂದ್ ಅವರಿಗೆ ಫೋನ್ ಮಾಡಿ ವಿಶ್ ಮಾಡಬಹುದು.  ಹೌದು,  ಅಭಿಮಾನಿಗಳು 8951599009 ಮತ್ತು 8951699009 ಮೊಬೈಲ್​ ಸಂಖ್ಯೆಗೆ ವಾಟ್ಸಪ್​ ಸಂದೇಶ ಕಳಿಸುವ ಮೂಲಕ ರಮೇಶ್​ ಅರವಿಂದ್​ ಹುಟ್ಟುಹಬ್ಬಕ್ಕೆ ಶುಭ ಹಾರೈಸಬಹುದು.

ಕೇವಲವಿಶ್​ ಮಾಡುವುದು ಮಾತ್ರವಲ್ಲದೇ ರಮೇಶ್​ ಅರವಿಂದ್​ ಅವರಿಗೆ ಏನಾದರೂ ಪ್ರಶ್ನೆಗಳನ್ನೂ ಕೇಳಬಹುದು. ಹೀಗೆ ಮೆಸೇಜ್ ಮಾಡುವಾಗ ನಿಮ್ಮ ಹೆಸರು, ಊರು ಮತ್ತು ಜಿಲ್ಲೆಯನ್ನು ತಪ್ಪದೇ ನಮೂದಿಸಿರಬೇಕು. ಮೆಸೇಜ್​ ಮಾಡಿದ ಪ್ರತಿಯೊಬ್ಬರಿಗೂ ರಮೇಶ್​ ಅರವಿಂದ್​ ಅವರೇ ಸ್ವತಃ ಪ್ರತಿಕ್ರಿಯೆ ನೀಡಲಿದ್ದಾರೆ. ಎಲ್ಲರಿಗಿಂತ ವಿಭಿನ್ನವಾಗಿ ಶುಭಾಶಯ ತಿಳಿಸಿದವರಿಗೆ ಖುದ್ದಾಗಿ ರಮೇಶ್ ಅರವಿಂದ್ ಕರೆ ಮಾಡಿ ಮಾತನಾಡಲಿದ್ದಾರೆ ಎನ್ನುವುದು ವಿಶೇಷ.

ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ರಮೇಶ್ ಅರವಿಂದ್ ಕೊನೆಯದಾಗಿ ಶಿವಾಜಿ ಸೂರತ್ಕಲ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ 2020ರಲ್ಲಿ ರಿಲೀಸ್ ಆಗಿತ್ತು. ದೊಡ್ಡ ಮಟ್ಟದ ಯಶಸ್ಸು ಸಹ ಕಂಡಿತ್ತು. ಈಗ ಆ ಚಿತ್ರಕ್ಕೆ ಸೀಕ್ವೆಲ್​ ಸಿದ್ಧವಾಗುತ್ತಿದೆ. ಮತ್ತೆ ಡಿಟೆಕ್ಟೀವ್​ ಆಗಿ ಅಭಿಮಾನಿಗಳನ್ನು ಅವರು ರಂಜಿಸಲಿದ್ದಾರೆ. ಚಿತ್ರಕ್ಕೆ ಆಕಾಶ್​ ಶ್ರೀವಸ್ತ ನಿರ್ದೇಶನ ಮಾಡುತ್ತಿದ್ದಾರೆ. ರೇಖಾ ಕೆಎನ್​ ಮತ್ತು ಅನೂಪ್​ ಗೌಡ ನಿರ್ಮಾಣ ಮಾಡುತ್ತಿ​ದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ.

andolana

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

13 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

14 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

14 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

18 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago