ಚಿತ್ರ ಮಂಜರಿ

ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಸವಿದ ಮೋಹಕ ತಾರೆ ರಮ್ಯಾ

ದಾವಣಗೆರೆ: ಡೆಂಟಲ್‌ ಕಾಲೇಜು ರೋಡ್‌ನಲ್ಲಿರುವ ದಾವಣಗೆರೆಯ ಪ್ರಸಿದ್ಧ ಬೆಣ್ಣೆ ದೋಸೆ ಹೋಟೆಲ್‌ ʻಗುರು ಕೊಟ್ಟುರೇಶ್ವರʼದಲ್ಲಿ ಮೋಹಕ ತಾರೆ ರಮ್ಯಾ ದಾವಣಗೆರೆ ಬೆಣ್ಣೆ ದೋಸೆ ಸವಿಸಿದ್ದಾರೆ. ಸೆಲ್ಪಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ.

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿನ್ನೆ ದಾವಣಗೆರೆಯಲ್ಲಿ ನಡೆದ ಹೆಡ್ ಬುಷ್ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅತಿಥಿಯಾಗಿ ಭಾಗಿಯಾಗಿದ್ದ ರಮ್ಯಾ ವೇದಿಕೆಯ ಮೇಲೆ ‘ನಾನು ದಾವಣಗೆರೆಗೆ ಬಂದಿದ್ದೇನೆ. ಇಲ್ಲಿನ ಫೇಮಸ್ ದೋಸೆಯನ್ನು ತಿಂದೇ ಹೋಗುತ್ತೇನೆ’ ಎಂದು ಅಭಿಮಾನಿಗಳಿಗೆ ಮಾತು ಕೊಟ್ಟಿದ್ದರು. ಮಾತು ಕೊಟ್ಟಂತೆ ನಡೆದುಕೊಂಡಿದ್ದಾರೆ ರಮ್ಯಾ. ಇಂದು ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಸವಿದಿದ್ದಾರೆ.

ರಮ್ಯಾ ಕಂಡು ಖುಷಿಗೊಂಡ ಹೋಟೆಲ್ ಮಾಲೀಕರು ರಮ್ಯಾಗೆ ಸ್ಪೆಷಲ್ ಎನ್ನುವಂತೆ ದೋಸೆ ಮಾಡಿಕೊಟ್ಟಿದ್ದಾರೆ. ರಮ್ಯಾ ಜೊತೆ ನಿರ್ಮಾಪಕ ಕಾರ್ತಿಕ್ ಗೌಡ ಕೂಡ ಆಗಮಿಸಿದ್ದರು. ಇಬ್ಬರೂ ಹೊಟ್ಟೆ ತುಂಬುವಷ್ಟು ಬೆಣ್ಣೆ ದೋಸೆ ಸವಿದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರಮ್ಯಾ ಸಿನಿಮಾ ಸಂಬಂಧಿ ಸಾಕಷ್ಟು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅದರಲ್ಲೂ ಕೆ.ಆರ್.ಜಿ ಸಂಸ್ಥೆಯ ಜೊತೆ ಹಲವು ಪ್ರಾಜೆಕ್ಟ್ ಗಳನ್ನು ಕೈಗೆತ್ತಿಕೊಳ್ಳಲು ಚಿಂತನೆ ನಡೆಸಿದ್ದಾರೆ. ಹೀಗಾಗಿಯೇ ಕೆ.ಆರ್.ಜಿ ಪ್ರೊಡಕ್ಷನ್ ನಲ್ಲಿ ಮೂಡಿ ಬರುತ್ತಿರುವ ಸಿನಿಮಾಗಳ ಚಿತ್ರೀಕರಣ ಸ್ಥಳಕ್ಕೂ ರಮ್ಯಾ ಹೋಗುತ್ತಿದ್ದಾರೆ. ಹೊಯ್ಸಳ ಸಿನಿಮಾ ಕೆ.ಆರ್.ಜಿ ಪ್ರೊಡಕ್ಷನ್ ಲಾಂಛನದಲ್ಲಿ ಮೂಡಿ ಬರುತ್ತಿದೆ.ಡಾಲಿ ಧನಂಜಯ್ನಿರ್ಮಾಣ ಮತ್ತು ನಾಯಕನಾಗಿ ನಟಿಸುತ್ತಿರುವ ಹೆಡ್ ಬುಷ್ ಸಿನಿಮಾಗೂ ರಮ್ಯಾ ಅನೇಕ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅದರ ಭಾಗವಾಗಿ ದಾವಣಗೆರೆಯಪ್ರಿ ಇವೆಂಟ್ ರಿಲೀಸ್ ಕಾರ್ಯಕ್ರಮಕ್ಕೂ ಅವರು ಹಾಜರಾಗಿದ್ದಾರೆ. ನಿನ್ನೆ ಕಾರ್ಯಕ್ರಮ ಮುಗಿಸಿ, ಇವತ್ತು ದೋಸೆ ತಿಂದು ಬೆಂಗಳೂರಿನತ್ತ ಪ್ರವಾಸ ಬೆಳೆಸಿದ್ದಾರೆ.

andolana

Recent Posts

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

1 min ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

5 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

5 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

5 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

5 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

5 hours ago