ದಾವಣಗೆರೆ: ಡೆಂಟಲ್ ಕಾಲೇಜು ರೋಡ್ನಲ್ಲಿರುವ ದಾವಣಗೆರೆಯ ಪ್ರಸಿದ್ಧ ಬೆಣ್ಣೆ ದೋಸೆ ಹೋಟೆಲ್ ʻಗುರು ಕೊಟ್ಟುರೇಶ್ವರʼದಲ್ಲಿ ಮೋಹಕ ತಾರೆ ರಮ್ಯಾ ದಾವಣಗೆರೆ ಬೆಣ್ಣೆ ದೋಸೆ ಸವಿಸಿದ್ದಾರೆ. ಸೆಲ್ಪಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿನ್ನೆ ದಾವಣಗೆರೆಯಲ್ಲಿ ನಡೆದ ಹೆಡ್ ಬುಷ್ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅತಿಥಿಯಾಗಿ ಭಾಗಿಯಾಗಿದ್ದ ರಮ್ಯಾ ವೇದಿಕೆಯ ಮೇಲೆ ‘ನಾನು ದಾವಣಗೆರೆಗೆ ಬಂದಿದ್ದೇನೆ. ಇಲ್ಲಿನ ಫೇಮಸ್ ದೋಸೆಯನ್ನು ತಿಂದೇ ಹೋಗುತ್ತೇನೆ’ ಎಂದು ಅಭಿಮಾನಿಗಳಿಗೆ ಮಾತು ಕೊಟ್ಟಿದ್ದರು. ಮಾತು ಕೊಟ್ಟಂತೆ ನಡೆದುಕೊಂಡಿದ್ದಾರೆ ರಮ್ಯಾ. ಇಂದು ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಸವಿದಿದ್ದಾರೆ.
ರಮ್ಯಾ ಕಂಡು ಖುಷಿಗೊಂಡ ಹೋಟೆಲ್ ಮಾಲೀಕರು ರಮ್ಯಾಗೆ ಸ್ಪೆಷಲ್ ಎನ್ನುವಂತೆ ದೋಸೆ ಮಾಡಿಕೊಟ್ಟಿದ್ದಾರೆ. ರಮ್ಯಾ ಜೊತೆ ನಿರ್ಮಾಪಕ ಕಾರ್ತಿಕ್ ಗೌಡ ಕೂಡ ಆಗಮಿಸಿದ್ದರು. ಇಬ್ಬರೂ ಹೊಟ್ಟೆ ತುಂಬುವಷ್ಟು ಬೆಣ್ಣೆ ದೋಸೆ ಸವಿದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ರಮ್ಯಾ ಸಿನಿಮಾ ಸಂಬಂಧಿ ಸಾಕಷ್ಟು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅದರಲ್ಲೂ ಕೆ.ಆರ್.ಜಿ ಸಂಸ್ಥೆಯ ಜೊತೆ ಹಲವು ಪ್ರಾಜೆಕ್ಟ್ ಗಳನ್ನು ಕೈಗೆತ್ತಿಕೊಳ್ಳಲು ಚಿಂತನೆ ನಡೆಸಿದ್ದಾರೆ. ಹೀಗಾಗಿಯೇ ಕೆ.ಆರ್.ಜಿ ಪ್ರೊಡಕ್ಷನ್ ನಲ್ಲಿ ಮೂಡಿ ಬರುತ್ತಿರುವ ಸಿನಿಮಾಗಳ ಚಿತ್ರೀಕರಣ ಸ್ಥಳಕ್ಕೂ ರಮ್ಯಾ ಹೋಗುತ್ತಿದ್ದಾರೆ. ಹೊಯ್ಸಳ ಸಿನಿಮಾ ಕೆ.ಆರ್.ಜಿ ಪ್ರೊಡಕ್ಷನ್ ಲಾಂಛನದಲ್ಲಿ ಮೂಡಿ ಬರುತ್ತಿದೆ.ಡಾಲಿ ಧನಂಜಯ್ನಿರ್ಮಾಣ ಮತ್ತು ನಾಯಕನಾಗಿ ನಟಿಸುತ್ತಿರುವ ಹೆಡ್ ಬುಷ್ ಸಿನಿಮಾಗೂ ರಮ್ಯಾ ಅನೇಕ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅದರ ಭಾಗವಾಗಿ ದಾವಣಗೆರೆಯಪ್ರಿ ಇವೆಂಟ್ ರಿಲೀಸ್ ಕಾರ್ಯಕ್ರಮಕ್ಕೂ ಅವರು ಹಾಜರಾಗಿದ್ದಾರೆ. ನಿನ್ನೆ ಕಾರ್ಯಕ್ರಮ ಮುಗಿಸಿ, ಇವತ್ತು ದೋಸೆ ತಿಂದು ಬೆಂಗಳೂರಿನತ್ತ ಪ್ರವಾಸ ಬೆಳೆಸಿದ್ದಾರೆ.
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…
೧೦೦ ಕಿ.ಮೀ.ಹೆಚ್ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…