ಚಿತ್ರ ಮಂಜರಿ

ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಸವಿದ ಮೋಹಕ ತಾರೆ ರಮ್ಯಾ

ದಾವಣಗೆರೆ: ಡೆಂಟಲ್‌ ಕಾಲೇಜು ರೋಡ್‌ನಲ್ಲಿರುವ ದಾವಣಗೆರೆಯ ಪ್ರಸಿದ್ಧ ಬೆಣ್ಣೆ ದೋಸೆ ಹೋಟೆಲ್‌ ʻಗುರು ಕೊಟ್ಟುರೇಶ್ವರʼದಲ್ಲಿ ಮೋಹಕ ತಾರೆ ರಮ್ಯಾ ದಾವಣಗೆರೆ ಬೆಣ್ಣೆ ದೋಸೆ ಸವಿಸಿದ್ದಾರೆ. ಸೆಲ್ಪಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ.

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿನ್ನೆ ದಾವಣಗೆರೆಯಲ್ಲಿ ನಡೆದ ಹೆಡ್ ಬುಷ್ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅತಿಥಿಯಾಗಿ ಭಾಗಿಯಾಗಿದ್ದ ರಮ್ಯಾ ವೇದಿಕೆಯ ಮೇಲೆ ‘ನಾನು ದಾವಣಗೆರೆಗೆ ಬಂದಿದ್ದೇನೆ. ಇಲ್ಲಿನ ಫೇಮಸ್ ದೋಸೆಯನ್ನು ತಿಂದೇ ಹೋಗುತ್ತೇನೆ’ ಎಂದು ಅಭಿಮಾನಿಗಳಿಗೆ ಮಾತು ಕೊಟ್ಟಿದ್ದರು. ಮಾತು ಕೊಟ್ಟಂತೆ ನಡೆದುಕೊಂಡಿದ್ದಾರೆ ರಮ್ಯಾ. ಇಂದು ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಸವಿದಿದ್ದಾರೆ.

ರಮ್ಯಾ ಕಂಡು ಖುಷಿಗೊಂಡ ಹೋಟೆಲ್ ಮಾಲೀಕರು ರಮ್ಯಾಗೆ ಸ್ಪೆಷಲ್ ಎನ್ನುವಂತೆ ದೋಸೆ ಮಾಡಿಕೊಟ್ಟಿದ್ದಾರೆ. ರಮ್ಯಾ ಜೊತೆ ನಿರ್ಮಾಪಕ ಕಾರ್ತಿಕ್ ಗೌಡ ಕೂಡ ಆಗಮಿಸಿದ್ದರು. ಇಬ್ಬರೂ ಹೊಟ್ಟೆ ತುಂಬುವಷ್ಟು ಬೆಣ್ಣೆ ದೋಸೆ ಸವಿದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರಮ್ಯಾ ಸಿನಿಮಾ ಸಂಬಂಧಿ ಸಾಕಷ್ಟು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅದರಲ್ಲೂ ಕೆ.ಆರ್.ಜಿ ಸಂಸ್ಥೆಯ ಜೊತೆ ಹಲವು ಪ್ರಾಜೆಕ್ಟ್ ಗಳನ್ನು ಕೈಗೆತ್ತಿಕೊಳ್ಳಲು ಚಿಂತನೆ ನಡೆಸಿದ್ದಾರೆ. ಹೀಗಾಗಿಯೇ ಕೆ.ಆರ್.ಜಿ ಪ್ರೊಡಕ್ಷನ್ ನಲ್ಲಿ ಮೂಡಿ ಬರುತ್ತಿರುವ ಸಿನಿಮಾಗಳ ಚಿತ್ರೀಕರಣ ಸ್ಥಳಕ್ಕೂ ರಮ್ಯಾ ಹೋಗುತ್ತಿದ್ದಾರೆ. ಹೊಯ್ಸಳ ಸಿನಿಮಾ ಕೆ.ಆರ್.ಜಿ ಪ್ರೊಡಕ್ಷನ್ ಲಾಂಛನದಲ್ಲಿ ಮೂಡಿ ಬರುತ್ತಿದೆ.ಡಾಲಿ ಧನಂಜಯ್ನಿರ್ಮಾಣ ಮತ್ತು ನಾಯಕನಾಗಿ ನಟಿಸುತ್ತಿರುವ ಹೆಡ್ ಬುಷ್ ಸಿನಿಮಾಗೂ ರಮ್ಯಾ ಅನೇಕ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅದರ ಭಾಗವಾಗಿ ದಾವಣಗೆರೆಯಪ್ರಿ ಇವೆಂಟ್ ರಿಲೀಸ್ ಕಾರ್ಯಕ್ರಮಕ್ಕೂ ಅವರು ಹಾಜರಾಗಿದ್ದಾರೆ. ನಿನ್ನೆ ಕಾರ್ಯಕ್ರಮ ಮುಗಿಸಿ, ಇವತ್ತು ದೋಸೆ ತಿಂದು ಬೆಂಗಳೂರಿನತ್ತ ಪ್ರವಾಸ ಬೆಳೆಸಿದ್ದಾರೆ.

andolana

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

9 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

10 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

10 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

11 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

12 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

16 hours ago