ಚಿತ್ರ ಮಂಜರಿ

ಮೊದಲ ಬಾರಿಗೆ ಮಗಳ ಮುಖ ತೋರಿದ ರಣಬೀರ್​-ಆಲಿಯಾ ಜೋಡಿ

ನವದೆಹಲಿ : ಬಿ ಟೌನ್‌ ಜೋಡಿಗಳಾದ ನಟಿ ಆಲಿಯಾ ಭಟ್​ ಮತ್ತು ನಟ ರಣಬೀರ್​ ಕಪೂರ್​ ಅಭಿಮಾನಿಗಳಿಗೆ ಈ ವರ್ಷದ ಕ್ರಿಸ್​ಮಸ್​ ತುಂಬ ಸ್ಪೆಷಲ್​ ಆಗಿದೆ. ಇದೇ ಮೊದಲ ಬಾರಿಗೆ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ಮಗಳ ಮುಖವನ್ನು ಜಗತ್ತಿಗೆ ಪರಿಚಯಿಸಿದ್ದಾರೆ.

ಈ ದಂಪತಿಗಳು ಪುತ್ರಿಗೆ ರಹಾ ಎಂದು ಹೆಸರಿಟ್ಟಿದ್ದು, ಇದೇ ಮೊದಲ ಬಾರಿಗೆ ಮಾಧ್ಯಮಗಳ ಕ್ಯಾಮೆರಾ ಎದುರು ಮಗಳ ಜೊತೆ ಪೋಸ್​ ನೀಡಿದ್ದಾರೆ. ಇದೀಗ ಈ ಫೋಟೋ ಸಕತ್‌ ವೈರಲ್‌ ಆಗಿದ್ದು, ಮುದ್ದಾಗಿರುವ ʼರಹಾʼ ಳನ್ನು ಕಂಡು ಅಭಿಮಾನಿಗಳು ಖುಷ್‌ ಆಗಿದ್ದಾರೆ.

ಈ ವರ್ಷದ ಕ್ರಿಸ್​ಮಸ್​ ಹಬ್ಬದ ಪ್ರಯುಕ್ತ ಮುಂಬೈನ ಜುಹೂನಲ್ಲಿ ಕಪೂರ್​ ಕುಟುಂಬದವರು ಔತಣ ಕೂಟ ಆಯೋಜಿಸಿದ್ದಾರೆ. ಇದರಲ್ಲಿ ಭಾಗಿಯಾದ ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ಅವರು ಮಗಳನ್ನು ಕೂಡ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಅವರು ಪುತ್ರಿಯ ಮುಖವನ್ನು ತೋರಿಸಿದ್ದಾರೆ.

ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ಪ್ರೀತಿಸಿ, 2022ರ ಏಪ್ರಿಲ್​ 14ರಂದು ಮದುವೆಯಾದರು. ಅದೇ ವರ್ಷ ನವೆಂಬರ್​ 6ರಂದು ಹೆಣ್ಣು ಮಗುವಿಗೆ ಆಲಿಯಾ ಭಟ್​ ಜನ್ಮ ನೀಡಿದರು.

ಅವರು ಮನೆಯಲ್ಲಿ ಮಗಳನ್ನು ಹಲವು ಹೆಸರುಗಳಿಂದ ಕರೆಯುತ್ತಿದ್ದಾರೆ. ರಹು, ರಾರಾ, ಲಾಲಿಪಾಪ್ ಅಂತ ಮಗಳನ್ನು ಮುದ್ದಾಗಿ ಕರೆಯುತ್ತೇವೆ ಎಂದು ಇತ್ತೀಚಿಗೆ ಆಲಿಯಾ ಭಟ್​ ಹೇಳಿದ್ದರು.

andolanait

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

4 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

5 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

6 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

7 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

9 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

10 hours ago