ಚಿತ್ರ ಮಂಜರಿ

ಸಸ್ಯಾಹಾರಿ ಎಂದು ಜಾಹೀರಾತಿನಲ್ಲಿ ಚಿಕನ್‌ ತಿಂದ ರಶ್ಮಿಕಾ: ನೆಟ್ಟಿಗರಿಂದ ಟ್ರೋಲ್

ಮುಂಬೈ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ಕಾರಣದಿಂದ ಸುದ್ದಿಯಲ್ಲಿರುತ್ತಾರೆ. ಸೋಶಿಯಲ್‌ ಮೀಡಿಯಾದಲ್ಲಿ ಅವರ ಬಗ್ಗೆ ಒಂದಲ್ಲ ಒಂದು ವಿಚಾರಕ್ಕೆ ಚರ್ಚೆ ನಡೆಯುತ್ತಲೇ ಇರುತ್ತದೆ.

ಅನೇಕ ಬಾರಿ ಕೆಲವೊಂದು ವಿಷಯಕ್ಕೆ ಟ್ರೋಲ್‌ ಆಗಿದ್ದಾರೆ. ಇದೀಗ ಮತ್ತೊಂದು ಕಾರಣಕ್ಕೆ ಅವರು ನೆಟ್ಟಿಗರ ಟ್ರೋಲ್‌ ಗೆ ಒಳಗಾಗಿದ್ದಾರೆ.

ʼಕಿರಿಕ್‌ ಪಾರ್ಟಿʼ ಬೆಡಗಿ ರಶ್ಮಿಕಾ ಮಂದಣ್ಣ ಹತ್ತಾರು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಜನಪ್ರಿಯ ಬರ್ಗರ್‌ ಬ್ರ್ಯಾಂಡ್‌ ಆಗಿರುವ ಮೆಕ್‌ಡೊನಾಲ್ಡ್ ಅವರ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಜಾಹೀರಾತಿನಲ್ಲಿ ಅವರು ಪ್ರೈಡ್‌ ಚಿಕನ್‌ ತಿಂದಿದ್ದಾರೆ. ಒಟ್ಟಿನಲ್ಲಿ ಈ ಜಾಹೀರಾತು ಮೆಕ್‌ಡೊನಾಲ್ಡ್ ಬ್ರ್ಯಾಂಡ್‌ ಪ್ರಚಾರದ ಜಾಹೀರಾತಾಗಿದೆ.

ಆದರೆ ಚಿಕನ್‌ ತಿಂದದ್ದಕ್ಕೆ ರಶ್ಮಿಕಾ ಟ್ರೋಲ್‌ ಗೆ ಒಳಾಗಿದ್ದಾರೆ. ಅದಕ್ಕೆ ಕಾರಣ ಅವರ ಹಿಂದಿನ ಒಂದು ಮಾತು. ಈ ಹಿಂದೆ ರಶ್ಮಿಕಾ ಅವರು ತಾನು ಸಸ್ಯಾಹಾರಿ ಮತ್ತು ಸಸ್ಯಾಹಾರಿಗಳನ್ನು ಬೆಂಬಲಿಸುತ್ತೇನೆ ಎಂದಿದ್ದರು. ಈ ಮಾತನ್ನು ಹೇಳಿಯೂ ಅವರು ಚಿಕನ್‌ ತಿನ್ನುವ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ.

“ಇಲ್ಲಿ ಸಸ್ಯಾಹಾರಿ ರಶ್ಮಿಕಾ ಪ್ರೈಡ್‌ ಚಿಕನ್‌ ತಿನ್ನುತ್ತಿದ್ದಾರೆ. ಖ್ಯಾತನಾಮರು ಮತ್ತು ಅವರ ಬೂಟಾಟಿಕೆ” ಎಂದು ಬರೆದಿದ್ದಾರೆ. “ನಾವು ಕನ್ನಡಿಗರು ಅವಳನ್ನು ಏಕೆ ಇಷ್ಟಪಡುವುದಿಲ್ಲ ಎಂದು ಈಗಾದರೂ ಅರ್ಥಮಾಡಿಕೊಳ್ಳಿ. ಏಕೆಂದರೆ ಅವಳು ತನ್ನ ಮಾತುಗಳನ್ನು ಅಲ್ಲಿ ಮತ್ತು ಇಲ್ಲಿ ಅನೇಕ ಬಾರಿ ಬದಲಾಯಿಸುತ್ತಾಳೆ” ಎಂದು ಪೋಸ್ಟ್‌ನಲ್ಲಿ ಕಮೆಂಟ್‌ ಮಾಡಿದ್ದಾರೆ.

“ಇದು ನಕಲಿ ಚಿಕನ್‌ ಆಗಿರಬಹುದು ಆದರೆ ಹೌದು ಸಸ್ಯಾಹಾರಿಯಾಗಿದ್ದುಕೊಂಡು ಅವಳು ಈ ಜಾಹೀರಾತನ್ನು ಮಾಡಬಾರದು ಎಂದು ಮತ್ತೊಬ್ಬರು ಹೇಳಿದ್ದಾರೆ.

ಸದ್ಯ ರಶ್ಮಿಕಾ ಸಂದೀಪ್ ರೆಡ್ಡಿ ವಂಗ ಅವರ ʼ ಆ್ಯನಿಮಲ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

andolanait

Recent Posts

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

36 mins ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

1 hour ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

1 hour ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

2 hours ago

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

2 hours ago

ಭಾರತಕ್ಕೆ ಬಂದು ನೇರವಾಗಿ ವಿಚಾರಣೆ ಎದುರಿಸಬೇಕು : ವಿಜಯ್‌ ಮಲ್ಯೆಗೆ ಕೋರ್ಟ್‌ ಚಾಟಿ

ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್‌ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…

2 hours ago