ಚಿತ್ರ ಮಂಜರಿ

ಸಸ್ಯಾಹಾರಿ ಎಂದು ಜಾಹೀರಾತಿನಲ್ಲಿ ಚಿಕನ್‌ ತಿಂದ ರಶ್ಮಿಕಾ: ನೆಟ್ಟಿಗರಿಂದ ಟ್ರೋಲ್

ಮುಂಬೈ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ಕಾರಣದಿಂದ ಸುದ್ದಿಯಲ್ಲಿರುತ್ತಾರೆ. ಸೋಶಿಯಲ್‌ ಮೀಡಿಯಾದಲ್ಲಿ ಅವರ ಬಗ್ಗೆ ಒಂದಲ್ಲ ಒಂದು ವಿಚಾರಕ್ಕೆ ಚರ್ಚೆ ನಡೆಯುತ್ತಲೇ ಇರುತ್ತದೆ.

ಅನೇಕ ಬಾರಿ ಕೆಲವೊಂದು ವಿಷಯಕ್ಕೆ ಟ್ರೋಲ್‌ ಆಗಿದ್ದಾರೆ. ಇದೀಗ ಮತ್ತೊಂದು ಕಾರಣಕ್ಕೆ ಅವರು ನೆಟ್ಟಿಗರ ಟ್ರೋಲ್‌ ಗೆ ಒಳಗಾಗಿದ್ದಾರೆ.

ʼಕಿರಿಕ್‌ ಪಾರ್ಟಿʼ ಬೆಡಗಿ ರಶ್ಮಿಕಾ ಮಂದಣ್ಣ ಹತ್ತಾರು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಜನಪ್ರಿಯ ಬರ್ಗರ್‌ ಬ್ರ್ಯಾಂಡ್‌ ಆಗಿರುವ ಮೆಕ್‌ಡೊನಾಲ್ಡ್ ಅವರ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಜಾಹೀರಾತಿನಲ್ಲಿ ಅವರು ಪ್ರೈಡ್‌ ಚಿಕನ್‌ ತಿಂದಿದ್ದಾರೆ. ಒಟ್ಟಿನಲ್ಲಿ ಈ ಜಾಹೀರಾತು ಮೆಕ್‌ಡೊನಾಲ್ಡ್ ಬ್ರ್ಯಾಂಡ್‌ ಪ್ರಚಾರದ ಜಾಹೀರಾತಾಗಿದೆ.

ಆದರೆ ಚಿಕನ್‌ ತಿಂದದ್ದಕ್ಕೆ ರಶ್ಮಿಕಾ ಟ್ರೋಲ್‌ ಗೆ ಒಳಾಗಿದ್ದಾರೆ. ಅದಕ್ಕೆ ಕಾರಣ ಅವರ ಹಿಂದಿನ ಒಂದು ಮಾತು. ಈ ಹಿಂದೆ ರಶ್ಮಿಕಾ ಅವರು ತಾನು ಸಸ್ಯಾಹಾರಿ ಮತ್ತು ಸಸ್ಯಾಹಾರಿಗಳನ್ನು ಬೆಂಬಲಿಸುತ್ತೇನೆ ಎಂದಿದ್ದರು. ಈ ಮಾತನ್ನು ಹೇಳಿಯೂ ಅವರು ಚಿಕನ್‌ ತಿನ್ನುವ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ.

“ಇಲ್ಲಿ ಸಸ್ಯಾಹಾರಿ ರಶ್ಮಿಕಾ ಪ್ರೈಡ್‌ ಚಿಕನ್‌ ತಿನ್ನುತ್ತಿದ್ದಾರೆ. ಖ್ಯಾತನಾಮರು ಮತ್ತು ಅವರ ಬೂಟಾಟಿಕೆ” ಎಂದು ಬರೆದಿದ್ದಾರೆ. “ನಾವು ಕನ್ನಡಿಗರು ಅವಳನ್ನು ಏಕೆ ಇಷ್ಟಪಡುವುದಿಲ್ಲ ಎಂದು ಈಗಾದರೂ ಅರ್ಥಮಾಡಿಕೊಳ್ಳಿ. ಏಕೆಂದರೆ ಅವಳು ತನ್ನ ಮಾತುಗಳನ್ನು ಅಲ್ಲಿ ಮತ್ತು ಇಲ್ಲಿ ಅನೇಕ ಬಾರಿ ಬದಲಾಯಿಸುತ್ತಾಳೆ” ಎಂದು ಪೋಸ್ಟ್‌ನಲ್ಲಿ ಕಮೆಂಟ್‌ ಮಾಡಿದ್ದಾರೆ.

“ಇದು ನಕಲಿ ಚಿಕನ್‌ ಆಗಿರಬಹುದು ಆದರೆ ಹೌದು ಸಸ್ಯಾಹಾರಿಯಾಗಿದ್ದುಕೊಂಡು ಅವಳು ಈ ಜಾಹೀರಾತನ್ನು ಮಾಡಬಾರದು ಎಂದು ಮತ್ತೊಬ್ಬರು ಹೇಳಿದ್ದಾರೆ.

ಸದ್ಯ ರಶ್ಮಿಕಾ ಸಂದೀಪ್ ರೆಡ್ಡಿ ವಂಗ ಅವರ ʼ ಆ್ಯನಿಮಲ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

13 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

14 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

15 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

16 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

20 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

20 hours ago