ಚಿತ್ರ ಮಂಜರಿ

ಸಸ್ಯಾಹಾರಿ ಎಂದು ಜಾಹೀರಾತಿನಲ್ಲಿ ಚಿಕನ್‌ ತಿಂದ ರಶ್ಮಿಕಾ: ನೆಟ್ಟಿಗರಿಂದ ಟ್ರೋಲ್

ಮುಂಬೈ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ಕಾರಣದಿಂದ ಸುದ್ದಿಯಲ್ಲಿರುತ್ತಾರೆ. ಸೋಶಿಯಲ್‌ ಮೀಡಿಯಾದಲ್ಲಿ ಅವರ ಬಗ್ಗೆ ಒಂದಲ್ಲ ಒಂದು ವಿಚಾರಕ್ಕೆ ಚರ್ಚೆ ನಡೆಯುತ್ತಲೇ ಇರುತ್ತದೆ.

ಅನೇಕ ಬಾರಿ ಕೆಲವೊಂದು ವಿಷಯಕ್ಕೆ ಟ್ರೋಲ್‌ ಆಗಿದ್ದಾರೆ. ಇದೀಗ ಮತ್ತೊಂದು ಕಾರಣಕ್ಕೆ ಅವರು ನೆಟ್ಟಿಗರ ಟ್ರೋಲ್‌ ಗೆ ಒಳಗಾಗಿದ್ದಾರೆ.

ʼಕಿರಿಕ್‌ ಪಾರ್ಟಿʼ ಬೆಡಗಿ ರಶ್ಮಿಕಾ ಮಂದಣ್ಣ ಹತ್ತಾರು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಜನಪ್ರಿಯ ಬರ್ಗರ್‌ ಬ್ರ್ಯಾಂಡ್‌ ಆಗಿರುವ ಮೆಕ್‌ಡೊನಾಲ್ಡ್ ಅವರ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಜಾಹೀರಾತಿನಲ್ಲಿ ಅವರು ಪ್ರೈಡ್‌ ಚಿಕನ್‌ ತಿಂದಿದ್ದಾರೆ. ಒಟ್ಟಿನಲ್ಲಿ ಈ ಜಾಹೀರಾತು ಮೆಕ್‌ಡೊನಾಲ್ಡ್ ಬ್ರ್ಯಾಂಡ್‌ ಪ್ರಚಾರದ ಜಾಹೀರಾತಾಗಿದೆ.

ಆದರೆ ಚಿಕನ್‌ ತಿಂದದ್ದಕ್ಕೆ ರಶ್ಮಿಕಾ ಟ್ರೋಲ್‌ ಗೆ ಒಳಾಗಿದ್ದಾರೆ. ಅದಕ್ಕೆ ಕಾರಣ ಅವರ ಹಿಂದಿನ ಒಂದು ಮಾತು. ಈ ಹಿಂದೆ ರಶ್ಮಿಕಾ ಅವರು ತಾನು ಸಸ್ಯಾಹಾರಿ ಮತ್ತು ಸಸ್ಯಾಹಾರಿಗಳನ್ನು ಬೆಂಬಲಿಸುತ್ತೇನೆ ಎಂದಿದ್ದರು. ಈ ಮಾತನ್ನು ಹೇಳಿಯೂ ಅವರು ಚಿಕನ್‌ ತಿನ್ನುವ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ.

“ಇಲ್ಲಿ ಸಸ್ಯಾಹಾರಿ ರಶ್ಮಿಕಾ ಪ್ರೈಡ್‌ ಚಿಕನ್‌ ತಿನ್ನುತ್ತಿದ್ದಾರೆ. ಖ್ಯಾತನಾಮರು ಮತ್ತು ಅವರ ಬೂಟಾಟಿಕೆ” ಎಂದು ಬರೆದಿದ್ದಾರೆ. “ನಾವು ಕನ್ನಡಿಗರು ಅವಳನ್ನು ಏಕೆ ಇಷ್ಟಪಡುವುದಿಲ್ಲ ಎಂದು ಈಗಾದರೂ ಅರ್ಥಮಾಡಿಕೊಳ್ಳಿ. ಏಕೆಂದರೆ ಅವಳು ತನ್ನ ಮಾತುಗಳನ್ನು ಅಲ್ಲಿ ಮತ್ತು ಇಲ್ಲಿ ಅನೇಕ ಬಾರಿ ಬದಲಾಯಿಸುತ್ತಾಳೆ” ಎಂದು ಪೋಸ್ಟ್‌ನಲ್ಲಿ ಕಮೆಂಟ್‌ ಮಾಡಿದ್ದಾರೆ.

“ಇದು ನಕಲಿ ಚಿಕನ್‌ ಆಗಿರಬಹುದು ಆದರೆ ಹೌದು ಸಸ್ಯಾಹಾರಿಯಾಗಿದ್ದುಕೊಂಡು ಅವಳು ಈ ಜಾಹೀರಾತನ್ನು ಮಾಡಬಾರದು ಎಂದು ಮತ್ತೊಬ್ಬರು ಹೇಳಿದ್ದಾರೆ.

ಸದ್ಯ ರಶ್ಮಿಕಾ ಸಂದೀಪ್ ರೆಡ್ಡಿ ವಂಗ ಅವರ ʼ ಆ್ಯನಿಮಲ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

12 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

12 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

12 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

12 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

12 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

12 hours ago