ಚಿತ್ರ ಮಂಜರಿ

ಸಸ್ಯಾಹಾರಿ ಎಂದು ಜಾಹೀರಾತಿನಲ್ಲಿ ಚಿಕನ್‌ ತಿಂದ ರಶ್ಮಿಕಾ: ನೆಟ್ಟಿಗರಿಂದ ಟ್ರೋಲ್

ಮುಂಬೈ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ಕಾರಣದಿಂದ ಸುದ್ದಿಯಲ್ಲಿರುತ್ತಾರೆ. ಸೋಶಿಯಲ್‌ ಮೀಡಿಯಾದಲ್ಲಿ ಅವರ ಬಗ್ಗೆ ಒಂದಲ್ಲ ಒಂದು ವಿಚಾರಕ್ಕೆ ಚರ್ಚೆ ನಡೆಯುತ್ತಲೇ ಇರುತ್ತದೆ.

ಅನೇಕ ಬಾರಿ ಕೆಲವೊಂದು ವಿಷಯಕ್ಕೆ ಟ್ರೋಲ್‌ ಆಗಿದ್ದಾರೆ. ಇದೀಗ ಮತ್ತೊಂದು ಕಾರಣಕ್ಕೆ ಅವರು ನೆಟ್ಟಿಗರ ಟ್ರೋಲ್‌ ಗೆ ಒಳಗಾಗಿದ್ದಾರೆ.

ʼಕಿರಿಕ್‌ ಪಾರ್ಟಿʼ ಬೆಡಗಿ ರಶ್ಮಿಕಾ ಮಂದಣ್ಣ ಹತ್ತಾರು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಜನಪ್ರಿಯ ಬರ್ಗರ್‌ ಬ್ರ್ಯಾಂಡ್‌ ಆಗಿರುವ ಮೆಕ್‌ಡೊನಾಲ್ಡ್ ಅವರ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಜಾಹೀರಾತಿನಲ್ಲಿ ಅವರು ಪ್ರೈಡ್‌ ಚಿಕನ್‌ ತಿಂದಿದ್ದಾರೆ. ಒಟ್ಟಿನಲ್ಲಿ ಈ ಜಾಹೀರಾತು ಮೆಕ್‌ಡೊನಾಲ್ಡ್ ಬ್ರ್ಯಾಂಡ್‌ ಪ್ರಚಾರದ ಜಾಹೀರಾತಾಗಿದೆ.

ಆದರೆ ಚಿಕನ್‌ ತಿಂದದ್ದಕ್ಕೆ ರಶ್ಮಿಕಾ ಟ್ರೋಲ್‌ ಗೆ ಒಳಾಗಿದ್ದಾರೆ. ಅದಕ್ಕೆ ಕಾರಣ ಅವರ ಹಿಂದಿನ ಒಂದು ಮಾತು. ಈ ಹಿಂದೆ ರಶ್ಮಿಕಾ ಅವರು ತಾನು ಸಸ್ಯಾಹಾರಿ ಮತ್ತು ಸಸ್ಯಾಹಾರಿಗಳನ್ನು ಬೆಂಬಲಿಸುತ್ತೇನೆ ಎಂದಿದ್ದರು. ಈ ಮಾತನ್ನು ಹೇಳಿಯೂ ಅವರು ಚಿಕನ್‌ ತಿನ್ನುವ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ.

“ಇಲ್ಲಿ ಸಸ್ಯಾಹಾರಿ ರಶ್ಮಿಕಾ ಪ್ರೈಡ್‌ ಚಿಕನ್‌ ತಿನ್ನುತ್ತಿದ್ದಾರೆ. ಖ್ಯಾತನಾಮರು ಮತ್ತು ಅವರ ಬೂಟಾಟಿಕೆ” ಎಂದು ಬರೆದಿದ್ದಾರೆ. “ನಾವು ಕನ್ನಡಿಗರು ಅವಳನ್ನು ಏಕೆ ಇಷ್ಟಪಡುವುದಿಲ್ಲ ಎಂದು ಈಗಾದರೂ ಅರ್ಥಮಾಡಿಕೊಳ್ಳಿ. ಏಕೆಂದರೆ ಅವಳು ತನ್ನ ಮಾತುಗಳನ್ನು ಅಲ್ಲಿ ಮತ್ತು ಇಲ್ಲಿ ಅನೇಕ ಬಾರಿ ಬದಲಾಯಿಸುತ್ತಾಳೆ” ಎಂದು ಪೋಸ್ಟ್‌ನಲ್ಲಿ ಕಮೆಂಟ್‌ ಮಾಡಿದ್ದಾರೆ.

“ಇದು ನಕಲಿ ಚಿಕನ್‌ ಆಗಿರಬಹುದು ಆದರೆ ಹೌದು ಸಸ್ಯಾಹಾರಿಯಾಗಿದ್ದುಕೊಂಡು ಅವಳು ಈ ಜಾಹೀರಾತನ್ನು ಮಾಡಬಾರದು ಎಂದು ಮತ್ತೊಬ್ಬರು ಹೇಳಿದ್ದಾರೆ.

ಸದ್ಯ ರಶ್ಮಿಕಾ ಸಂದೀಪ್ ರೆಡ್ಡಿ ವಂಗ ಅವರ ʼ ಆ್ಯನಿಮಲ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

4 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

6 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

6 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

10 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

15 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

15 hours ago