ಬೆಂಗಳೂರು : ರಶ್ಮಿಕ ಮಂದಣ್ಣ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಪಪ್ರಚಾರಗಳಿಂದ ನೊಂದಿರುವುದಾಗಿ ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾದ ಪೋಸ್ಟ್ ಪ್ರಕಟಿಸಿರುವ ಅವರು, ರಚನಾತ್ಮಕ ಟೀಕೆಗಳನ್ನು ಸ್ವಾಗತಿಸುತ್ತೇನೆ. ಆದರೆ ಸುಳ್ಳು ಮತ್ತು ಸೃಷ್ಟೀಕೃತ ನಕಲಿ ಮಾಹಿತಿಗಳು ತಮ್ಮನ್ನು ಘಾಸಿ ಮಾಡಿವೆ ಎಂದು ಹೇಳಿಕೊಂಡಿದ್ದಾರೆ.
ಕೆಲವು ವಿಷಯಗಳು ನನಗೆ ತೊಂದರೆ ಕೊಡುತ್ತಿವೆ. ಸುಮಾರು ಒಂದು ವರ್ಷದಿಂದಲೂ ಮಾತನಾಡಲು ಸಾಧ್ಯ. ಈ ಬಗ್ಗೆ ನಾನು ವರ್ಷದ ಮೊದಲೇ ಪ್ರತಿಕ್ರಿಯಿಸಬೇಕಿತ್ತು ಎಂದಿದ್ದಾರೆ.
ನಾನು ವೃತ್ತಿ ಜೀವನ ಆರಂಭಿಸಿದ ದಿನದಿಂದಲೂ ನನ್ನನ್ನು ಪಂಚಿಂಗ್ ಬ್ಯಾಗಿಗೆ ಹಾಕಿ ಟ್ರೋಲರ್ಗಳು ತಮ್ಮ ಮನಸಿಗೆ ಬಂದಂತೆ ವರ್ತಿಸುತ್ತಿದ್ದಾರೆ. ಮುಕ್ತಾಯವಿಲ್ಲದಷ್ಟು ದ್ವೇಷವನ್ನು ನನ್ನ ವಿರುದ್ದ ಕಾರಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.
ನನ್ನ ಸುತ್ತಮುತ್ತ ಇರುವವರಿಗೆ, ನನ್ನ ಪ್ರೀತಿಸುವವರಿಗೆ, ನನ್ನ ಜೊತೆ ಕೆಲಸ ಮಾಡುವವರಿಗೆ ನಾನೇಂದು ಗೊತ್ತು. ಅವರು ನನ್ನನ್ನು ಒಪ್ಪಿಕೊಳ್ಳುತ್ತಾರೆ. ಮಂದೆಯೂ ನಾನು ನಿಮಗಾಗಿ ಉತ್ತಮವಾದುದನ್ನು ಕೊಡಲು ಕಠಿಣ ಶ್ರಮಪಡುತ್ತೇನೆ. ನಿಮ್ಮನ್ನು ಸಂತೋಷಪಡಿಸುವುದು, ಮತ್ತು ಉತ್ತಮ ನಾಳೆಗಳಿಗಾಗಿ ನಾನು ಕೆಲಸ ಮಾಡುವುದನ್ನು ಮುಂದುವರೆಸುತ್ತೇನೆ ಎಂದು ಹೇಳಿದ್ದಾರೆ.
ಟ್ರೋಲರ್ಗಳ ಹೊರತಾಗಿ ನನ್ನ ಗುರುತಿಸಿದವರು, ನನ್ನ ಪ್ರೀತಿಸಿದವರು ಸಾಕಷ್ಟು ಬೆಂಬಲ ನೀಡಿದ್ದಾರೆ. ಹಾಗಾಗಿ ಬಹಳ ದೀರ್ಘ ಕಾಲದಿಂದಲೂ ನಾನು ಟ್ರೋಲ್ಗಳನ್ನು ನಿರ್ಲಕ್ಷಿಸುತ್ತಾ ಬಂದೆ ಆದರೆ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಕೆಟ್ಟದಾಗಿ ಟ್ರೋಲ್ ಮಾಡಲು ಆರಂಭಿಸಿದ್ದಾರೆ. ನಾನು ಯಾರನ್ನು ಗೆಲ್ಲಲು ಬಯಸುವುದಿಲ್ಲ.
ರಚನಾತ್ಮಕ ಟೀಕೆಗಳನ್ನು ಸ್ವೀಕರಿಸುವ ಮೂಲಕ ನನ್ನನ್ನು ನಾನು ಸರಿಪಡಿಸಲು ಪ್ರಯತ್ನಿಸುತ್ತೇನೆ. ಆದರೆ ನಕಾರಾತ್ಮಕ ಮತ್ತು ದ್ವೇಷಪೂರಿತ ಟೀಕೆಗಳು ನನಗೆ ನೋವುಂಟು ಮಾಡಿವೆ ಎಂದಿದ್ದಾರೆ.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…