ಬೆಂಗಳೂರು : ರಶ್ಮಿಕ ಮಂದಣ್ಣ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಪಪ್ರಚಾರಗಳಿಂದ ನೊಂದಿರುವುದಾಗಿ ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾದ ಪೋಸ್ಟ್ ಪ್ರಕಟಿಸಿರುವ ಅವರು, ರಚನಾತ್ಮಕ ಟೀಕೆಗಳನ್ನು ಸ್ವಾಗತಿಸುತ್ತೇನೆ. ಆದರೆ ಸುಳ್ಳು ಮತ್ತು ಸೃಷ್ಟೀಕೃತ ನಕಲಿ ಮಾಹಿತಿಗಳು ತಮ್ಮನ್ನು ಘಾಸಿ ಮಾಡಿವೆ ಎಂದು ಹೇಳಿಕೊಂಡಿದ್ದಾರೆ.
ಕೆಲವು ವಿಷಯಗಳು ನನಗೆ ತೊಂದರೆ ಕೊಡುತ್ತಿವೆ. ಸುಮಾರು ಒಂದು ವರ್ಷದಿಂದಲೂ ಮಾತನಾಡಲು ಸಾಧ್ಯ. ಈ ಬಗ್ಗೆ ನಾನು ವರ್ಷದ ಮೊದಲೇ ಪ್ರತಿಕ್ರಿಯಿಸಬೇಕಿತ್ತು ಎಂದಿದ್ದಾರೆ.
ನಾನು ವೃತ್ತಿ ಜೀವನ ಆರಂಭಿಸಿದ ದಿನದಿಂದಲೂ ನನ್ನನ್ನು ಪಂಚಿಂಗ್ ಬ್ಯಾಗಿಗೆ ಹಾಕಿ ಟ್ರೋಲರ್ಗಳು ತಮ್ಮ ಮನಸಿಗೆ ಬಂದಂತೆ ವರ್ತಿಸುತ್ತಿದ್ದಾರೆ. ಮುಕ್ತಾಯವಿಲ್ಲದಷ್ಟು ದ್ವೇಷವನ್ನು ನನ್ನ ವಿರುದ್ದ ಕಾರಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.
ನನ್ನ ಸುತ್ತಮುತ್ತ ಇರುವವರಿಗೆ, ನನ್ನ ಪ್ರೀತಿಸುವವರಿಗೆ, ನನ್ನ ಜೊತೆ ಕೆಲಸ ಮಾಡುವವರಿಗೆ ನಾನೇಂದು ಗೊತ್ತು. ಅವರು ನನ್ನನ್ನು ಒಪ್ಪಿಕೊಳ್ಳುತ್ತಾರೆ. ಮಂದೆಯೂ ನಾನು ನಿಮಗಾಗಿ ಉತ್ತಮವಾದುದನ್ನು ಕೊಡಲು ಕಠಿಣ ಶ್ರಮಪಡುತ್ತೇನೆ. ನಿಮ್ಮನ್ನು ಸಂತೋಷಪಡಿಸುವುದು, ಮತ್ತು ಉತ್ತಮ ನಾಳೆಗಳಿಗಾಗಿ ನಾನು ಕೆಲಸ ಮಾಡುವುದನ್ನು ಮುಂದುವರೆಸುತ್ತೇನೆ ಎಂದು ಹೇಳಿದ್ದಾರೆ.
ಟ್ರೋಲರ್ಗಳ ಹೊರತಾಗಿ ನನ್ನ ಗುರುತಿಸಿದವರು, ನನ್ನ ಪ್ರೀತಿಸಿದವರು ಸಾಕಷ್ಟು ಬೆಂಬಲ ನೀಡಿದ್ದಾರೆ. ಹಾಗಾಗಿ ಬಹಳ ದೀರ್ಘ ಕಾಲದಿಂದಲೂ ನಾನು ಟ್ರೋಲ್ಗಳನ್ನು ನಿರ್ಲಕ್ಷಿಸುತ್ತಾ ಬಂದೆ ಆದರೆ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಕೆಟ್ಟದಾಗಿ ಟ್ರೋಲ್ ಮಾಡಲು ಆರಂಭಿಸಿದ್ದಾರೆ. ನಾನು ಯಾರನ್ನು ಗೆಲ್ಲಲು ಬಯಸುವುದಿಲ್ಲ.
ರಚನಾತ್ಮಕ ಟೀಕೆಗಳನ್ನು ಸ್ವೀಕರಿಸುವ ಮೂಲಕ ನನ್ನನ್ನು ನಾನು ಸರಿಪಡಿಸಲು ಪ್ರಯತ್ನಿಸುತ್ತೇನೆ. ಆದರೆ ನಕಾರಾತ್ಮಕ ಮತ್ತು ದ್ವೇಷಪೂರಿತ ಟೀಕೆಗಳು ನನಗೆ ನೋವುಂಟು ಮಾಡಿವೆ ಎಂದಿದ್ದಾರೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್…
ಕಠ್ಮಂಡು: ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…
ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…
ಇಸ್ಲಾಮಾಬಾದ್: ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ನ ಉನ್ನತ ಕಮಾಂಡರ್ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…