ಬೆಂಗಳೂರು : ರಶ್ಮಿಕ ಮಂದಣ್ಣ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಪಪ್ರಚಾರಗಳಿಂದ ನೊಂದಿರುವುದಾಗಿ ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾದ ಪೋಸ್ಟ್ ಪ್ರಕಟಿಸಿರುವ ಅವರು, ರಚನಾತ್ಮಕ ಟೀಕೆಗಳನ್ನು ಸ್ವಾಗತಿಸುತ್ತೇನೆ. ಆದರೆ ಸುಳ್ಳು ಮತ್ತು ಸೃಷ್ಟೀಕೃತ ನಕಲಿ ಮಾಹಿತಿಗಳು ತಮ್ಮನ್ನು ಘಾಸಿ ಮಾಡಿವೆ ಎಂದು ಹೇಳಿಕೊಂಡಿದ್ದಾರೆ.
ಕೆಲವು ವಿಷಯಗಳು ನನಗೆ ತೊಂದರೆ ಕೊಡುತ್ತಿವೆ. ಸುಮಾರು ಒಂದು ವರ್ಷದಿಂದಲೂ ಮಾತನಾಡಲು ಸಾಧ್ಯ. ಈ ಬಗ್ಗೆ ನಾನು ವರ್ಷದ ಮೊದಲೇ ಪ್ರತಿಕ್ರಿಯಿಸಬೇಕಿತ್ತು ಎಂದಿದ್ದಾರೆ.
ನಾನು ವೃತ್ತಿ ಜೀವನ ಆರಂಭಿಸಿದ ದಿನದಿಂದಲೂ ನನ್ನನ್ನು ಪಂಚಿಂಗ್ ಬ್ಯಾಗಿಗೆ ಹಾಕಿ ಟ್ರೋಲರ್ಗಳು ತಮ್ಮ ಮನಸಿಗೆ ಬಂದಂತೆ ವರ್ತಿಸುತ್ತಿದ್ದಾರೆ. ಮುಕ್ತಾಯವಿಲ್ಲದಷ್ಟು ದ್ವೇಷವನ್ನು ನನ್ನ ವಿರುದ್ದ ಕಾರಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.
ನನ್ನ ಸುತ್ತಮುತ್ತ ಇರುವವರಿಗೆ, ನನ್ನ ಪ್ರೀತಿಸುವವರಿಗೆ, ನನ್ನ ಜೊತೆ ಕೆಲಸ ಮಾಡುವವರಿಗೆ ನಾನೇಂದು ಗೊತ್ತು. ಅವರು ನನ್ನನ್ನು ಒಪ್ಪಿಕೊಳ್ಳುತ್ತಾರೆ. ಮಂದೆಯೂ ನಾನು ನಿಮಗಾಗಿ ಉತ್ತಮವಾದುದನ್ನು ಕೊಡಲು ಕಠಿಣ ಶ್ರಮಪಡುತ್ತೇನೆ. ನಿಮ್ಮನ್ನು ಸಂತೋಷಪಡಿಸುವುದು, ಮತ್ತು ಉತ್ತಮ ನಾಳೆಗಳಿಗಾಗಿ ನಾನು ಕೆಲಸ ಮಾಡುವುದನ್ನು ಮುಂದುವರೆಸುತ್ತೇನೆ ಎಂದು ಹೇಳಿದ್ದಾರೆ.
ಟ್ರೋಲರ್ಗಳ ಹೊರತಾಗಿ ನನ್ನ ಗುರುತಿಸಿದವರು, ನನ್ನ ಪ್ರೀತಿಸಿದವರು ಸಾಕಷ್ಟು ಬೆಂಬಲ ನೀಡಿದ್ದಾರೆ. ಹಾಗಾಗಿ ಬಹಳ ದೀರ್ಘ ಕಾಲದಿಂದಲೂ ನಾನು ಟ್ರೋಲ್ಗಳನ್ನು ನಿರ್ಲಕ್ಷಿಸುತ್ತಾ ಬಂದೆ ಆದರೆ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಕೆಟ್ಟದಾಗಿ ಟ್ರೋಲ್ ಮಾಡಲು ಆರಂಭಿಸಿದ್ದಾರೆ. ನಾನು ಯಾರನ್ನು ಗೆಲ್ಲಲು ಬಯಸುವುದಿಲ್ಲ.
ರಚನಾತ್ಮಕ ಟೀಕೆಗಳನ್ನು ಸ್ವೀಕರಿಸುವ ಮೂಲಕ ನನ್ನನ್ನು ನಾನು ಸರಿಪಡಿಸಲು ಪ್ರಯತ್ನಿಸುತ್ತೇನೆ. ಆದರೆ ನಕಾರಾತ್ಮಕ ಮತ್ತು ದ್ವೇಷಪೂರಿತ ಟೀಕೆಗಳು ನನಗೆ ನೋವುಂಟು ಮಾಡಿವೆ ಎಂದಿದ್ದಾರೆ.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…