ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೇ ಬಾಲಿವುಡ್ನಲ್ಲೂ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಅವರು ಅಲ್ಲಿನ ಸ್ಟಾರ್ ಹೀರೋಗಳ ಜೊತೆ ತೆರೆ ಹಂಚಿಕೊಂಡಿದ್ದಾರೆ.
ನಟ ಶಾರುಖ್ ಖಾನ್ ಅವರು ಜವಾನ್ ಸಿನಿಮಾದ ಬಿಡುಗಡೆಗೆ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಅವರು ಈಗ ಯಶಸ್ಸಿನ ಟ್ರ್ಯಾಕ್ನಲ್ಲಿ ಇದ್ದಾರೆ. ಪಠಾಣ್ ಸಿನಿಮಾ ಸೂಪರ್ ಹಿಟ್ ಆದ ಬಳಿಕ ಅವರಿಗೆ ಇದ್ದ ಬೇಡಿಕೆ ಹೆಚ್ಚಾಗಿದೆ.
ಅವರ ಜೊತೆ ಸಿನಿಮಾ ಮಾಡಬೇಕು ಎಂದು ಅನೇಕ ನಿರ್ಮಾಪಕರು ಕಾಯುತ್ತಿದ್ದಾರೆ. ಶಾರುಖ್ ಖಾನ್ ಜೊತೆ ತೆರೆ ಹಂಚಿಕೊಳ್ಳಬೇಕು ಎಂಬುದು ಬಹುತೇಕ ಎಲ್ಲ ನಟಿಯರ ಆಸೆ ಆಗಿರುತ್ತದೆ. ಈಗ ರಶ್ಮಿಕಾ ಮಂದಣ್ಣ ಅವರಿಗೆ ಅಂಥ ಅವಕಾಶ ಸಿಕ್ಕಿದೆ. ಆದರೆ ಇದು ಸಿನಿಮಾದಲ್ಲಿ ಅಲ್ಲ. ಬದಲಿಗೆ, ಜಾಹೀರಾತಿನಲ್ಲಿ ಶಾರುಖ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅವರು ಸ್ಕ್ರೀನ್ ಶೇರ್ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಇದು ರಶ್ಮಿಕಾ ಅಭಿಮಾನಿಗಳಿಗೆ ಖುಷಿ ನೀಡಿದೆ.
ಯಶ್ ರಾಜ್ ಸ್ಟುಡಿಯೋದಲ್ಲಿ ಈ ಜಾಹೀರಾತಿನ ಶೂಟಿಂಗ್ ನಡೆದಿದೆ. ರಶ್ಮಿಕಾ ಮಂದಣ್ಣ ಮತ್ತು ಶಾರುಖ್ ಖಾನ್ ಅವರು ಜೊತೆಯಾಗಿ ಇದರಲ್ಲಿ ನಟಿಸಿದ್ದಾರೆ. ಶೀಘ್ರದಲ್ಲೇ ಈ ಜಾಹೀರಾತು ಬಿತ್ತರ ಆಗಲಿದೆ. ಈ ಹಿಂದೆ ರಶ್ಮಿಕಾ ಮಂದಣ್ಣ ಅವರು ವಿಕ್ಕಿ ಕೌಶಲ್ ಜೊತೆ ಒಂದು ಜಾಹೀರಾತಿನಲ್ಲಿ ನಟಿಸಿದ್ದರು. ಅದರ ಕಾನ್ಸೆಪ್ಟ್ ಆಕ್ಷೇಪಾರ್ಹವಾಗಿದೆ ಎಂದು ನೆಟ್ಟಿಗರು ತಕರಾರು ತೆಗೆದಿದ್ದರು. ಈಗ ಶಾರುಖ್ ಜೊತೆ ರಶ್ಮಿಕಾ ನಟಿಸಿದ ಜಾಹೀರಾತು ಹೇಗಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.
ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೇ ಬಾಲಿವುಡ್ನಲ್ಲೂ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಅವರು ಅಲ್ಲಿನ ಸ್ಟಾರ್ ಹೀರೋಗಳ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅಮಿತಾಭ್ ಬಚ್ಚನ್ ಜೊತೆ ಗುಡ್ ಬೈ ಚಿತ್ರದಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿತ್ತು. ಮಿಷನ್ ಮಜ್ನು ಚಿತ್ರದಲ್ಲಿ ಸಿದ್ದಾರ್ಥ್ ಮಲ್ಹೋತ್ರಾಗೆ ಜೋಡಿಯಾಗಿದ್ದ ರಶ್ಮಿಕಾ ಅವರು, ಅನಿಮಲ್ ಸಿನಿಮಾದಲ್ಲಿ ರಣಬೀರ್ ಕಪೂರ್ ಜೊತೆ ನಟಿಸಿದ್ದಾರೆ. ಆ ಸಿನಿಮಾ ಡಿಸೆಂಬರ್ 1ರಂದು ಬಿಡುಗಡೆ ಆಗಲಿದೆ.
ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾ ಸೆಪ್ಟೆಂಬರ್ 7ರಂದು ಬಿಡುಗಡೆ ಆಗಲಿದೆ. ಆ ಸಿನಿಮಾ ಮೇಲೆ ಅಭಿಮಾನಿಗಳ ಸಖತ್ ಭರವಸೆ ಇದೆ. ನಯನತಾರಾ, ವಿಜಯ್ ಸೇತುಪತಿ, ದೀಪಿಕಾ ಪಡುಕೋಣೆ ಮುಂತಾದ ಘಟಾನುಘಟಿಗಳು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಪ್ರಿವ್ಯೂ ವಿಡಿಯೋ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ಜವಾನ್ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ರೆಡ್ ಚಿಲ್ಲೀಸ್ ಎಂಟರ್ಟೇನ್ಮೆಂಟ್ ಮೂಲಕ ಅದ್ದೂರಿಯಾಗಿ ಈ ಸಿನಿಮಾ ನಿರ್ಮಾಣ ಆಗಿದೆ.
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…
ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ…
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…
ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್…