ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೌತ್ ಮತ್ತು ಬಾಲಿವುಡ್ ಎರಡೂ ಕಡೆ ರಶ್ಮಿಕಾ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಕನ್ನಡ ಸಿನಿಮಾರಂಗದಿಂದ ಬಣ್ಣದ ಲೋಕದ ಪಯಣ ಪ್ರಾರಂಭಿಸಿದ ಕಿರಿಕ್ ಸುಂದರಿ ಸದ್ಯ ತೆಲುಗು, ತಮಿಳು ಮತ್ತೆ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ಸ್ಟಾರ್ ಆಗಿ ಹೊರಹೊಮ್ಮುತ್ತಿದ್ದಂತೆ ರಶ್ಮಿಕಾ ಇದೀಗ ಹಿಂದಿಯಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿ ಮುಂಬೈ, ಹೈದರಾಬಾದ್, ಚೆನ್ನೈ ಅಂತ ಸದಾ ಓಡಾಡುತ್ತಿರುತ್ತಾರೆ. ಈ ನಡುವೆ ರಶ್ಮಿಕಾ ಮಂಡಿನೋವಿನಿಂದ ಬಳಲುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ರಶ್ಮಿಕಾ ಇದೀಗ ಭಾರತದ ಟಾಪ್ ಆರ್ಥೋಪಿಡಿಕ್ ಭೇಟಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆರ್ಥೋಪಿಡಿಕ್ ಅವರೇ ಬಹಿರಂಗ ಪಡಿಸಿದ್ದಾರೆ.
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಪುಷ್ಪ ನಟಿ ಸಮಯ ತೆಗೆದುಕೊಂಡು ವೈದ್ಯರನ್ನು ಭೇಟಿಯಾಗಿದ್ದಾರೆ. ಹೈದರಾಬಾದ್ ನಲ್ಲಿರುವ ಪ್ರಸಿದ್ಧ ಆರ್ಥೋಪಿಡಿಕ್ ಡಾ.ಗುರುವ ರೆಡ್ಡಿ ಅವರ ಆಸ್ಪತ್ರೆಯಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕಂಡಿದ್ದಾರೆ. ವೈದ್ಯರ ಪಕ್ಕ ನಿಂತು ಪೋಸ್ ನೀಡಿರುವ ರಶ್ಮಿಕಾ ಫೋಟೋ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ. ರಶ್ಮಿಕಾ ಅವರನ್ನು ಭೇಟಿಯಾದ ಬಗ್ಗೆ ಸ್ವತಃ ಡಾ.ಗುರುವ ರೆಡ್ಡಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ರಶ್ಮಿಕಾ ಮಂಡಿನೋವಿನಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಆತಂಕ ಪಡುವ ಅವಶ್ಯಕತೆ ಇಲ್ಲ, ಶೀಘ್ರದಲ್ಲೇ ಗುಣಮುಖ ಆಗುತ್ತಾರೆ ಎಂದು ವೈದ್ಯರು ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಪ್ರಸಿದ್ಧ ಆರ್ಥೊ ರಶ್ಮಿಕಾ ಜೊತೆ ಫೋಟೋ ಶೇರ್ ಮಾಡಿ, ಶ್ರೀವಲ್ಲಿ ನನ್ನನ್ನು ಭೇಟಿಯಾಗಿದ್ದಾರೆ. ನಾನು ಅವರ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ. ಪುಷ್ಪ ಸಿನಿಮಾದಲ್ಲಿ ರಶ್ಮಿಕಾ ಪಾತ್ರ ತುಂಬಾ ಇಷ್ಟವಾಯಿತು ಎಂದು ಹೇಳಿದ್ದಾರೆ. ಅಲ್ಲದೆ ಸದ್ಯದಲ್ಲೇ ಅಲ್ಲು ಅರ್ಜುನ್ ಭುಜದ ನೋವಿನಿಂದ ನನ್ನನ್ನು ಸಂಪರ್ಕ ಮಾಡಬಹುದು ಎಂದು ಕಾಮಿಡಿ ಮಾಡಿದ್ದಾರೆ.
<iframe src=”https://www.facebook.com/plugins/post.php?href=https%3A%2F%2Fwww.facebook.com%2Fdrguravareddy%2Fposts%2Fpfbid0XzQBmWsBjVdgEx3Mikcb2T4TStXXAnUvJLbC45iXgrtFGJwHFP9CoXcvFqxtEzswl&show_text=true&width=500″ width=”500″ height=”667″ style=”border:none;overflow:hidden” scrolling=”no” frameborder=”0″ allowfullscreen=”true” allow=”autoplay; clipboard-write; encrypted-media; picture-in-picture; web-share”></iframe>
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…
ಬೆಂಗಳೂರು: ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…