ಚಿತ್ರ ಮಂಜರಿ

ರಶ್ಮಿಕಾಗೆ ಮಂಡಿನೋವು : ಖ್ಯಾತ ವೈದ್ಯ ಗುರವ ರೆಡ್ಡಿ ಅವರಿಂದ ಚಿಕಿತ್ಸೆ

ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೌತ್ ಮತ್ತು ಬಾಲಿವುಡ್ ಎರಡೂ ಕಡೆ ರಶ್ಮಿಕಾ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಕನ್ನಡ ಸಿನಿಮಾರಂಗದಿಂದ ಬಣ್ಣದ ಲೋಕದ ಪಯಣ ಪ್ರಾರಂಭಿಸಿದ ಕಿರಿಕ್ ಸುಂದರಿ ಸದ್ಯ ತೆಲುಗು, ತಮಿಳು ಮತ್ತೆ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ಸ್ಟಾರ್ ಆಗಿ ಹೊರಹೊಮ್ಮುತ್ತಿದ್ದಂತೆ ರಶ್ಮಿಕಾ ಇದೀಗ ಹಿಂದಿಯಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿ ಮುಂಬೈ, ಹೈದರಾಬಾದ್, ಚೆನ್ನೈ ಅಂತ ಸದಾ ಓಡಾಡುತ್ತಿರುತ್ತಾರೆ. ಈ ನಡುವೆ ರಶ್ಮಿಕಾ ಮಂಡಿನೋವಿನಿಂದ ಬಳಲುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ರಶ್ಮಿಕಾ ಇದೀಗ ಭಾರತದ ಟಾಪ್ ಆರ್ಥೋಪಿಡಿಕ್ ಭೇಟಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆರ್ಥೋಪಿಡಿಕ್ ಅವರೇ ಬಹಿರಂಗ ಪಡಿಸಿದ್ದಾರೆ.

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಪುಷ್ಪ ನಟಿ ಸಮಯ ತೆಗೆದುಕೊಂಡು ವೈದ್ಯರನ್ನು ಭೇಟಿಯಾಗಿದ್ದಾರೆ. ಹೈದರಾಬಾದ್ ನಲ್ಲಿರುವ ಪ್ರಸಿದ್ಧ ಆರ್ಥೋಪಿಡಿಕ್ ಡಾ.ಗುರುವ ರೆಡ್ಡಿ ಅವರ ಆಸ್ಪತ್ರೆಯಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕಂಡಿದ್ದಾರೆ. ವೈದ್ಯರ ಪಕ್ಕ ನಿಂತು ಪೋಸ್ ನೀಡಿರುವ ರಶ್ಮಿಕಾ ಫೋಟೋ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ. ರಶ್ಮಿಕಾ ಅವರನ್ನು ಭೇಟಿಯಾದ ಬಗ್ಗೆ ಸ್ವತಃ ಡಾ.ಗುರುವ ರೆಡ್ಡಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ರಶ್ಮಿಕಾ ಮಂಡಿನೋವಿನಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಆತಂಕ ಪಡುವ ಅವಶ್ಯಕತೆ ಇಲ್ಲ, ಶೀಘ್ರದಲ್ಲೇ ಗುಣಮುಖ ಆಗುತ್ತಾರೆ ಎಂದು ವೈದ್ಯರು ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಪ್ರಸಿದ್ಧ ಆರ್ಥೊ ರಶ್ಮಿಕಾ ಜೊತೆ ಫೋಟೋ ಶೇರ್ ಮಾಡಿ, ಶ್ರೀವಲ್ಲಿ ನನ್ನನ್ನು ಭೇಟಿಯಾಗಿದ್ದಾರೆ. ನಾನು ಅವರ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ. ಪುಷ್ಪ ಸಿನಿಮಾದಲ್ಲಿ ರಶ್ಮಿಕಾ ಪಾತ್ರ ತುಂಬಾ ಇಷ್ಟವಾಯಿತು ಎಂದು ಹೇಳಿದ್ದಾರೆ. ಅಲ್ಲದೆ ಸದ್ಯದಲ್ಲೇ ಅಲ್ಲು ಅರ್ಜುನ್  ಭುಜದ ನೋವಿನಿಂದ ನನ್ನನ್ನು ಸಂಪರ್ಕ ಮಾಡಬಹುದು ಎಂದು ಕಾಮಿಡಿ ಮಾಡಿದ್ದಾರೆ.

<iframe src=”https://www.facebook.com/plugins/post.php?href=https%3A%2F%2Fwww.facebook.com%2Fdrguravareddy%2Fposts%2Fpfbid0XzQBmWsBjVdgEx3Mikcb2T4TStXXAnUvJLbC45iXgrtFGJwHFP9CoXcvFqxtEzswl&show_text=true&width=500″ width=”500″ height=”667″ style=”border:none;overflow:hidden” scrolling=”no” frameborder=”0″ allowfullscreen=”true” allow=”autoplay; clipboard-write; encrypted-media; picture-in-picture; web-share”></iframe>

andolana

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

5 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

5 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

5 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

5 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

5 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

6 hours ago