ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೌತ್ ಮತ್ತು ಬಾಲಿವುಡ್ ಎರಡೂ ಕಡೆ ರಶ್ಮಿಕಾ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಕನ್ನಡ ಸಿನಿಮಾರಂಗದಿಂದ ಬಣ್ಣದ ಲೋಕದ ಪಯಣ ಪ್ರಾರಂಭಿಸಿದ ಕಿರಿಕ್ ಸುಂದರಿ ಸದ್ಯ ತೆಲುಗು, ತಮಿಳು ಮತ್ತೆ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ಸ್ಟಾರ್ ಆಗಿ ಹೊರಹೊಮ್ಮುತ್ತಿದ್ದಂತೆ ರಶ್ಮಿಕಾ ಇದೀಗ ಹಿಂದಿಯಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿ ಮುಂಬೈ, ಹೈದರಾಬಾದ್, ಚೆನ್ನೈ ಅಂತ ಸದಾ ಓಡಾಡುತ್ತಿರುತ್ತಾರೆ. ಈ ನಡುವೆ ರಶ್ಮಿಕಾ ಮಂಡಿನೋವಿನಿಂದ ಬಳಲುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ರಶ್ಮಿಕಾ ಇದೀಗ ಭಾರತದ ಟಾಪ್ ಆರ್ಥೋಪಿಡಿಕ್ ಭೇಟಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆರ್ಥೋಪಿಡಿಕ್ ಅವರೇ ಬಹಿರಂಗ ಪಡಿಸಿದ್ದಾರೆ.
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಪುಷ್ಪ ನಟಿ ಸಮಯ ತೆಗೆದುಕೊಂಡು ವೈದ್ಯರನ್ನು ಭೇಟಿಯಾಗಿದ್ದಾರೆ. ಹೈದರಾಬಾದ್ ನಲ್ಲಿರುವ ಪ್ರಸಿದ್ಧ ಆರ್ಥೋಪಿಡಿಕ್ ಡಾ.ಗುರುವ ರೆಡ್ಡಿ ಅವರ ಆಸ್ಪತ್ರೆಯಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕಂಡಿದ್ದಾರೆ. ವೈದ್ಯರ ಪಕ್ಕ ನಿಂತು ಪೋಸ್ ನೀಡಿರುವ ರಶ್ಮಿಕಾ ಫೋಟೋ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ. ರಶ್ಮಿಕಾ ಅವರನ್ನು ಭೇಟಿಯಾದ ಬಗ್ಗೆ ಸ್ವತಃ ಡಾ.ಗುರುವ ರೆಡ್ಡಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ರಶ್ಮಿಕಾ ಮಂಡಿನೋವಿನಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಆತಂಕ ಪಡುವ ಅವಶ್ಯಕತೆ ಇಲ್ಲ, ಶೀಘ್ರದಲ್ಲೇ ಗುಣಮುಖ ಆಗುತ್ತಾರೆ ಎಂದು ವೈದ್ಯರು ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಪ್ರಸಿದ್ಧ ಆರ್ಥೊ ರಶ್ಮಿಕಾ ಜೊತೆ ಫೋಟೋ ಶೇರ್ ಮಾಡಿ, ಶ್ರೀವಲ್ಲಿ ನನ್ನನ್ನು ಭೇಟಿಯಾಗಿದ್ದಾರೆ. ನಾನು ಅವರ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ. ಪುಷ್ಪ ಸಿನಿಮಾದಲ್ಲಿ ರಶ್ಮಿಕಾ ಪಾತ್ರ ತುಂಬಾ ಇಷ್ಟವಾಯಿತು ಎಂದು ಹೇಳಿದ್ದಾರೆ. ಅಲ್ಲದೆ ಸದ್ಯದಲ್ಲೇ ಅಲ್ಲು ಅರ್ಜುನ್ ಭುಜದ ನೋವಿನಿಂದ ನನ್ನನ್ನು ಸಂಪರ್ಕ ಮಾಡಬಹುದು ಎಂದು ಕಾಮಿಡಿ ಮಾಡಿದ್ದಾರೆ.
<iframe src=”https://www.facebook.com/plugins/post.php?href=https%3A%2F%2Fwww.facebook.com%2Fdrguravareddy%2Fposts%2Fpfbid0XzQBmWsBjVdgEx3Mikcb2T4TStXXAnUvJLbC45iXgrtFGJwHFP9CoXcvFqxtEzswl&show_text=true&width=500″ width=”500″ height=”667″ style=”border:none;overflow:hidden” scrolling=”no” frameborder=”0″ allowfullscreen=”true” allow=”autoplay; clipboard-write; encrypted-media; picture-in-picture; web-share”></iframe>
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…