ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೌತ್ ಮತ್ತು ಬಾಲಿವುಡ್ ಎರಡೂ ಕಡೆ ರಶ್ಮಿಕಾ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಕನ್ನಡ ಸಿನಿಮಾರಂಗದಿಂದ ಬಣ್ಣದ ಲೋಕದ ಪಯಣ ಪ್ರಾರಂಭಿಸಿದ ಕಿರಿಕ್ ಸುಂದರಿ ಸದ್ಯ ತೆಲುಗು, ತಮಿಳು ಮತ್ತೆ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ಸ್ಟಾರ್ ಆಗಿ ಹೊರಹೊಮ್ಮುತ್ತಿದ್ದಂತೆ ರಶ್ಮಿಕಾ ಇದೀಗ ಹಿಂದಿಯಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿ ಮುಂಬೈ, ಹೈದರಾಬಾದ್, ಚೆನ್ನೈ ಅಂತ ಸದಾ ಓಡಾಡುತ್ತಿರುತ್ತಾರೆ. ಈ ನಡುವೆ ರಶ್ಮಿಕಾ ಮಂಡಿನೋವಿನಿಂದ ಬಳಲುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ರಶ್ಮಿಕಾ ಇದೀಗ ಭಾರತದ ಟಾಪ್ ಆರ್ಥೋಪಿಡಿಕ್ ಭೇಟಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆರ್ಥೋಪಿಡಿಕ್ ಅವರೇ ಬಹಿರಂಗ ಪಡಿಸಿದ್ದಾರೆ.
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಪುಷ್ಪ ನಟಿ ಸಮಯ ತೆಗೆದುಕೊಂಡು ವೈದ್ಯರನ್ನು ಭೇಟಿಯಾಗಿದ್ದಾರೆ. ಹೈದರಾಬಾದ್ ನಲ್ಲಿರುವ ಪ್ರಸಿದ್ಧ ಆರ್ಥೋಪಿಡಿಕ್ ಡಾ.ಗುರುವ ರೆಡ್ಡಿ ಅವರ ಆಸ್ಪತ್ರೆಯಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕಂಡಿದ್ದಾರೆ. ವೈದ್ಯರ ಪಕ್ಕ ನಿಂತು ಪೋಸ್ ನೀಡಿರುವ ರಶ್ಮಿಕಾ ಫೋಟೋ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ. ರಶ್ಮಿಕಾ ಅವರನ್ನು ಭೇಟಿಯಾದ ಬಗ್ಗೆ ಸ್ವತಃ ಡಾ.ಗುರುವ ರೆಡ್ಡಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ರಶ್ಮಿಕಾ ಮಂಡಿನೋವಿನಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಆತಂಕ ಪಡುವ ಅವಶ್ಯಕತೆ ಇಲ್ಲ, ಶೀಘ್ರದಲ್ಲೇ ಗುಣಮುಖ ಆಗುತ್ತಾರೆ ಎಂದು ವೈದ್ಯರು ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಪ್ರಸಿದ್ಧ ಆರ್ಥೊ ರಶ್ಮಿಕಾ ಜೊತೆ ಫೋಟೋ ಶೇರ್ ಮಾಡಿ, ಶ್ರೀವಲ್ಲಿ ನನ್ನನ್ನು ಭೇಟಿಯಾಗಿದ್ದಾರೆ. ನಾನು ಅವರ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ. ಪುಷ್ಪ ಸಿನಿಮಾದಲ್ಲಿ ರಶ್ಮಿಕಾ ಪಾತ್ರ ತುಂಬಾ ಇಷ್ಟವಾಯಿತು ಎಂದು ಹೇಳಿದ್ದಾರೆ. ಅಲ್ಲದೆ ಸದ್ಯದಲ್ಲೇ ಅಲ್ಲು ಅರ್ಜುನ್ ಭುಜದ ನೋವಿನಿಂದ ನನ್ನನ್ನು ಸಂಪರ್ಕ ಮಾಡಬಹುದು ಎಂದು ಕಾಮಿಡಿ ಮಾಡಿದ್ದಾರೆ.
<iframe src=”https://www.facebook.com/plugins/post.php?href=https%3A%2F%2Fwww.facebook.com%2Fdrguravareddy%2Fposts%2Fpfbid0XzQBmWsBjVdgEx3Mikcb2T4TStXXAnUvJLbC45iXgrtFGJwHFP9CoXcvFqxtEzswl&show_text=true&width=500″ width=”500″ height=”667″ style=”border:none;overflow:hidden” scrolling=”no” frameborder=”0″ allowfullscreen=”true” allow=”autoplay; clipboard-write; encrypted-media; picture-in-picture; web-share”></iframe>
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…