ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.
ಮನೋರಂಜನ್ ಅವರು ಸಂಗೀತಾ ದೀಪಕ್ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದು ಸ್ಯಾಂಡಲ್ವುಡ್ ನಲ್ಲಿ ಸಂತಸಮನೆ ಮಾಡಿದೆ.
ಎರಡು ಕುಟುಂಬದ ಸದಸ್ಯೆರೆಲ್ಲರೂ ಭಾಗವಹಿಸಿದ್ದು ಇಂದು ಮಾಂಗಲ್ಯಧಾರಣೆಯಾಗಿದೆ. ಚಿತ್ರರಂಗದ ಕೆಲ ಪ್ರಮುಖ ವ್ಯಕ್ತಿಗಳು ಇಂದು ಭಾಗವಹಿಸಿದ್ದು, ಚಿತ್ರರಂಗದವರಿಗೊಸ್ಕರ ನಟ ರವಿಚಂದ್ರನ್ ಅವರು ಆರತಕ್ಷತೆ ಕಾರ್ಯಕ್ರಮವನ್ನು ಕೂಡ ಆಯೋಜಿಸಿದ್ದಾರೆ.
ಇದು ಅರೆಂಜ್ ಮ್ಯಾರೇಜ್
‘ಇದೊಂದು ಅರೆಂಜ್ ಮ್ಯಾರೇಜ್ ಆಗಿದೆ. ನಾನು ಮದುವೆ ಆಗಲಿರುವ ಹುಡುಗಿ ಸಂಗೀತಾ ನಮಗೆ ದೂರದ ಸಂಬಂಧಿ ಆಗಬೇಕು. ನನಗೆ ಈಗ 34 ವರ್ಷ. ಹಾಗೇ ನೋಡಿದ್ರೆ, ನಮ್ಮ ಕುಟುಂಬದಲ್ಲಿ ಹುಡುಗ ಮತ್ತು ಹುಡುಗಿಯರ ಮದುವೆ 27ರ ಒಳಗೆಯೇ ನಡೆಯುತ್ತದೆ. ನಾನು ಮಾತ್ರ ಇಷ್ಟು ತಡವಾಗಿ ಮದುವೆ ಆಗುತ್ತಿದ್ದೇನೆ’ ಎಂದು ಮನೋರಂಜನ್ ಹೇಳಿದ್ದರು.
ಅಂದಹಾಗೆ, ಮನುಗೆ ಮದುವೆ ಮಾಡಲು ತಾಯಿ ಸುಮತಿ ರವಿಚಂದ್ರನ್ ಅವರು ವಧುವಿನ ಹುಡುಕಾಟದಲ್ಲಿದ್ದರು. ಆಗ ಸಂಗೀತಾ ಅವರ ಪ್ರಪೋಸಲ್ ಬಂದಿತ್ತು. ಇದೀಗ ಎರಡು ಕುಟುಂಬಗಳು ಒಪ್ಪಿ ಮದುಮೆ ಸಂಭ್ರಮದಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ.
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…