ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.
ಮನೋರಂಜನ್ ಅವರು ಸಂಗೀತಾ ದೀಪಕ್ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದು ಸ್ಯಾಂಡಲ್ವುಡ್ ನಲ್ಲಿ ಸಂತಸಮನೆ ಮಾಡಿದೆ.
ಎರಡು ಕುಟುಂಬದ ಸದಸ್ಯೆರೆಲ್ಲರೂ ಭಾಗವಹಿಸಿದ್ದು ಇಂದು ಮಾಂಗಲ್ಯಧಾರಣೆಯಾಗಿದೆ. ಚಿತ್ರರಂಗದ ಕೆಲ ಪ್ರಮುಖ ವ್ಯಕ್ತಿಗಳು ಇಂದು ಭಾಗವಹಿಸಿದ್ದು, ಚಿತ್ರರಂಗದವರಿಗೊಸ್ಕರ ನಟ ರವಿಚಂದ್ರನ್ ಅವರು ಆರತಕ್ಷತೆ ಕಾರ್ಯಕ್ರಮವನ್ನು ಕೂಡ ಆಯೋಜಿಸಿದ್ದಾರೆ.
ಇದು ಅರೆಂಜ್ ಮ್ಯಾರೇಜ್
‘ಇದೊಂದು ಅರೆಂಜ್ ಮ್ಯಾರೇಜ್ ಆಗಿದೆ. ನಾನು ಮದುವೆ ಆಗಲಿರುವ ಹುಡುಗಿ ಸಂಗೀತಾ ನಮಗೆ ದೂರದ ಸಂಬಂಧಿ ಆಗಬೇಕು. ನನಗೆ ಈಗ 34 ವರ್ಷ. ಹಾಗೇ ನೋಡಿದ್ರೆ, ನಮ್ಮ ಕುಟುಂಬದಲ್ಲಿ ಹುಡುಗ ಮತ್ತು ಹುಡುಗಿಯರ ಮದುವೆ 27ರ ಒಳಗೆಯೇ ನಡೆಯುತ್ತದೆ. ನಾನು ಮಾತ್ರ ಇಷ್ಟು ತಡವಾಗಿ ಮದುವೆ ಆಗುತ್ತಿದ್ದೇನೆ’ ಎಂದು ಮನೋರಂಜನ್ ಹೇಳಿದ್ದರು.
ಅಂದಹಾಗೆ, ಮನುಗೆ ಮದುವೆ ಮಾಡಲು ತಾಯಿ ಸುಮತಿ ರವಿಚಂದ್ರನ್ ಅವರು ವಧುವಿನ ಹುಡುಕಾಟದಲ್ಲಿದ್ದರು. ಆಗ ಸಂಗೀತಾ ಅವರ ಪ್ರಪೋಸಲ್ ಬಂದಿತ್ತು. ಇದೀಗ ಎರಡು ಕುಟುಂಬಗಳು ಒಪ್ಪಿ ಮದುಮೆ ಸಂಭ್ರಮದಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…