ಚಿತ್ರ ಮಂಜರಿ

ಸುದೀಪ್‌ ಜೊತೆ ಸಂಧಾನಕ್ಕೆ ಸಿದ್ಧ: ನಿರ್ಮಾಪಕ ಎಂಎನ್​ ಕುಮಾರ್

ಬೆಂಗಳೂರು: ನಟ ಕಿಚ್ಚ ಸುದೀಪ್‌ ಹಾಗೂ ನಿರ್ಮಾಪಕ ಎಂಎನ್​ ಕುಮಾರ್ ನಡುವಿನ ತಿಕ್ಕಾಟ ಮುಂದುವರಿದಿದೆ. ಸುದೀಪ್ ಅವರು ಹಣ ಪಡೆದು, ಕಾಲ್​ಶೀಟ್ ನೀಡಿಲ್ಲ ಎಂದು ಕುಮಾರ್ ಆರೋಪಿಸಿದ್ದರು. ಆದರೆ, ಸುದೀಪ್ ಅವರು ಇದನ್ನು ತಳ್ಳಿ ಹಾಕಿದ್ದರು. ಈಗ ಅವರು ಕುಮಾರ್‌ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ್ದಾರೆ. ಈ ಬೆನ್ನಲ್ಲೇ ಕುಮಾರ್ ಅವರು ಸುದೀಪ್ ವಿರುದ್ಧ ಫಿಲ್ಮ್ ಚೇಂಬರ್ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ. ಅವರಿಗೆ ನಿರ್ಮಾಪಕರ ಸಂಘದ ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ಮೊದಲಾದವರು ಸಾಥ್ ನೀಡಿದ್ದಾರೆ.

‘ನನಗೆ ಆಗಿರುವ ಸಮಸ್ಯೆ ಎಲ್ಲರಿಗೂ ಗೊತ್ತು. ಚಿತ್ರರಂಗಕ್ಕೆ ಫಿಲ್ಮ್ ಚೇಂಬರ್ ಒಂದು‌ಮನೆ ಇದ್ದಹಾಗೆ. ಹೀಗಾಗಿ‌ ನನ್ನ ಸಮಸ್ಯೆಯನ್ನು ಇಲ್ಲಿಯೇ ಬಗೆಹರಿಸಿಕೊಳ್ಳಲು ಬಂದಿದ್ದೇನೆ. ಸುದೀಪ್ ಅವರ ಬಗ್ಗೆ ನಾನು ಎಲ್ಲಿಯೂ ಕೆಟ್ಟದಾಗಿ ‌ಮಾತನಾಡಿಲ್ಲ. ನಮಗೆ ಸರಿಯಾದ ಸ್ಪಂದನೆ‌ ಸಿಗುತ್ತಿಲ್ಲ ಎಂದಷ್ಟೇ ಹೇಳಿದ್ದೇನೆ. ಸಮಸ್ಯೆ ಬಗೆಹರಿಸಿಕೊಳ್ಳುವ ತನಕ ಇಲ್ಲಿಯೇ ಧರಣಿ ಮಾಡುತ್ತೇನೆ’ ಎಂದು ಕುಮಾರ್ ಹೇಳಿದ್ದಾರೆ.

‘ನಾನು ಯಾರ ಸಹಾಯವನ್ನೂ ಕೇಳಿಲ್ಲ. ನನ್ನದು ಏನಿದೆ ಅದನ್ನು ಕ್ಲಿಯರ್ ಮಾಡಿದರೆ ಸಾಕು. ನಾವು ನಿರ್ಮಾಪಕರು, ಸಾಕಷ್ಟು‌ ಜನರನ್ನು ಬೆಳೆಸಿದ್ದೀವಿ. ಎಲ್ಲರ ಗೌರವವೂ ಉಳಿಯಬೇಕು. ನನಗೆ ತೊಂದರೆಯಾದಾಗ ನಾನು ಯಾರ ಮುಖಾಂತರ ಕೇಳಬೇಕು? ಮಾಧ್ಯಮದವರ ಮುಂದೆಯೇ ಕೇಳಬೇಕು. ನಾನು ಹಾಗೆಯೇ ಮಾಡಿದ್ದೇನೆ. ಅವರು ಸಭೆಗೆ ಬರಲಿ. ಆಗ ಎಲ್ಲಾ ದಾಖಲೆಗಳನ್ನು ನೀಡುತ್ತೇನೆ’ ಎಂದಿದ್ದಾರೆ ಕುಮಾರ್.

‘ರಾಜಿ ಸಂಧಾನಕ್ಕೆ ನಾವು ರೆಡಿ. ಅವರು ಕರೆಯಬೇಕಿತ್ತು, ಆದರೆ ನಾವೇ ಕರೆಯುತ್ತೀದ್ದೇವೆ. ಪ್ರೀತಿಯಿಂದ ನಡೆದರೆ ಮಾತ್ರ ವ್ಯವಹಾರ. ಯಾರನ್ನು, ಯಾವುದಕ್ಕೂ ಬಲವಂತ ಮಾಡುವುದಕ್ಕೆ ಆಗುವುದಿಲ್ಲ. ನಮ್ಮಲ್ಲಿರುವ ಹಿರಿಯರು ಅವರಿಗೆ ಮಾರ್ಗದರ್ಶನ ನೀಡಬೇಕು. ನಮ್ಮ ಅಧ್ಯಕ್ಷರು ಬಂದ ಮೇಲೆ ಶಿವಣ್ಣ ಭೇಟಿಯ ಬಗ್ಗೆ ನಿರ್ಧಾರ ಮಾಡುತ್ತೇವೆ. ಸೂರಪ್ಪ ಬಾಬು ಹಿಂದೆ ನಿಂತು ಮಾಡಿಸುತ್ತಿರುವ ವಿಚಾರ ಸುಳ್ಳು’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

andolanait

Recent Posts

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

34 mins ago

ಕಳಾಹೀನವಾಗಿದೆ ರಾಜೀವ್ ನಗರದ ಈ ಉದ್ಯಾನ!

ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…

39 mins ago

ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಕಾಟ

ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…

44 mins ago

ಕೊಡಗು ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಹತ್ತಾರು ಸಮಸ್ಯೆ

ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…

50 mins ago

3 ದಿನಗಳಲ್ಲಿ ಎಲ್ಲರ ಬಯೋಮೆಟ್ರಿಕ್ ಆಗುತ್ತಾ.?

ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ  ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…

55 mins ago

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

8 hours ago