ಚಿತ್ರ ಮಂಜರಿ

ಸುದೀಪ್‌ ಜೊತೆ ಸಂಧಾನಕ್ಕೆ ಸಿದ್ಧ: ನಿರ್ಮಾಪಕ ಎಂಎನ್​ ಕುಮಾರ್

ಬೆಂಗಳೂರು: ನಟ ಕಿಚ್ಚ ಸುದೀಪ್‌ ಹಾಗೂ ನಿರ್ಮಾಪಕ ಎಂಎನ್​ ಕುಮಾರ್ ನಡುವಿನ ತಿಕ್ಕಾಟ ಮುಂದುವರಿದಿದೆ. ಸುದೀಪ್ ಅವರು ಹಣ ಪಡೆದು, ಕಾಲ್​ಶೀಟ್ ನೀಡಿಲ್ಲ ಎಂದು ಕುಮಾರ್ ಆರೋಪಿಸಿದ್ದರು. ಆದರೆ, ಸುದೀಪ್ ಅವರು ಇದನ್ನು ತಳ್ಳಿ ಹಾಕಿದ್ದರು. ಈಗ ಅವರು ಕುಮಾರ್‌ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ್ದಾರೆ. ಈ ಬೆನ್ನಲ್ಲೇ ಕುಮಾರ್ ಅವರು ಸುದೀಪ್ ವಿರುದ್ಧ ಫಿಲ್ಮ್ ಚೇಂಬರ್ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ. ಅವರಿಗೆ ನಿರ್ಮಾಪಕರ ಸಂಘದ ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ಮೊದಲಾದವರು ಸಾಥ್ ನೀಡಿದ್ದಾರೆ.

‘ನನಗೆ ಆಗಿರುವ ಸಮಸ್ಯೆ ಎಲ್ಲರಿಗೂ ಗೊತ್ತು. ಚಿತ್ರರಂಗಕ್ಕೆ ಫಿಲ್ಮ್ ಚೇಂಬರ್ ಒಂದು‌ಮನೆ ಇದ್ದಹಾಗೆ. ಹೀಗಾಗಿ‌ ನನ್ನ ಸಮಸ್ಯೆಯನ್ನು ಇಲ್ಲಿಯೇ ಬಗೆಹರಿಸಿಕೊಳ್ಳಲು ಬಂದಿದ್ದೇನೆ. ಸುದೀಪ್ ಅವರ ಬಗ್ಗೆ ನಾನು ಎಲ್ಲಿಯೂ ಕೆಟ್ಟದಾಗಿ ‌ಮಾತನಾಡಿಲ್ಲ. ನಮಗೆ ಸರಿಯಾದ ಸ್ಪಂದನೆ‌ ಸಿಗುತ್ತಿಲ್ಲ ಎಂದಷ್ಟೇ ಹೇಳಿದ್ದೇನೆ. ಸಮಸ್ಯೆ ಬಗೆಹರಿಸಿಕೊಳ್ಳುವ ತನಕ ಇಲ್ಲಿಯೇ ಧರಣಿ ಮಾಡುತ್ತೇನೆ’ ಎಂದು ಕುಮಾರ್ ಹೇಳಿದ್ದಾರೆ.

‘ನಾನು ಯಾರ ಸಹಾಯವನ್ನೂ ಕೇಳಿಲ್ಲ. ನನ್ನದು ಏನಿದೆ ಅದನ್ನು ಕ್ಲಿಯರ್ ಮಾಡಿದರೆ ಸಾಕು. ನಾವು ನಿರ್ಮಾಪಕರು, ಸಾಕಷ್ಟು‌ ಜನರನ್ನು ಬೆಳೆಸಿದ್ದೀವಿ. ಎಲ್ಲರ ಗೌರವವೂ ಉಳಿಯಬೇಕು. ನನಗೆ ತೊಂದರೆಯಾದಾಗ ನಾನು ಯಾರ ಮುಖಾಂತರ ಕೇಳಬೇಕು? ಮಾಧ್ಯಮದವರ ಮುಂದೆಯೇ ಕೇಳಬೇಕು. ನಾನು ಹಾಗೆಯೇ ಮಾಡಿದ್ದೇನೆ. ಅವರು ಸಭೆಗೆ ಬರಲಿ. ಆಗ ಎಲ್ಲಾ ದಾಖಲೆಗಳನ್ನು ನೀಡುತ್ತೇನೆ’ ಎಂದಿದ್ದಾರೆ ಕುಮಾರ್.

‘ರಾಜಿ ಸಂಧಾನಕ್ಕೆ ನಾವು ರೆಡಿ. ಅವರು ಕರೆಯಬೇಕಿತ್ತು, ಆದರೆ ನಾವೇ ಕರೆಯುತ್ತೀದ್ದೇವೆ. ಪ್ರೀತಿಯಿಂದ ನಡೆದರೆ ಮಾತ್ರ ವ್ಯವಹಾರ. ಯಾರನ್ನು, ಯಾವುದಕ್ಕೂ ಬಲವಂತ ಮಾಡುವುದಕ್ಕೆ ಆಗುವುದಿಲ್ಲ. ನಮ್ಮಲ್ಲಿರುವ ಹಿರಿಯರು ಅವರಿಗೆ ಮಾರ್ಗದರ್ಶನ ನೀಡಬೇಕು. ನಮ್ಮ ಅಧ್ಯಕ್ಷರು ಬಂದ ಮೇಲೆ ಶಿವಣ್ಣ ಭೇಟಿಯ ಬಗ್ಗೆ ನಿರ್ಧಾರ ಮಾಡುತ್ತೇವೆ. ಸೂರಪ್ಪ ಬಾಬು ಹಿಂದೆ ನಿಂತು ಮಾಡಿಸುತ್ತಿರುವ ವಿಚಾರ ಸುಳ್ಳು’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

andolanait

Recent Posts

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

2 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

5 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

5 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

5 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

5 hours ago