ಚಿತ್ರ ಮಂಜರಿ

ಸುದೀಪ್‌ ಜೊತೆ ಸಂಧಾನಕ್ಕೆ ಸಿದ್ಧ: ನಿರ್ಮಾಪಕ ಎಂಎನ್​ ಕುಮಾರ್

ಬೆಂಗಳೂರು: ನಟ ಕಿಚ್ಚ ಸುದೀಪ್‌ ಹಾಗೂ ನಿರ್ಮಾಪಕ ಎಂಎನ್​ ಕುಮಾರ್ ನಡುವಿನ ತಿಕ್ಕಾಟ ಮುಂದುವರಿದಿದೆ. ಸುದೀಪ್ ಅವರು ಹಣ ಪಡೆದು, ಕಾಲ್​ಶೀಟ್ ನೀಡಿಲ್ಲ ಎಂದು ಕುಮಾರ್ ಆರೋಪಿಸಿದ್ದರು. ಆದರೆ, ಸುದೀಪ್ ಅವರು ಇದನ್ನು ತಳ್ಳಿ ಹಾಕಿದ್ದರು. ಈಗ ಅವರು ಕುಮಾರ್‌ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ್ದಾರೆ. ಈ ಬೆನ್ನಲ್ಲೇ ಕುಮಾರ್ ಅವರು ಸುದೀಪ್ ವಿರುದ್ಧ ಫಿಲ್ಮ್ ಚೇಂಬರ್ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ. ಅವರಿಗೆ ನಿರ್ಮಾಪಕರ ಸಂಘದ ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ಮೊದಲಾದವರು ಸಾಥ್ ನೀಡಿದ್ದಾರೆ.

‘ನನಗೆ ಆಗಿರುವ ಸಮಸ್ಯೆ ಎಲ್ಲರಿಗೂ ಗೊತ್ತು. ಚಿತ್ರರಂಗಕ್ಕೆ ಫಿಲ್ಮ್ ಚೇಂಬರ್ ಒಂದು‌ಮನೆ ಇದ್ದಹಾಗೆ. ಹೀಗಾಗಿ‌ ನನ್ನ ಸಮಸ್ಯೆಯನ್ನು ಇಲ್ಲಿಯೇ ಬಗೆಹರಿಸಿಕೊಳ್ಳಲು ಬಂದಿದ್ದೇನೆ. ಸುದೀಪ್ ಅವರ ಬಗ್ಗೆ ನಾನು ಎಲ್ಲಿಯೂ ಕೆಟ್ಟದಾಗಿ ‌ಮಾತನಾಡಿಲ್ಲ. ನಮಗೆ ಸರಿಯಾದ ಸ್ಪಂದನೆ‌ ಸಿಗುತ್ತಿಲ್ಲ ಎಂದಷ್ಟೇ ಹೇಳಿದ್ದೇನೆ. ಸಮಸ್ಯೆ ಬಗೆಹರಿಸಿಕೊಳ್ಳುವ ತನಕ ಇಲ್ಲಿಯೇ ಧರಣಿ ಮಾಡುತ್ತೇನೆ’ ಎಂದು ಕುಮಾರ್ ಹೇಳಿದ್ದಾರೆ.

‘ನಾನು ಯಾರ ಸಹಾಯವನ್ನೂ ಕೇಳಿಲ್ಲ. ನನ್ನದು ಏನಿದೆ ಅದನ್ನು ಕ್ಲಿಯರ್ ಮಾಡಿದರೆ ಸಾಕು. ನಾವು ನಿರ್ಮಾಪಕರು, ಸಾಕಷ್ಟು‌ ಜನರನ್ನು ಬೆಳೆಸಿದ್ದೀವಿ. ಎಲ್ಲರ ಗೌರವವೂ ಉಳಿಯಬೇಕು. ನನಗೆ ತೊಂದರೆಯಾದಾಗ ನಾನು ಯಾರ ಮುಖಾಂತರ ಕೇಳಬೇಕು? ಮಾಧ್ಯಮದವರ ಮುಂದೆಯೇ ಕೇಳಬೇಕು. ನಾನು ಹಾಗೆಯೇ ಮಾಡಿದ್ದೇನೆ. ಅವರು ಸಭೆಗೆ ಬರಲಿ. ಆಗ ಎಲ್ಲಾ ದಾಖಲೆಗಳನ್ನು ನೀಡುತ್ತೇನೆ’ ಎಂದಿದ್ದಾರೆ ಕುಮಾರ್.

‘ರಾಜಿ ಸಂಧಾನಕ್ಕೆ ನಾವು ರೆಡಿ. ಅವರು ಕರೆಯಬೇಕಿತ್ತು, ಆದರೆ ನಾವೇ ಕರೆಯುತ್ತೀದ್ದೇವೆ. ಪ್ರೀತಿಯಿಂದ ನಡೆದರೆ ಮಾತ್ರ ವ್ಯವಹಾರ. ಯಾರನ್ನು, ಯಾವುದಕ್ಕೂ ಬಲವಂತ ಮಾಡುವುದಕ್ಕೆ ಆಗುವುದಿಲ್ಲ. ನಮ್ಮಲ್ಲಿರುವ ಹಿರಿಯರು ಅವರಿಗೆ ಮಾರ್ಗದರ್ಶನ ನೀಡಬೇಕು. ನಮ್ಮ ಅಧ್ಯಕ್ಷರು ಬಂದ ಮೇಲೆ ಶಿವಣ್ಣ ಭೇಟಿಯ ಬಗ್ಗೆ ನಿರ್ಧಾರ ಮಾಡುತ್ತೇವೆ. ಸೂರಪ್ಪ ಬಾಬು ಹಿಂದೆ ನಿಂತು ಮಾಡಿಸುತ್ತಿರುವ ವಿಚಾರ ಸುಳ್ಳು’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

7 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

8 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

9 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

9 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

10 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

11 hours ago